ಅಂಡಮಾನ್: ಪತ್ನಿ ಕೊಲೆ ಮಾಡಿ 11 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಹರ್ಯಾಣ ಮೂಲದ ವ್ಯಕ್ತಿಯ ಬಂಧನ

ಪತ್ನಿಯನ್ನು ಹತ್ಯೆ ಮಾಡಿ 11 ವರ್ಷಗಳ ಕಾಲ ತಲೆ ಮರೆಸಿಕೊಂಡಿದ್ದ, ಹರ್ಯಾಣ ಮೂಲದ ವ್ಯಕ್ತಿಯನ್ನು ಅಂಡಮಾನ್​ನಲ್ಲಿ ಪೊಲೀಸರು ಬಂಧಿಸಿದ್ದಾರೆ. 2007ರಲ್ಲಿ ಹರಿಯಾಣದಲ್ಲಿ ಪತ್ನಿಯನ್ನು ಕೊಂದ ಆರೋಪ ಹೊರಿಸಲಾಗಿತ್ತು. ಆರೋಪಿಯನ್ನು 54 ವರ್ಷದ ಎಪಿ ಸೆಲ್ವನ್ ಎಂದು ಗುರುತಿಸಲಾಗಿದ್ದು, 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಅವರು ವೃತ್ತಿಯಲ್ಲಿ ಅಡುಗೆ ಮಾಡುವವರಾಗಿದ್ದರು.

ಅಂಡಮಾನ್: ಪತ್ನಿ ಕೊಲೆ ಮಾಡಿ 11 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಹರ್ಯಾಣ ಮೂಲದ ವ್ಯಕ್ತಿಯ ಬಂಧನ
ಬಂಧನ
Follow us
|

Updated on:Aug 27, 2023 | 9:00 AM

ಪತ್ನಿಯನ್ನು ಹತ್ಯೆ ಮಾಡಿ 11 ವರ್ಷಗಳ ಕಾಲ ತಲೆ ಮರೆಸಿಕೊಂಡಿದ್ದ, ಹರ್ಯಾಣ ಮೂಲದ ವ್ಯಕ್ತಿಯನ್ನು ಅಂಡಮಾನ್​ನಲ್ಲಿ ಪೊಲೀಸರು ಬಂಧಿಸಿದ್ದಾರೆ. 2007ರಲ್ಲಿ ಹರಿಯಾಣದಲ್ಲಿ ಪತ್ನಿಯನ್ನು ಕೊಂದ ಆರೋಪ ಹೊರಿಸಲಾಗಿತ್ತು. ಆರೋಪಿಯನ್ನು 54 ವರ್ಷದ ಎಪಿ ಸೆಲ್ವನ್ ಎಂದು ಗುರುತಿಸಲಾಗಿದ್ದು, 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಅವರು ವೃತ್ತಿಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. 2007 ರಲ್ಲಿ, ಅವರ ಪತ್ನಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು, ಹರ್ಯಾಣದ ಬಾಡಿಗೆ ಮನೆಯಿಂದ ಆತನನ್ನು ಬಂಧಿಸಲಾಗಿತ್ತು, ಆದರೆ ಸಾಕ್ಷ್ಯಾಧಾರ ಕೊರತೆಯಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ತನಿಖೆಯ ವೇಳೆ, ಪತ್ನಿಯ ಹತ್ಯೆಯಲ್ಲಿ ಆತನ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ.ತನಿಖಾ ಅಧಿಕಾರಿಗಳು ಸೆಲ್ವನ್ ವಿರುದ್ಧ ಸಾಕಷ್ಟು ಸಾಕ್ಷ್ಯಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಿದ ನಂತರ 2012 ರಲ್ಲಿ ಅಂಬಾಲಾ ನ್ಯಾಯಾಲಯವು ಆತನ ವಿರುದ್ಧ ಹೊಸದಾಗಿ ಮರು-ಬಂಧನ ವಾರಂಟ್ ಹೊರಡಿಸಿತು.

ಅಂದಿನಿಂದ ಸೆಲ್ವನ್ ಪರಾರಿಯಾಗಿದ್ದರು ಮತ್ತು 11 ವರ್ಷಗಳ ನಂತರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ನಿಕೋಬಾರ್ ಜಿಲ್ಲೆಯ ಕ್ಯಾಂಪ್‌ಬೆಲ್ ಕೊಲ್ಲಿಯಲ್ಲಿರುವ ವಿಜಯ್ ನಗರ ಎಂಬ ದೂರದ ಹಳ್ಳಿಯಲ್ಲಿ ಆತ ಇರುವುದು ಪತ್ತೆಯಾಗಿತ್ತು.

ಮತ್ತಷ್ಟು ಓದಿ: Bengaluru News: ಕುಡಿಯುವ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ, ಸ್ನೇಹಿತರಿಂದಲೇ ಯುವಕನ ಕೊಲೆ

ಆತನನ್ನು ಕ್ಯಾಂಪ್​ಬೆಲ್ ಕೊಲ್ಲಿಯಿಂದ ಬಂಧಿಸಲಾಗಿದೆ, ಆಗಸ್ಟ್ 23 ರಂದು ಹರಿಯಾಣದ ತಂಡವೊಂದು ಪೋರ್ಟ್ ಬ್ಲೇರ್ ತಲುಪಿ ಕ್ಯಾಂಪ್ ಬೆಲ್ ಬೇ ಗೆ ತೆರಳಿತ್ತು, ಸ್ಥಳೀಯ ಪೊಲೀಸರ ಸಹಾಯ ಪಡೆದು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಗಸ್ಟ್ 25 ರಂದು, ಸೆಲ್ವನ್ ಅವರನ್ನು ಪೋರ್ಟ್ ಬ್ಲೇರ್‌ಗೆ ಕರೆತಂದು ಚಾಥಮ್ ಪೊಲೀಸ್ ಠಾಣೆಯ ಲಾಕಪ್‌ನಲ್ಲಿ ಇರಿಸಲಾಗಿತ್ತು. ಭಾನುವಾರ ಆರೋಪಿಯನ್ನು ದೆಹಲಿಗೆ ಕರೆದುಕೊಂಡು ಹೋಗಿ ಅಲ್ಲಿಂದ ಹರಿಯಾಣಕ್ಕೆ ಕರೆದೊಯ್ಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:00 am, Sun, 27 August 23

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ