AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ: ಅಂತ್ಯಕ್ರಿಯೆಗೆ ತೆರಳುತ್ತಿದ್ದವರು ನಿಜವಾಗಿಯೂ ಸ್ಮಶಾನ ಸೇರಿದ್ರು, ಕಾರು ಮರಕ್ಕೆ ಡಿಕ್ಕಿ, 6 ಮಂದಿ ಸಾವು

ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿರುವ ಘಟನೆ ಹರ್ಯಾಣದ ಸಿರ್ಸಾ ಜಿಲ್ಲೆಯ ದಬ್ವಾಲಿಯಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಐವರು ಒಂದೇ ಕುಟುಂಬದವರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಡಬ್ವಾಲಿಯ ಉಪವಿಭಾಗೀಯ ಸಿವಿಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಎಸ್ಪಿ ಸುಮೇರ್ ಸಿಂಗ್, ಡಿಎಸ್ಪಿ ಕ್ರೈಂ ರಾಜೀವ್ ಕುಮಾರ್ ಸ್ಥಳಕ್ಕೆ ಆಗಮಿಸಿದ್ದಾರೆ.

ಹರ್ಯಾಣ: ಅಂತ್ಯಕ್ರಿಯೆಗೆ ತೆರಳುತ್ತಿದ್ದವರು ನಿಜವಾಗಿಯೂ ಸ್ಮಶಾನ ಸೇರಿದ್ರು, ಕಾರು ಮರಕ್ಕೆ ಡಿಕ್ಕಿ, 6 ಮಂದಿ ಸಾವು
ಕಾರು ಅಪಘಾತImage Credit source: Jagaran.com
ನಯನಾ ರಾಜೀವ್
|

Updated on: Jan 09, 2024 | 7:45 AM

Share

ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿರುವ ಘಟನೆ ಹರ್ಯಾಣದ ಸಿರ್ಸಾ ಜಿಲ್ಲೆಯ ದಬ್ವಾಲಿಯಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಐವರು ಒಂದೇ ಕುಟುಂಬದವರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಡಬ್ವಾಲಿಯ ಉಪವಿಭಾಗೀಯ ಸಿವಿಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಎಸ್ಪಿ ಸುಮೇರ್ ಸಿಂಗ್, ಡಿಎಸ್ಪಿ ಕ್ರೈಂ ರಾಜೀವ್ ಕುಮಾರ್ ಸ್ಥಳಕ್ಕೆ ಆಗಮಿಸಿದ್ದಾರೆ.

ಮೃತರನ್ನು ರಾಜಸ್ಥಾನದ ಶ್ರೀಗಂಗಾನಗರದ ರಾಮದೇವ್ ಕಾಲೋನಿಯ ನಿವಾಸಿ ಬನ್ವಾರಿ ಲಾಲ್ ವರ್ಮಾ, ಅವರ ಪತ್ನಿ ದರ್ಶನಾ, ಅಣ್ಣ ಕೃಷ್ಣಕುಮಾರ್, ಅವರ ಪತ್ನಿ ಗುದ್ದಿದೇವಿ, ಎರಡನೇ ಸಹೋದರ ಓಂಪ್ರಕಾಶ್ ಅವರ ಪತ್ನಿ ಚಂದ್ರಕಲಾ, ಕಾರು ಚಾಲಕ ಎಂದು ಗುರುತಿಸಲಾಗಿದೆ.

ಸರ್ದಾರ್‌ಪುರ ಬಿಕಾ ಗ್ರಾಮದ ವಾರ್ಡ್‌ನ ಐದನೇ ಸಂಖ್ಯೆಯ ನಿವಾಸಿಯನ್ನು ಸುಭಾಷ್‌ಚಂದ್ರ ಎಂದು ಗುರುತಿಸಲಾಗಿದೆ. ಹಿಸಾರ್ ಸೆಕ್ಟರ್-15 ನಿವಾಸಿ, ದರ್ಶನಾ ದೇವಿ ಅವರ ತಂದೆ ನಿವೃತ್ತ ಮುಖ್ಯೋಪಾಧ್ಯಾಯ ಪಿರತಿ ಸಿಂಗ್ ಮೃತರು. ಅಂತ್ಯಕ್ರಿಯೆಗೆಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಹೊರಟಿದ್ದರು, ಮಧ್ಯಾಹ್ನ 3 ಗಂಟೆ ಸುಮಾರಿಗೆ ಶೇರ್​ಗಢ ಗ್ರಾಮದ ಬಳಿ ಕಾರು ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಲ್ಲಿ ಹೋಗಿತ್ತು.

ಮತ್ತಷ್ಟು ಓದಿ: ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, ಓರ್ವ ಸಾವು, ಎಂಎಲ್​ಸಿ ಪರ್ವತರೆಡ್ಡಿಗೆ ಗಂಭೀರ ಗಾಯ

ರಸ್ತೆ ಬದಿ ನಿಂತಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತವು ಎಷ್ಟು ಭೀಕರವಾಗಿತ್ತು ಎಂದರೆ ಐವರು ಸ್ಥಳದಲ್ಲೇ ಸಾವನ್ನಪ್ಪಿದರು, ಬನ್ವಾರಿ ಲಾಲ್ ಅವರನ್ನು ಉಪವಿಭಾಗೀಯ ಸಿವಿಲ್ ಆಸ್ಪತ್ರೆಗೆ ದಾಬ್ವಾಲಿ ಆಂಬ್ಯುಲೆನ್ಸ್ ಸೇವೆಯ ಕುಲವಂತ್ ಸಿಂಗ್ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆ ವೇಳೆ ಅವರೂ ಸಾವನ್ನಪ್ಪಿದ್ದಾರೆ.

ಕಾರು ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ, ಆತನಿಗೆ ಆ ಸಮಯದಲ್ಲಿ ನಿದ್ದೆ ಬಂದಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಕಾರು ತೀವ್ರವಾಗಿ ಜಖಂಗೊಂಡಿದೆ, ಇದು ಬ್ರೇಕ್​ ಹಾಕದಿರುವುದು ಹಾಗೂ ಅತಿ ವೇಗದಲ್ಲಿ ಬಂದು ಮರಕ್ಕೆ ಡಿಕ್ಕಿ ಹೊಡೆದಿರುವುದನ್ನು ತೋರಿಸುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ