AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana Politics: ಹರ್ಯಾಣ ವಿಧಾನಸಭಾ ಚುನಾವಣೆ: ಕೇಜ್ರಿವಾಲ್, ಭಗವಂತ್ ಮಾನ್​ರಿಂದ ತಿರಂಗ ಯಾತ್ರೆ

ಹರ್ಯಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್(Bhagwant Mann) ತಿರಂಗ ಯಾತ್ರೆ ನಡೆಸಲಿದ್ದಾರೆ.

Haryana Politics: ಹರ್ಯಾಣ ವಿಧಾನಸಭಾ ಚುನಾವಣೆ: ಕೇಜ್ರಿವಾಲ್, ಭಗವಂತ್ ಮಾನ್​ರಿಂದ ತಿರಂಗ ಯಾತ್ರೆ
ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್Image Credit source: News 18
ನಯನಾ ರಾಜೀವ್
|

Updated on: Jun 08, 2023 | 9:58 AM

Share

ಹರ್ಯಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್(Bhagwant Mann) ತಿರಂಗ ಯಾತ್ರೆ ನಡೆಸಲಿದ್ದಾರೆ. ಇಂದು ಜಿಂದ್ ಜಿಲ್ಲೆಯಲ್ಲಿ ಯಾತ್ರೆ ನಡೆಯಲಿದೆ, ಎಎಪಿಯ ಹರಿಯಾಣ ಘಟಕದ ಮುಖ್ಯಸ್ಥ ಸುಶೀಲ್ ಕುಮಾರ್ ಗುಪ್ತಾ ಪ್ರಕಾರ, ಈ ಕಾರ್ಯಕ್ರಮವು ಮುಂದಿನ ವರ್ಷ ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆಯ ಪಕ್ಷದ ಪ್ರಚಾರದ ಭಾಗವಾಗಿದೆ. ರಾಜ್ಯಸಭಾ ಸಂಸದ ಗುಪ್ತಾ ಮಾತನಾಡಿ, ರಾಜ್ಯದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ, ಅದು ತಿರಂಗಾ ಯಾತ್ರೆ ಮೂಲಕ ಬರಲಿದೆ ಎಂದಿದ್ದಾರೆ.

ಹರ್ಯಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟ ಆಡಳಿತವನ್ನು ಕಿತ್ತೊಗೆಯಲಾಗುವುದು ಗುಪ್ತಾ ಹೇಳಿದ್ದಾರೆ.

ವಾಸ್ತವವಾಗಿ, ಆಮ್ ಆದ್ಮಿ ಪಕ್ಷವು ದೇಶದ 4 ರಾಜ್ಯಗಳಾದ ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳ ಮೇಲೆ ಕೇಂದ್ರೀಕರಿಸಿದೆ. ಆದರೆ, ಹರಿಯಾಣಕ್ಕೂ ಮುನ್ನ ಈ ವರ್ಷ ಮೂರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಮತ್ತಷ್ಟು ಓದಿ: ಇದು ಅವರ ಕನಸಾಗಿತ್ತು; ಶಾಲೆ ಉದ್ಘಾಟನೆ ಸಮಾರಂಭದಲ್ಲಿ ಸಿಸೋಡಿಯಾ ನೆನೆದು ಭಾವುಕರಾದ ಕೇಜ್ರಿವಾಲ್

ಆಮ್ ಆದ್ಮಿ ಪಕ್ಷವು ಚುನಾವಣಾ ಪ್ರಚಾರಕ್ಕೆ  ಹರ್ಯಾಣವನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಕೆಲವು ವಿಶೇಷ ಕಾರಣಗಳಿವೆ. ಮೊದಲನೆಯದು ದೆಹಲಿ ಮತ್ತು ಪಂಜಾಬ್ ಗಡಿಯಲ್ಲಿರುವ ರಾಜ್ಯ. ಈ ಎರಡೂ ರಾಜ್ಯಗಳಲ್ಲಿ ಪಕ್ಷ ಅಧಿಕಾರದಲ್ಲಿರುವುದರಿಂದ ಹರ್ಯಾಣದಲ್ಲಿ ಉತ್ತಮ ಪರಿಣಾಮ ಬೀರಲಿದೆ ಎಂದು ಪಕ್ಷ ಚಿಂತನೆ ನಡೆಸಿದೆ. ಸಿಕ್ಕಿರುವ ಮಾಹಿತಿ ಪ್ರಕಾರ  ಹರ್ಯಾಣದಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದ್ದು, ಚುನಾವಣೆಯಲ್ಲಿ ಇತರೆ ಪಕ್ಷಗಳಿಗೆ ಲಾಭವಾಗಲಿದೆ. ಇದಲ್ಲದೇ ಅರವಿಂದ್ ಕೇಜ್ರಿವಾಲ್ ಅವರ ತವರು ರಾಜ್ಯ ಹರ್ಯಾಣ, ಹಾಗಾಗಿ ಇಲ್ಲಿಂದಲೇ ಯಾತ್ರೆ ಆರಂಭವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ