AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಯಾಬ್ ಸಿಂಗ್ ಸೈನಿ ಸಂಪುಟಕ್ಕೆ ಹರಿಯಾಣ ಸಚಿವ ರಂಜಿತ್ ಸಿಂಗ್ ಚೌತಾಲಾ ರಾಜೀನಾಮೆ

Haryana Elections: ಹರಿಯಾಣ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಮುಂಬರುವ ಹರಿಯಾಣ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯಿಂದ ಬಿಜೆಪಿ ಹೈಕಮಾಂಡ್ 9 ಹಾಲಿ ಶಾಸಕರನ್ನು ಕೈಬಿಟ್ಟಿದೆ. ಈ ಹಿನ್ನೆಲೆಯಲ್ಲಿ ಹರಿಯಾಣ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ.

ನಯಾಬ್ ಸಿಂಗ್ ಸೈನಿ ಸಂಪುಟಕ್ಕೆ ಹರಿಯಾಣ ಸಚಿವ ರಂಜಿತ್ ಸಿಂಗ್ ಚೌತಾಲಾ ರಾಜೀನಾಮೆ
ರಣಜಿತ್ ಸಿಂಗ್ ಚೌತಾಲಾ
ಸುಷ್ಮಾ ಚಕ್ರೆ
|

Updated on: Sep 05, 2024 | 2:52 PM

Share

ನವದೆಹಲಿ: ಹರಿಯಾಣ ಕ್ಯಾಬಿನೆಟ್ ಸಚಿವ ಚೌಧರಿ ರಂಜಿತ್ ಸಿಂಗ್ ಚೌತಾಲಾ ಅವರು ಸಂಪುಟದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಣಜಿತ್ ಸಿಂಗ್ ಚೌತಾಲಾ ಅವರಿಗೆ ರಾನಿಯಾ ವಿಧಾನಸಭೆಯಿಂದ ಟಿಕೆಟ್ ನೀಡದಿದ್ದಕ್ಕಾಗಿ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದ್ದರು. ಮುಂಬರುವ ಹರಿಯಾಣ ಚುನಾವಣೆಗೆ ಬಿಜೆಪಿ ಹೈಕಮಾಂಡ್ 67 ಅಭ್ಯರ್ಥಿಗಳ ಮೊದಲ ಪಟ್ಟಿಯಿಂದ 9 ಹಾಲಿ ಶಾಸಕರನ್ನು ಕೈಬಿಟ್ಟಿದೆ.

ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ರಣಜಿತ್ ಸಿಂಗ್ ಚೌತಾಲಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಯಾವುದೇ ಬೆಲೆ ತೆತ್ತಾದರೂ ನಾನು ರಾನಿಯಾ ಅಸೆಂಬ್ಲಿಯಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಚೌಟಾಲಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ದಬ್ವಾಲಿಯಿಂದ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ನನಗೆ ಆಫರ್ ನೀಡಿತ್ತು. ಆದರೆ, ನಾನು ಅದಕ್ಕೆ ನಿರಾಕರಿಸಿದೆ. ನಾನು ರೋಡ್ ಶೋ ಮಾಡುವ ಮೂಲಕ ನನ್ನ ಶಕ್ತಿಯನ್ನು ತೋರಿಸುತ್ತೇನೆ. ನಾನು ಬೇರೆ ಕಡೆಯಿಂದಲೂ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸದಸ್ಯತ್ವ ಅಭಿಯಾನ: ಕಾರ್ಯಕರ್ತರಿಗೆ ಟಾರ್ಗೆಟ್​ ನೀಡಿದ ಆರ್​​ ಅಶೋಕ್​ ​

ಇದಕ್ಕೂ ಮುನ್ನ ಬಿಜೆಪಿ ರಾಟಿಯಾ ಶಾಸಕ ಲಕ್ಷ್ಮಣ್ ನಾಪಾ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಅಕ್ಟೋಬರ್ 5ರಂದು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಯ ಟಿಕೆಟ್ ಕೂಡ ನಿರಾಕರಿಸಲಾಗಿತ್ತು. ಬಿಜೆಪಿಯು ಚುನಾವಣೆಗೆ 67 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ರಾಜ್ಯ ಪಕ್ಷದ ಮುಖ್ಯಸ್ಥ ಮೋಹನ್ ಲಾಲ್ ಬಡೋಲಿ ಅವರಿಗೆ ಪತ್ರ ಬರೆದಿರುವ ನಾಪಾ, ತಾನು ಪಕ್ಷವನ್ನು ತ್ಯಜಿಸುವುದಾಗಿ ಮತ್ತು ಅದರ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

ರಾಟಿಯಾದಿಂದ ಬಿಜೆಪಿ ಸಿರ್ಸಾದ ಮಾಜಿ ಸಂಸದೆ ಸುನೀತಾ ದುಗ್ಗಲ್ ಅವರನ್ನು ಕಣಕ್ಕಿಳಿಸಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿಗೆ ಸೇರ್ಪಡೆಗೊಂಡ ಮಾಜಿ ಹರಿಯಾಣ ಕಾಂಗ್ರೆಸ್ ಮುಖ್ಯಸ್ಥ ಅಶೋಕ್ ತನ್ವಾರ್ ಅವರಿಗೆ ಟಿಕೆಟ್ ನೀಡಿದ ನಂತರ ಸಿರ್ಸಾ ಸಂಸದೀಯ ಕ್ಷೇತ್ರದಿಂದ ದುಗ್ಗಲ್ ಅವರಿಗೆ ಮರುನಾಮನಿರ್ದೇಶನವನ್ನು ನಿರಾಕರಿಸಲಾಯಿತು.

ಇದನ್ನೂ ಓದಿ: Haryana Elections: ಹರಿಯಾಣ ಚುನಾವಣೆಗೆ 67 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಲಾಡ್ವಾದಿಂದ ಸಿಎಂ ಸೈನಿ ಸ್ಪರ್ಧೆ

ಆಡಳಿತಾರೂಢ ಬಿಜೆಪಿ ಬುಧವಾರ (ಸೆಪ್ಟೆಂಬರ್ 4) ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರನ್ನು ಲಾಡ್ವಾ ಕ್ಷೇತ್ರದಿಂದ ಕಣಕ್ಕಿಳಿಸಿ, ಅವರನ್ನು ಕರ್ನಾಲ್‌ನಿಂದ ಸ್ಥಳಾಂತರಿಸಿ, ಇತ್ತೀಚೆಗೆ ಪಕ್ಷಕ್ಕೆ ಪ್ರವೇಶಿಸಿದ ಹಲವಾರು ಜನರಿಗೆ ಚುನಾವಣಾ ಟಿಕೆಟ್‌ಗಳನ್ನು ನೀಡಿ ಪುರಸ್ಕರಿಸಿದೆ. ಬಿಜೆಪಿ ಚುನಾವಣೆಗೆ 67 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ