AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡಮಾನ್: ಪತ್ನಿ ಕೊಲೆ ಮಾಡಿ 11 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಹರ್ಯಾಣ ಮೂಲದ ವ್ಯಕ್ತಿಯ ಬಂಧನ

ಪತ್ನಿಯನ್ನು ಹತ್ಯೆ ಮಾಡಿ 11 ವರ್ಷಗಳ ಕಾಲ ತಲೆ ಮರೆಸಿಕೊಂಡಿದ್ದ, ಹರ್ಯಾಣ ಮೂಲದ ವ್ಯಕ್ತಿಯನ್ನು ಅಂಡಮಾನ್​ನಲ್ಲಿ ಪೊಲೀಸರು ಬಂಧಿಸಿದ್ದಾರೆ. 2007ರಲ್ಲಿ ಹರಿಯಾಣದಲ್ಲಿ ಪತ್ನಿಯನ್ನು ಕೊಂದ ಆರೋಪ ಹೊರಿಸಲಾಗಿತ್ತು. ಆರೋಪಿಯನ್ನು 54 ವರ್ಷದ ಎಪಿ ಸೆಲ್ವನ್ ಎಂದು ಗುರುತಿಸಲಾಗಿದ್ದು, 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಅವರು ವೃತ್ತಿಯಲ್ಲಿ ಅಡುಗೆ ಮಾಡುವವರಾಗಿದ್ದರು.

ಅಂಡಮಾನ್: ಪತ್ನಿ ಕೊಲೆ ಮಾಡಿ 11 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಹರ್ಯಾಣ ಮೂಲದ ವ್ಯಕ್ತಿಯ ಬಂಧನ
ಬಂಧನ
ನಯನಾ ರಾಜೀವ್
|

Updated on:Aug 27, 2023 | 9:00 AM

Share

ಪತ್ನಿಯನ್ನು ಹತ್ಯೆ ಮಾಡಿ 11 ವರ್ಷಗಳ ಕಾಲ ತಲೆ ಮರೆಸಿಕೊಂಡಿದ್ದ, ಹರ್ಯಾಣ ಮೂಲದ ವ್ಯಕ್ತಿಯನ್ನು ಅಂಡಮಾನ್​ನಲ್ಲಿ ಪೊಲೀಸರು ಬಂಧಿಸಿದ್ದಾರೆ. 2007ರಲ್ಲಿ ಹರಿಯಾಣದಲ್ಲಿ ಪತ್ನಿಯನ್ನು ಕೊಂದ ಆರೋಪ ಹೊರಿಸಲಾಗಿತ್ತು. ಆರೋಪಿಯನ್ನು 54 ವರ್ಷದ ಎಪಿ ಸೆಲ್ವನ್ ಎಂದು ಗುರುತಿಸಲಾಗಿದ್ದು, 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಅವರು ವೃತ್ತಿಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. 2007 ರಲ್ಲಿ, ಅವರ ಪತ್ನಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು, ಹರ್ಯಾಣದ ಬಾಡಿಗೆ ಮನೆಯಿಂದ ಆತನನ್ನು ಬಂಧಿಸಲಾಗಿತ್ತು, ಆದರೆ ಸಾಕ್ಷ್ಯಾಧಾರ ಕೊರತೆಯಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ತನಿಖೆಯ ವೇಳೆ, ಪತ್ನಿಯ ಹತ್ಯೆಯಲ್ಲಿ ಆತನ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ.ತನಿಖಾ ಅಧಿಕಾರಿಗಳು ಸೆಲ್ವನ್ ವಿರುದ್ಧ ಸಾಕಷ್ಟು ಸಾಕ್ಷ್ಯಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಿದ ನಂತರ 2012 ರಲ್ಲಿ ಅಂಬಾಲಾ ನ್ಯಾಯಾಲಯವು ಆತನ ವಿರುದ್ಧ ಹೊಸದಾಗಿ ಮರು-ಬಂಧನ ವಾರಂಟ್ ಹೊರಡಿಸಿತು.

ಅಂದಿನಿಂದ ಸೆಲ್ವನ್ ಪರಾರಿಯಾಗಿದ್ದರು ಮತ್ತು 11 ವರ್ಷಗಳ ನಂತರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ನಿಕೋಬಾರ್ ಜಿಲ್ಲೆಯ ಕ್ಯಾಂಪ್‌ಬೆಲ್ ಕೊಲ್ಲಿಯಲ್ಲಿರುವ ವಿಜಯ್ ನಗರ ಎಂಬ ದೂರದ ಹಳ್ಳಿಯಲ್ಲಿ ಆತ ಇರುವುದು ಪತ್ತೆಯಾಗಿತ್ತು.

ಮತ್ತಷ್ಟು ಓದಿ: Bengaluru News: ಕುಡಿಯುವ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ, ಸ್ನೇಹಿತರಿಂದಲೇ ಯುವಕನ ಕೊಲೆ

ಆತನನ್ನು ಕ್ಯಾಂಪ್​ಬೆಲ್ ಕೊಲ್ಲಿಯಿಂದ ಬಂಧಿಸಲಾಗಿದೆ, ಆಗಸ್ಟ್ 23 ರಂದು ಹರಿಯಾಣದ ತಂಡವೊಂದು ಪೋರ್ಟ್ ಬ್ಲೇರ್ ತಲುಪಿ ಕ್ಯಾಂಪ್ ಬೆಲ್ ಬೇ ಗೆ ತೆರಳಿತ್ತು, ಸ್ಥಳೀಯ ಪೊಲೀಸರ ಸಹಾಯ ಪಡೆದು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಗಸ್ಟ್ 25 ರಂದು, ಸೆಲ್ವನ್ ಅವರನ್ನು ಪೋರ್ಟ್ ಬ್ಲೇರ್‌ಗೆ ಕರೆತಂದು ಚಾಥಮ್ ಪೊಲೀಸ್ ಠಾಣೆಯ ಲಾಕಪ್‌ನಲ್ಲಿ ಇರಿಸಲಾಗಿತ್ತು. ಭಾನುವಾರ ಆರೋಪಿಯನ್ನು ದೆಹಲಿಗೆ ಕರೆದುಕೊಂಡು ಹೋಗಿ ಅಲ್ಲಿಂದ ಹರಿಯಾಣಕ್ಕೆ ಕರೆದೊಯ್ಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:00 am, Sun, 27 August 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ