ಹರ್ಯಾಣ: ಹಸು ಕಳ್ಳಸಾಗಣೆದಾರನೆಂದು ಭಾವಿಸಿ ಬೆನ್ನಟ್ಟಿ ವಿದ್ಯಾರ್ಥಿಯ ಹತ್ಯೆ

ಹಸು ಕಳ್ಳಸಾಗಣೆದಾರನೆಂದು ಭಾವಿಸಿ ದ್ವಿತೀಯ ಪಿಯುಸಿಯ ವಿದ್ಯಾರ್ಥಿಯನ್ನು ಹತ್ಯೆ ಮಾಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ಆತ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದ ಎಂದು ಬಳಿಕ ತಿಳಿದುಬಂದಿದೆ. ಆಗಸ್ಟ್ 23ರಂದು ನಡೆದ ದಾಳಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ.

ಹರ್ಯಾಣ: ಹಸು ಕಳ್ಳಸಾಗಣೆದಾರನೆಂದು ಭಾವಿಸಿ ಬೆನ್ನಟ್ಟಿ ವಿದ್ಯಾರ್ಥಿಯ ಹತ್ಯೆ
ಯುವಕ ಸಾವು
Image Credit source: Lagatar24.com

Updated on: Sep 03, 2024 | 8:29 AM

ವಿದ್ಯಾರ್ಥಿಯೊಬ್ಬನನ್ನು ಹಸು ಕಳ್ಳಸಾಗಣೆದಾರನೆಂದು ತಿಳಿದು 30 ಕಿ.ಮೀ ಬೆನ್ನಟ್ಟಿ ಹತ್ಯೆ ಮಾಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ಗೋರಕ್ಷಕರು ಆತನನ್ನು ತಪ್ಪಾಗಿ ತಿಳಿದು ಹಿಂಬಾಲಿಸಿ ಗುಂಡಿಕ್ಕಿ ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಆತ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದ ಎಂದು ಬಳಿಕ ತಿಳಿದುಬಂದಿದೆ. ಆಗಸ್ಟ್ 23ರಂದು ನಡೆದ ದಾಳಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಅನಿಲ್ ಕೌಶಿಕ್, ವರುಣ್, ಕೃಷ್ಣ, ಆದೇಶ್ ಮತ್ತು ಸೌರಭ್ ಎಂದು ಗುರುತಿಸಲಾಗಿದೆ.

ಆರ್ಯನ್ ಮಿಶ್ರಾ ಮತ್ತು ಆತನ ಸ್ನೇಹಿತರಾದ ಶಾಂಕಿ ಮತ್ತು ಹರ್ಷಿತ್ ಅವರನ್ನು ಜಾನುವಾರು ಕಳ್ಳಸಾಗಣೆದಾರರು ಎಂದು ತಪ್ಪಾಗಿ ಭಾವಿಸಿದ ಆರೋಪಿಗಳು ದೆಹಲಿ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಹರಿಯಾಣದ ಗಧಪುರಿ ಬಳಿ ಸುಮಾರು 30 ಕಿಲೋಮೀಟರ್ ವರೆಗೆ ಅವರ ಕಾರನ್ನು ಹಿಂಬಾಲಿಸಿದ್ದರು.

ಮತ್ತಷ್ಟು ಓದಿ: ಹಸುಗಳ ಕಳ್ಳ ಸಾಗಾಣಿಕೆ ಶಂಕೆ: ರಾಜಸ್ಥಾನದಲ್ಲಿ ಗುಂಪು ಹಲ್ಲೆಗೆ ವ್ಯಕ್ತಿ ಬಲಿ

ರೆನಾಲ್ಟ್ ಡಸ್ಟರ್ ಮತ್ತು ಟೊಯೊಟಾ ಫಾರ್ಚುನರ್ ಕಾರುಗಳಲ್ಲಿ ಕೆಲವು ಜಾನುವಾರು ಕಳ್ಳಸಾಗಣೆದಾರರು ನಗರ ದಾಟಿ ಜಾನುವಾರುಗಳನ್ನು ಎತ್ತಿಕೊಂಡು ಹೋಗುತ್ತಿದ್ದಾರೆ ಎಂದು ಗೋರಕ್ಷಕರಿಗೆ ಮಾಹಿತಿ ಸಿಕ್ಕಿದೆ.

ಬಂಧಿತ ಆರೋಪಿಗಳು ಜಾನುವಾರು ಕಳ್ಳಸಾಗಾಣಿಕೆದಾರರನ್ನು ಹುಡುಕುತ್ತಿದ್ದಾಗ ಪಟೇಲ್ ಚೌಕ್‌ನಲ್ಲಿ ಡಸ್ಟರ್ ಕಾರನ್ನು ನೋಡಿದ್ದಾರೆ. ನಂತರ ಕಾರು ಚಾಲಕ ಹರ್ಷಿತ್ ನನ್ನು ನಿಲ್ಲಿಸುವಂತೆ ಹೇಳಿದರು. ಆದಾಗ್ಯೂ, ಆರ್ಯನ್ ಮತ್ತು ಅವನ ಸ್ನೇಹಿತರು ನಿಲ್ಲಿಸಿರಲಿಲ್ಲ.

ಆರೋಪಿಗಳು ಕಾರಿನತ್ತ ಗುಂಡು ಹಾರಿಸಿದರು ಮತ್ತು ಗುಂಡು ಪ್ರಯಾಣಿಕರ ಸೀಟಿನಲ್ಲಿದ್ದ ಆರ್ಯನ್ – ಕುತ್ತಿಗೆಗೆ ತಗುಲಿತು. ಅಂತಿಮವಾಗಿ ಕಾರು ನಿಲ್ಲಿಸಿದಾಗ ಮತ್ತೆ ಗುಂಡು ಹಾರಿಸಲಾಯಿತು. ಆರೋಪಿಗಳು ಕಾರಿನಲ್ಲಿ ಇಬ್ಬರು ಹೆಣ್ಣುಮಕ್ಕಳನ್ನು ನೋಡಿದಾಗ, ಅವರು ತಪ್ಪಾದ ವ್ಯಕ್ತಿಗೆ ಗುಂಡು ಹಾರಿಸಿರುವುದು ಗೊತ್ತಾಗಿದೆ ಬಳಿಕ ಓಡಿ ಹೋಗಿದ್ದಾರೆ.

ಆರ್ಯನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ಅವರು ಒಂದು ದಿನದ ನಂತರ ಸಾವನ್ನಪ್ಪಿದ್ದಾರೆ.‘ಘಟನೆಯಲ್ಲಿ ಬಳಸಲಾದ ಆಯುಧವೂ ಅಕ್ರಮವಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಆರೋಪಿಗಳು ಪೊಲೀಸ್ ವಶದಲ್ಲಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us