AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ ಹಿಂಸಾಚಾರ: ಗುರುಗ್ರಾಮದ ಎರಡು ಮಸೀದಿಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆತ

ಹರ್ಯಾಣದ ನುಹ್​ ಬಳಿಕ ಮೂರನೇ ದಿನ ಹಿಂಸಾಚಾರವು ಪಲ್ವಾಲ್ ಜಿಲ್ಲೆಯನ್ನೂ ತಲುಪಿದೆ. ಬೆಳಗ್ಗೆಯಿಂದಲೇ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎರಡು ಮಸೀದಿಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ.

ಹರ್ಯಾಣ ಹಿಂಸಾಚಾರ: ಗುರುಗ್ರಾಮದ ಎರಡು ಮಸೀದಿಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆತ
ಹರ್ಯಾಣ ಹಿಂಸಾಚಾರImage Credit source: India Today
ನಯನಾ ರಾಜೀವ್
|

Updated on: Aug 03, 2023 | 11:04 AM

Share

ಹರ್ಯಾಣದ ನುಹ್​ ಬಳಿಕ ಮೂರನೇ ದಿನ ಹಿಂಸಾಚಾರ(Violence)ವು ಪಲ್ವಾಲ್ ಜಿಲ್ಲೆಯನ್ನೂ ತಲುಪಿದೆ. ಬೆಳಗ್ಗೆಯಿಂದಲೇ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎರಡು ಮಸೀದಿಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಬುಧವಾರ ರಾತ್ರಿ 11.30ರ ಸುಮಾರಿಗೆ ನಡೆದ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿಸಿದ್ದಾರೆ. ಮಸೀದಿಗಳಲ್ಲಿ ಒಂದು ವಿಜಯ್ ಚೌಕ್ ಬಳಿ ಇದ್ದರೆ, ಇನ್ನೊಂದು ಪೊಲೀಸ್ ಠಾಣೆ ಬಳಿ ಇದೆ. ಎರಡೂ ಮಸೀದಿಗಳಿಗೆ ಸ್ವಲ್ಪ ಹಾನಿಯಾಗಿದೆ.

ಘಟನೆಗಳ ಬಗ್ಗೆ ಮಾಹಿತಿ ಬಂದ ಕೂಡಲೇ ಎರಡು ಮಸೀದಿಗಳಿಗೆ ಅಗ್ನಿಶಾಮಕ ದಳಗಳು ಧಾವಿಸಿ ಬೆಂಕಿಯನ್ನು ನಂದಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಪಲ್ವಾಲ್ ಜಿಲ್ಲೆಯ ಮಿನಾರ್ ಗೇಟ್ ಮಾರುಕಟ್ಟೆಯಲ್ಲಿರುವ ಬಳೆ ಅಂಗಡಿಗೆ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

ಮತ್ತಷ್ಟು ಓದಿ: ಹರ್ಯಾಣ ಹಿಂಸಾಚಾರ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, 116 ಜನರ ಬಂಧನ, ದೆಹಲಿಯಿಂದ ಯುಪಿವರೆಗೆ ಕಟ್ಟೆಚ್ಚರ

ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆಯನ್ನು ತಡೆಯಲು ಗುಂಪೊಂದು ಯತ್ನಿಸಿದ ನಂತರ ಸೋಮವಾರ ನುಹ್‌ನಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರದ ದೃಷ್ಟಿಯಿಂದ ನುಹ್ ಮತ್ತು ಪಲ್ವಾಲ್ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ನುಹ್‌ನಲ್ಲಿ ಪ್ರಾರಂಭವಾದ ಕೋಮು ಹಿಂಸಾಚಾರವು ಗುರುಗ್ರಾಮವನ್ನು ತಲುಪಿತು.

ಹಿಂಸಾಚಾರದಲ್ಲಿ ಇದುವರೆಗೆ ಆರು ಜನರು ಸಾವನ್ನಪ್ಪಿದ್ದಾರೆ, 116 ಜನರನ್ನು ಬಂಧಿಸಲಾಗಿದೆ ಎಂದು ಹರ್ಯಾಣ ಸರ್ಕಾರ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ