AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಶೇ 75 ಕೋಟಾ; ಹರ್ಯಾಣ ಸರ್ಕಾರದ ಕಾನೂನು ರದ್ದು

ಹರ್ಯಾಣ ರಾಜ್ಯ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಕಾಯಿದೆ, 2020, ₹30,000 ಕ್ಕಿಂತ ಕಡಿಮೆ ಮಾಸಿಕ ವೇತನವನ್ನು ನೀಡುವ ಖಾಸಗಿ ವಲಯದ ಉದ್ಯೋಗಗಳಲ್ಲಿ ಸ್ಥಳೀಯ ಯುವಕರಿಗೆ 75% ಮೀಸಲಾತಿಯನ್ನು ಒದಗಿಸಿದೆ. ಇದು ಖಾಸಗಿ ಕಂಪನಿಗಳು, ಸೊಸೈಟಿಗಳು, ಟ್ರಸ್ಟ್‌ಗಳು ಮತ್ತು ಪಾಲುದಾರಿಕೆ ಸಂಸ್ಥೆಗಳನ್ನು ಒಳಗೊಂಡಿದೆ. ಕಾನೂನು 10 ವರ್ಷಗಳವರೆಗೆ ಅನ್ವಯಿಸುತ್ತದೆ.

ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಶೇ 75 ಕೋಟಾ; ಹರ್ಯಾಣ ಸರ್ಕಾರದ ಕಾನೂನು ರದ್ದು
ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on: Nov 17, 2023 | 7:56 PM

Share

ಚಂಡೀಗಢ ನವೆಂಬರ್  17: ನಿವಾಸ ಪ್ರಮಾಣಪತ್ರ ಹೊಂದಿರುವ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಖಾಸಗಿ ವಲಯದಲ್ಲಿ 75% ಮೀಸಲಾತಿ ನೀಡುವ ಮನೋಹರ್ ಲಾಲ್ ಖಟ್ಟರ್(Manohar Lal Khattar) ಅವರ ಸರ್ಕಾರಿ ಕಾನೂನನ್ನು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ (Punjab and Haryana High Court) ಶುಕ್ರವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಜಿಎಸ್ ಸಂಧವಾಲಿಯಾ ಮತ್ತು ಹರ್‌ಪ್ರೀತ್ ಕೌರ್ ಜೀವನ್ ಅವರಿದ್ದ ಪೀಠ ಈ ಆದೇಶ ನೀಡಿದೆ. 2021 ರಲ್ಲಿ ಗುರ್ಗಾಂವ್ ಇಂಡಸ್ಟ್ರಿಯಲ್ ಅಸೋಸಿಯೇಷನ್ ಸೇರಿದಂತೆ ಅನೇಕ ಉದ್ಯಮ ಸಂಸ್ಥೆಗಳು ಸಲ್ಲಿಸಿದ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ.

ಹರ್ಯಾಣ ರಾಜ್ಯ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಕಾಯಿದೆ, 2020, ₹30,000 ಕ್ಕಿಂತ ಕಡಿಮೆ ಮಾಸಿಕ ವೇತನವನ್ನು ನೀಡುವ ಖಾಸಗಿ ವಲಯದ ಉದ್ಯೋಗಗಳಲ್ಲಿ ಸ್ಥಳೀಯ ಯುವಕರಿಗೆ 75% ಮೀಸಲಾತಿಯನ್ನು ಒದಗಿಸಿದೆ. ಇದು ಖಾಸಗಿ ಕಂಪನಿಗಳು, ಸೊಸೈಟಿಗಳು, ಟ್ರಸ್ಟ್‌ಗಳು ಮತ್ತು ಪಾಲುದಾರಿಕೆ ಸಂಸ್ಥೆಗಳನ್ನು ಒಳಗೊಂಡಿದೆ. ಕಾನೂನು 10 ವರ್ಷಗಳವರೆಗೆ ಅನ್ವಯಿಸುತ್ತದೆ.

ಉದ್ಯಮ ಸಂಸ್ಥೆಗಳು ಕಾನೂನು ಅಸಾಂವಿಧಾನಿಕವಾಗಿದೆ. ವ್ಯಾಪಾರಗಳು ಬೆಳೆಯಲು ಮತ್ತು ಸ್ಪರ್ಧಾತ್ಮಕವಾಗಿ ಉಳಿಯಲು ಅಡಿಪಾಯವಾಗಿ ಕಾರ್ಯನಿರ್ವಹಿಸುವ ಅರ್ಹತೆಯ ಮೂಲ ತತ್ವಕ್ಕೆ ವಿರುದ್ಧವಾಗಿದೆ ಎಂದು ವಾದಿಸಿದವು. ರಾಜ್ಯದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕದ ನಂತರ ಇದು ಉತ್ಪಾದಕತೆ, ಕೈಗಾರಿಕಾ ಸ್ಪರ್ಧಾತ್ಮಕತೆ ಮತ್ತು ಕೈಗಾರಿಕೆಗಳ ನಂತರದ ಚೇತರಿಕೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಅರ್ಜಿದಾರರು ವಾದಿಸಿದರು.

ಇದನ್ನೂ ಓದಿ: ನಾನು ರಾಜೀನಾಮೆ ನೀಡಬೇಕೇ ಅಥವಾ ಜೈಲಿನಿಂದ ಸರ್ಕಾರ ನಡೆಸಬೇಕೇ, ಜನರನ್ನು ಕೇಳಿ: ಕೇಜ್ರಿವಾಲ್

ಮತ್ತೊಂದೆಡೆ, ಖಟ್ಟರ್ ಸರ್ಕಾರವು ಕಾನೂನು ಕೇವಲ “ಭೌಗೋಳಿಕ ವರ್ಗೀಕರಣ” ವನ್ನು ಮಾಡುತ್ತದೆ, ಅದು ಸಂವಿಧಾನದ ಅಡಿಯಲ್ಲಿ ಉತ್ತಮವಾಗಿ ಅನುಮತಿಸಲ್ಪಟ್ಟಿದೆ ಎಂದು ವಾದಿಸಿತ್ತು. ಇದು ರಾಜ್ಯದಲ್ಲಿ ನೆಲೆಸಿರುವ ಜನರ ಜೀವನ / ಜೀವನೋಪಾಯದ ಹಕ್ಕನ್ನು ರಕ್ಷಿಸುವುದು ಮತ್ತು ಅವರ ಆರೋಗ್ಯ, ಜೀವನ ಪರಿಸ್ಥಿತಿ ಮತ್ತು ಉದ್ಯೋಗದ ಹಕ್ಕನ್ನು ರಕ್ಷಿಸುವುದು” ಎಂದು ಅದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ