AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ: ಪತ್ನಿ ಸಹಾಯ ಪಡೆದು ಪೊಲೀಸ್​ ಕಸ್ಟಡಿಯಿಂದ ತಪ್ಪಿಸಿಕೊಂಡ ಕೈದಿ

ಪತ್ನಿ ಸಹಾಯದಿಂದ ಕೈದಿಯೊಬ್ಬ ಪೊಲೀಸ್​ ಕಸ್ಟಡಿಯಿಂದ ತಪ್ಪಿಸಿಕೊಂಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ವಂಚನೆ ಮತ್ತು ಇತರ ಅಪರಾಧಗಳ ಆರೋಪಿಯೊಬ್ಬ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಸ್ಕೂಟರ್​ನಲ್ಲಿ ಪತ್ನಿಯ ಜತೆ ಪರಾರಿಯಾಗಿದ್ದಾನೆ.

ಹರ್ಯಾಣ: ಪತ್ನಿ ಸಹಾಯ ಪಡೆದು ಪೊಲೀಸ್​ ಕಸ್ಟಡಿಯಿಂದ ತಪ್ಪಿಸಿಕೊಂಡ ಕೈದಿ
ಪೊಲೀಸ್​Image Credit source: India Today
ನಯನಾ ರಾಜೀವ್
|

Updated on: Jan 19, 2024 | 8:16 AM

Share

ಪತ್ನಿ ಸಹಾಯದಿಂದ ಕೈದಿಯೊಬ್ಬ ಪೊಲೀಸ್​ ಕಸ್ಟಡಿಯಿಂದ ತಪ್ಪಿಸಿಕೊಂಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ವಂಚನೆ ಮತ್ತು ಇತರ ಅಪರಾಧಗಳ ಆರೋಪಿಯೊಬ್ಬ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಸ್ಕೂಟರ್​ನಲ್ಲಿ ಪತ್ನಿಯ ಜತೆ ಪರಾರಿಯಾಗಿದ್ದಾನೆ.

ಆರೋಪಿಯನ್ನು ಅನಿಲ್ ಅಲಿಯಾಸ್ ಟಿಂಕಲ್ ಎಂದು ಗುರುತಿಸಲಾಗಿದ್ದು, ಜನವರಿ 16 ರಂದು ಮಂಗಳವಾರ ವಿಚಾರಣೆಗಾಗಿ ಹರಿಯಾಣದ ಪಲ್ವಾಲ್‌ನಲ್ಲಿರುವ ಸ್ಥಳೀಯ ನ್ಯಾಯಾಲಯಕ್ಕೆ ಕರೆತರಲಾಗಿತ್ತು.

ಕಳೆದ ವರ್ಷ ಏಪ್ರಿಲ್ 16 ರಂದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅವರನ್ನು ಪೊಲೀಸರು ಬಂಧಿಸಿದ್ದರು ಮತ್ತು ಪ್ರಸ್ತುತ ಏಳು ವಿವಿಧ ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿದ್ದಾನೆ.

ನ್ಯಾಯಾಲಯದ ವಿಚಾರಣೆಯ ನಂತರ, ಅನಿಲ್ ಮತ್ತು ಪೊಲೀಸ್ ಅಧಿಕಾರಿಗಳು ಪಲ್ವಾಲ್‌ನ ಹೊಡಾಲ್ ಪ್ರದೇಶವನ್ನು ತಲುಪಲು ಆಟೋ-ರಿಕ್ಷಾವನ್ನು ಹತ್ತಿದ್ದರು. ಅಲ್ಲಿ ಮಥುರಾಗೆ ತೆರಳುವ ಬಸ್​ಗಾಗಿ ಕಾಯುತ್ತಿದ್ದರು, ಈ ಸಮಯದಲ್ಲಿ ಪತ್ನಿ ಸ್ಕೂಟರ್​ನಲ್ಲಿ ಬಂದಿದ್ದಳು, ಪತಿ ಜತೆಗೆ ಸ್ವಲ್ಪ ಮಾತನಾಡಲು ಅವಕಾಶ ಮಾಡಿಕೊಡಿ ಎಂದು ಹೇಳಿಕೊಂಡಿದ್ದಳು. ಪೊಲೀಸರು ಕೂಡ ಒಪ್ಪಿಕೊಂಡರು.

ಮತ್ತಷ್ಟು ಓದಿ: ಬೆಂಗಳೂರಿನ ರೌಡಿಗಳಿಗೆ ಪಿಸ್ತೂಲ್ ಪೂರೈಸುತ್ತಿದ್ದ ಮಹಾರಾಷ್ಟ್ರದ ಇಬ್ಬರು ಆರೋಪಿಗಳ ಬಂಧನ

ಅವರಿಬ್ಬರು ಓಡಿ ಹೋಗುವ ಮುನ್ನ ಹೋಟೆಲ್​ನಲ್ಲಿ ಗಂಟೆಗಳ ಕಾಲ ಮಾತನಾಡಿದ್ದರು. ಹೆಡ್ ಕಾನ್ಸ್‌ಟೇಬಲ್ ಜ್ಞಾನ್ ಸಿಂಗ್, ಕಾನ್‌ಸ್ಟೆಬಲ್ ವಿವೇಕಾನಂದ ಮತ್ತು ಕಾನ್‌ಸ್ಟೆಬಲ್ ದಿಲೀಪ್ ಮೂವರು ಅವರಿಬ್ಬರನ್ನು ತಡೆಯಲು ಎಷ್ಟು ಪ್ರಯತ್ನಿಸಿದರೂ ತಪ್ಪಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

ಮಥುರಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಶೈಲೇಶ್ ಕುಮಾರ್ ಪಾಂಡೆ ಅವರು ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಅನಿಲ್ ಮತ್ತು ಅವರ ಪತ್ನಿ ವಿರುದ್ಧ ಹೋಡಾಲ್‌ನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!