Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಡಿ ಕೊಲೆ ಪ್ರಕರಣದಲ್ಲಿ ಗೋರಕ್ಷಕ ಮೋನು ಮಾನೇಸರ್ ವಶಕ್ಕೆ, 14 ದಿನಗಳ ನ್ಯಾಯಾಂಗ ಬಂಧನ

ನಾಸಿರ್ ಮತ್ತು ಜುನೈದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ಈತನನ್ನು ಕಸ್ಟಡಿಗೆ ತೆಗೆದುಕೊಳ್ಳಲಿದ್ದಾರೆ. ರಾಜಸ್ಥಾನ ಪೊಲೀಸರ ಪ್ರಕಾರ, ನಾಸಿರ್ ಮತ್ತು ಜುನೈದ್ ಹತ್ಯೆಯ ಪ್ರಾಥಮಿಕ ಸಂಚುಕೋರ ಈತ ಎಂದು ಪರಿಗಣಿಸಲಾಗಿದೆ. ಫೆಬ್ರವರಿ 15 ರಂದು ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಘಾಟ್ಮೀಕಾ ಗ್ರಾಮದ ನಾಸಿರ್ ಮತ್ತು ಜುನೈದ್ ಅವರನ್ನು ಗೋರಕ್ಷಕರು ಅಪಹರಿಸಿದ್ದಾರೆ ಎಂದು ವರದಿಯಾಗಿದೆ.

Follow us
ರಶ್ಮಿ ಕಲ್ಲಕಟ್ಟ
|

Updated on: Sep 12, 2023 | 7:16 PM

ದೆಹಲಿ ಸೆಪ್ಟೆಂಬರ್ 12: ಹರ್ಯಾಣ ಪೊಲೀಸರು (Haryana Police) ಮಂಗಳವಾರ ಗೋರಕ್ಷಕ ಮೋನು ಮಾನೇಸರ್​​ನ್ನು (Monu Manesar) ಬಂಧಿಸಿದ್ದಾರೆ. ನಾಸಿರ್-ಜುನೈದ್ ಹತ್ಯೆ ಪ್ರಕರಣಕ್ಕೆ (Nasir-Junaid murder case )ಸಂಬಂಧಿಸಿದಂತೆ ನುಹ್ ಸಿಐಎ ಸಿಬ್ಬಂದಿ ಈತನನ್ನು ಬಂಧಿಸಿದ್ದು ನಂತರ ರಾಜಸ್ಥಾನ ಪೊಲೀಸರಿಗೆ ಹಸ್ತಾಂತರಿಸಲಾಗುವುದು. ಬಜರಂಗ ದಳದೊಂದಿಗೆ ಸಂಬಂಧ ಹೊಂದಿರುವ ಮೋನು ಮಾನೇಸರ್ ಎಂಬಾತನ ಮೇಲೆ ಫೆಬ್ರವರಿಯಲ್ಲಿ ರಾಜಸ್ಥಾನ ಮೂಲದ ಇಬ್ಬರು ಮುಸ್ಲಿಂ ಪುರುಷರನ್ನು ಕೊಂದ ಆರೋಪ ಹೊರಿಸಲಾಗಿತ್ತು. ಐಟಿ ಕಾಯ್ದೆಯ ಜಾಮೀನು ಪಡೆಯಬಹುದಾದ ಸೆಕ್ಷನ್‌ಗಳ ಅಡಿಯಲ್ಲಿ ಮೋನುವನ್ನು ಹರ್ಯಾಣ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಸಂಜೆ ಅಥವಾ ನಾಳೆ ಬೆಳಗ್ಗೆ ಜಾಮೀನು ಸಿಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

ನಾಸಿರ್ ಮತ್ತು ಜುನೈದ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ಈತನನ್ನು ಕಸ್ಟಡಿಗೆ ತೆಗೆದುಕೊಳ್ಳಲಿದ್ದಾರೆ. ರಾಜಸ್ಥಾನ ಪೊಲೀಸರ ಪ್ರಕಾರ, ನಾಸಿರ್ ಮತ್ತು ಜುನೈದ್ ಹತ್ಯೆಯ ಪ್ರಾಥಮಿಕ ಸಂಚುಕೋರ ಈತ ಎಂದು ಪರಿಗಣಿಸಲಾಗಿದೆ. ಫೆಬ್ರವರಿ 15 ರಂದು ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಘಾಟ್ಮೀಕಾ ಗ್ರಾಮದ ನಾಸಿರ್ ಮತ್ತು ಜುನೈದ್ ಅವರನ್ನು ಗೋರಕ್ಷಕರು ಅಪಹರಿಸಿದ್ದಾರೆ ಎಂದು ವರದಿಯಾಗಿದೆ. ಫೆಬ್ರವರಿ 16 ರಂದು ಹರ್ಯಾಣದ ಲೋಹರು, ಭಿವಾನಿಯಲ್ಲಿ ಸುಟ್ಟ ಕಾರಿನೊಳಗೆ ಇವರಿಬ್ಬರ ಮೃತದೇಹಗಳು ಪತ್ತೆಯಾಗಿತ್ತು.

ಈ ಪ್ರಕರಣದಲ್ಲಿ ರಾಜಸ್ಥಾನ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಮೋನು ಮಾನೇಸರ್​​ನ್ನು ಆರೋಪಿ ಎಂದು ಗುರುತಿಸಲಾಗಿತ್ತು.

ಯಾರು ಈ ಮೋನು ಮಾನೇಸರ್?

ಮೋಹಿತ್ ಯಾದವ್ ಎಂಬ ಮೋನು ಮಾನೇಸರ್ ಗುರುಗ್ರಾಮ್ ಬಳಿಯ ಮಾನೇಸರ್ ನಿವಾಸಿಯಾಗಿದ್ದು, ಪಾಲಿಟೆಕ್ನಿಕ್ ಡಿಪ್ಲೋಮಾ ಓದಿದ್ದಾನೆ. ಈತ ಬಜರಂಗ ದಳಕ್ಕೆ ಸಂಬಂಧಿಸಿದ ಸ್ವಯಂಘೋಷಿತ ಗೋಸಂರಕ್ಷಣಾ ಗುಂಪಿನ ಗೋರಕ್ಷಾ ದಳದ ಮುಖ್ಯಸ್ಥರಾಗಿ ಪರಿಚಿತರು.

ಮೋನು ನಿಯಮಿತವಾಗಿ ತನ್ನ ಅನ್ವೇಷಣೆಗಳ ವಿಡಿಯೊಗಳು ಮತ್ತು ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದನು. ಹಸು ಕಳ್ಳಸಾಗಣೆ ಮಾಡಲಾಗುತ್ತಿದೆ ಎಂದು ನಂಬಲಾದ ಟ್ರಕ್‌ಗಳನ್ನು ಬೆನ್ನಟ್ಟುವುದು, ಅದರಲ್ಲಿದ್ದ ಜನರಿಗೆ ಶಿಕ್ಷೆಗಳನ್ನು ನೀಡುವುದು ಈತನ ಕೆಲಸ.ಹಸುವಿನ ಸಗಣಿ ತಿನ್ನುವಂತೆ ಒತ್ತಾಯಿಸುವುದು ಈತ ನೀಡುತ್ತಿದ್ದ ಶಿಕ್ಷೆ. ಮಾನೇಸರ್ ತನ್ನ ಕಾರಿನಲ್ಲಿ ತನ್ನ ಸಹಚರರ ಜೊತೆಯಲ್ಲಿ ಶಸ್ತ್ರಾಸ್ತ್ರಗಳನ್ನು ಝಳಪಿಸಿದ್ದೂ ಇದೆ. ಮೋನುಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಅನುಯಾಯಿಗಳು ಇದ್ದಾರೆ. ಈತನ ಕಾರ್ಯಗಳು ಬಹಳಷ್ಟು ಯುವಕರನ್ನು ಗೋರಕ್ಷಣೆಯಲಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದೆ ಎಂದು ಹೇಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !