AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ: ಪತ್ನಿ ಸಹಾಯ ಪಡೆದು ಪೊಲೀಸ್​ ಕಸ್ಟಡಿಯಿಂದ ತಪ್ಪಿಸಿಕೊಂಡ ಕೈದಿ

ಪತ್ನಿ ಸಹಾಯದಿಂದ ಕೈದಿಯೊಬ್ಬ ಪೊಲೀಸ್​ ಕಸ್ಟಡಿಯಿಂದ ತಪ್ಪಿಸಿಕೊಂಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ವಂಚನೆ ಮತ್ತು ಇತರ ಅಪರಾಧಗಳ ಆರೋಪಿಯೊಬ್ಬ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಸ್ಕೂಟರ್​ನಲ್ಲಿ ಪತ್ನಿಯ ಜತೆ ಪರಾರಿಯಾಗಿದ್ದಾನೆ.

ಹರ್ಯಾಣ: ಪತ್ನಿ ಸಹಾಯ ಪಡೆದು ಪೊಲೀಸ್​ ಕಸ್ಟಡಿಯಿಂದ ತಪ್ಪಿಸಿಕೊಂಡ ಕೈದಿ
ಪೊಲೀಸ್​Image Credit source: India Today
ನಯನಾ ರಾಜೀವ್
|

Updated on: Jan 19, 2024 | 8:16 AM

Share

ಪತ್ನಿ ಸಹಾಯದಿಂದ ಕೈದಿಯೊಬ್ಬ ಪೊಲೀಸ್​ ಕಸ್ಟಡಿಯಿಂದ ತಪ್ಪಿಸಿಕೊಂಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ವಂಚನೆ ಮತ್ತು ಇತರ ಅಪರಾಧಗಳ ಆರೋಪಿಯೊಬ್ಬ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಸ್ಕೂಟರ್​ನಲ್ಲಿ ಪತ್ನಿಯ ಜತೆ ಪರಾರಿಯಾಗಿದ್ದಾನೆ.

ಆರೋಪಿಯನ್ನು ಅನಿಲ್ ಅಲಿಯಾಸ್ ಟಿಂಕಲ್ ಎಂದು ಗುರುತಿಸಲಾಗಿದ್ದು, ಜನವರಿ 16 ರಂದು ಮಂಗಳವಾರ ವಿಚಾರಣೆಗಾಗಿ ಹರಿಯಾಣದ ಪಲ್ವಾಲ್‌ನಲ್ಲಿರುವ ಸ್ಥಳೀಯ ನ್ಯಾಯಾಲಯಕ್ಕೆ ಕರೆತರಲಾಗಿತ್ತು.

ಕಳೆದ ವರ್ಷ ಏಪ್ರಿಲ್ 16 ರಂದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅವರನ್ನು ಪೊಲೀಸರು ಬಂಧಿಸಿದ್ದರು ಮತ್ತು ಪ್ರಸ್ತುತ ಏಳು ವಿವಿಧ ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿದ್ದಾನೆ.

ನ್ಯಾಯಾಲಯದ ವಿಚಾರಣೆಯ ನಂತರ, ಅನಿಲ್ ಮತ್ತು ಪೊಲೀಸ್ ಅಧಿಕಾರಿಗಳು ಪಲ್ವಾಲ್‌ನ ಹೊಡಾಲ್ ಪ್ರದೇಶವನ್ನು ತಲುಪಲು ಆಟೋ-ರಿಕ್ಷಾವನ್ನು ಹತ್ತಿದ್ದರು. ಅಲ್ಲಿ ಮಥುರಾಗೆ ತೆರಳುವ ಬಸ್​ಗಾಗಿ ಕಾಯುತ್ತಿದ್ದರು, ಈ ಸಮಯದಲ್ಲಿ ಪತ್ನಿ ಸ್ಕೂಟರ್​ನಲ್ಲಿ ಬಂದಿದ್ದಳು, ಪತಿ ಜತೆಗೆ ಸ್ವಲ್ಪ ಮಾತನಾಡಲು ಅವಕಾಶ ಮಾಡಿಕೊಡಿ ಎಂದು ಹೇಳಿಕೊಂಡಿದ್ದಳು. ಪೊಲೀಸರು ಕೂಡ ಒಪ್ಪಿಕೊಂಡರು.

ಮತ್ತಷ್ಟು ಓದಿ: ಬೆಂಗಳೂರಿನ ರೌಡಿಗಳಿಗೆ ಪಿಸ್ತೂಲ್ ಪೂರೈಸುತ್ತಿದ್ದ ಮಹಾರಾಷ್ಟ್ರದ ಇಬ್ಬರು ಆರೋಪಿಗಳ ಬಂಧನ

ಅವರಿಬ್ಬರು ಓಡಿ ಹೋಗುವ ಮುನ್ನ ಹೋಟೆಲ್​ನಲ್ಲಿ ಗಂಟೆಗಳ ಕಾಲ ಮಾತನಾಡಿದ್ದರು. ಹೆಡ್ ಕಾನ್ಸ್‌ಟೇಬಲ್ ಜ್ಞಾನ್ ಸಿಂಗ್, ಕಾನ್‌ಸ್ಟೆಬಲ್ ವಿವೇಕಾನಂದ ಮತ್ತು ಕಾನ್‌ಸ್ಟೆಬಲ್ ದಿಲೀಪ್ ಮೂವರು ಅವರಿಬ್ಬರನ್ನು ತಡೆಯಲು ಎಷ್ಟು ಪ್ರಯತ್ನಿಸಿದರೂ ತಪ್ಪಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

ಮಥುರಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಶೈಲೇಶ್ ಕುಮಾರ್ ಪಾಂಡೆ ಅವರು ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಅನಿಲ್ ಮತ್ತು ಅವರ ಪತ್ನಿ ವಿರುದ್ಧ ಹೋಡಾಲ್‌ನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!