Sign In

By signing in or creating an account, you agree with Associated Broadcasting Company's Terms & Conditions and Privacy Policy.

Haryana Politics: ಹರ್ಯಾಣ ವಿಧಾನಸಭಾ ಚುನಾವಣೆ: ಕೇಜ್ರಿವಾಲ್, ಭಗವಂತ್ ಮಾನ್​ರಿಂದ ತಿರಂಗ ಯಾತ್ರೆ

ಹರ್ಯಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್(Bhagwant Mann) ತಿರಂಗ ಯಾತ್ರೆ ನಡೆಸಲಿದ್ದಾರೆ.

Haryana Politics: ಹರ್ಯಾಣ ವಿಧಾನಸಭಾ ಚುನಾವಣೆ: ಕೇಜ್ರಿವಾಲ್, ಭಗವಂತ್ ಮಾನ್​ರಿಂದ ತಿರಂಗ ಯಾತ್ರೆ
ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್Image Credit source: News 18
Follow us
ನಯನಾ ರಾಜೀವ್
|

Updated on: Jun 08, 2023 | 9:58 AM

ಹರ್ಯಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್(Bhagwant Mann) ತಿರಂಗ ಯಾತ್ರೆ ನಡೆಸಲಿದ್ದಾರೆ. ಇಂದು ಜಿಂದ್ ಜಿಲ್ಲೆಯಲ್ಲಿ ಯಾತ್ರೆ ನಡೆಯಲಿದೆ, ಎಎಪಿಯ ಹರಿಯಾಣ ಘಟಕದ ಮುಖ್ಯಸ್ಥ ಸುಶೀಲ್ ಕುಮಾರ್ ಗುಪ್ತಾ ಪ್ರಕಾರ, ಈ ಕಾರ್ಯಕ್ರಮವು ಮುಂದಿನ ವರ್ಷ ನಡೆಯಲಿರುವ ಹರಿಯಾಣ ವಿಧಾನಸಭೆ ಚುನಾವಣೆಯ ಪಕ್ಷದ ಪ್ರಚಾರದ ಭಾಗವಾಗಿದೆ. ರಾಜ್ಯಸಭಾ ಸಂಸದ ಗುಪ್ತಾ ಮಾತನಾಡಿ, ರಾಜ್ಯದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ, ಅದು ತಿರಂಗಾ ಯಾತ್ರೆ ಮೂಲಕ ಬರಲಿದೆ ಎಂದಿದ್ದಾರೆ.

ಹರ್ಯಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಭ್ರಷ್ಟ ಆಡಳಿತವನ್ನು ಕಿತ್ತೊಗೆಯಲಾಗುವುದು ಗುಪ್ತಾ ಹೇಳಿದ್ದಾರೆ.

ವಾಸ್ತವವಾಗಿ, ಆಮ್ ಆದ್ಮಿ ಪಕ್ಷವು ದೇಶದ 4 ರಾಜ್ಯಗಳಾದ ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳ ಮೇಲೆ ಕೇಂದ್ರೀಕರಿಸಿದೆ. ಆದರೆ, ಹರಿಯಾಣಕ್ಕೂ ಮುನ್ನ ಈ ವರ್ಷ ಮೂರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಮತ್ತಷ್ಟು ಓದಿ: ಇದು ಅವರ ಕನಸಾಗಿತ್ತು; ಶಾಲೆ ಉದ್ಘಾಟನೆ ಸಮಾರಂಭದಲ್ಲಿ ಸಿಸೋಡಿಯಾ ನೆನೆದು ಭಾವುಕರಾದ ಕೇಜ್ರಿವಾಲ್

ಆಮ್ ಆದ್ಮಿ ಪಕ್ಷವು ಚುನಾವಣಾ ಪ್ರಚಾರಕ್ಕೆ  ಹರ್ಯಾಣವನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಕೆಲವು ವಿಶೇಷ ಕಾರಣಗಳಿವೆ. ಮೊದಲನೆಯದು ದೆಹಲಿ ಮತ್ತು ಪಂಜಾಬ್ ಗಡಿಯಲ್ಲಿರುವ ರಾಜ್ಯ. ಈ ಎರಡೂ ರಾಜ್ಯಗಳಲ್ಲಿ ಪಕ್ಷ ಅಧಿಕಾರದಲ್ಲಿರುವುದರಿಂದ ಹರ್ಯಾಣದಲ್ಲಿ ಉತ್ತಮ ಪರಿಣಾಮ ಬೀರಲಿದೆ ಎಂದು ಪಕ್ಷ ಚಿಂತನೆ ನಡೆಸಿದೆ. ಸಿಕ್ಕಿರುವ ಮಾಹಿತಿ ಪ್ರಕಾರ  ಹರ್ಯಾಣದಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದ್ದು, ಚುನಾವಣೆಯಲ್ಲಿ ಇತರೆ ಪಕ್ಷಗಳಿಗೆ ಲಾಭವಾಗಲಿದೆ. ಇದಲ್ಲದೇ ಅರವಿಂದ್ ಕೇಜ್ರಿವಾಲ್ ಅವರ ತವರು ರಾಜ್ಯ ಹರ್ಯಾಣ, ಹಾಗಾಗಿ ಇಲ್ಲಿಂದಲೇ ಯಾತ್ರೆ ಆರಂಭವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ