AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ ಹಿಂಸಾಚಾರ: ಗುರುಗ್ರಾಮದ ಎರಡು ಮಸೀದಿಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆತ

ಹರ್ಯಾಣದ ನುಹ್​ ಬಳಿಕ ಮೂರನೇ ದಿನ ಹಿಂಸಾಚಾರವು ಪಲ್ವಾಲ್ ಜಿಲ್ಲೆಯನ್ನೂ ತಲುಪಿದೆ. ಬೆಳಗ್ಗೆಯಿಂದಲೇ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎರಡು ಮಸೀದಿಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ.

ಹರ್ಯಾಣ ಹಿಂಸಾಚಾರ: ಗುರುಗ್ರಾಮದ ಎರಡು ಮಸೀದಿಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆತ
ಹರ್ಯಾಣ ಹಿಂಸಾಚಾರImage Credit source: India Today
ನಯನಾ ರಾಜೀವ್
|

Updated on: Aug 03, 2023 | 11:04 AM

Share

ಹರ್ಯಾಣದ ನುಹ್​ ಬಳಿಕ ಮೂರನೇ ದಿನ ಹಿಂಸಾಚಾರ(Violence)ವು ಪಲ್ವಾಲ್ ಜಿಲ್ಲೆಯನ್ನೂ ತಲುಪಿದೆ. ಬೆಳಗ್ಗೆಯಿಂದಲೇ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎರಡು ಮಸೀದಿಗಳ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಬುಧವಾರ ರಾತ್ರಿ 11.30ರ ಸುಮಾರಿಗೆ ನಡೆದ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿಸಿದ್ದಾರೆ. ಮಸೀದಿಗಳಲ್ಲಿ ಒಂದು ವಿಜಯ್ ಚೌಕ್ ಬಳಿ ಇದ್ದರೆ, ಇನ್ನೊಂದು ಪೊಲೀಸ್ ಠಾಣೆ ಬಳಿ ಇದೆ. ಎರಡೂ ಮಸೀದಿಗಳಿಗೆ ಸ್ವಲ್ಪ ಹಾನಿಯಾಗಿದೆ.

ಘಟನೆಗಳ ಬಗ್ಗೆ ಮಾಹಿತಿ ಬಂದ ಕೂಡಲೇ ಎರಡು ಮಸೀದಿಗಳಿಗೆ ಅಗ್ನಿಶಾಮಕ ದಳಗಳು ಧಾವಿಸಿ ಬೆಂಕಿಯನ್ನು ನಂದಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಪಲ್ವಾಲ್ ಜಿಲ್ಲೆಯ ಮಿನಾರ್ ಗೇಟ್ ಮಾರುಕಟ್ಟೆಯಲ್ಲಿರುವ ಬಳೆ ಅಂಗಡಿಗೆ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

ಮತ್ತಷ್ಟು ಓದಿ: ಹರ್ಯಾಣ ಹಿಂಸಾಚಾರ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, 116 ಜನರ ಬಂಧನ, ದೆಹಲಿಯಿಂದ ಯುಪಿವರೆಗೆ ಕಟ್ಟೆಚ್ಚರ

ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗೆಯನ್ನು ತಡೆಯಲು ಗುಂಪೊಂದು ಯತ್ನಿಸಿದ ನಂತರ ಸೋಮವಾರ ನುಹ್‌ನಲ್ಲಿ ಭುಗಿಲೆದ್ದ ಕೋಮು ಹಿಂಸಾಚಾರದ ದೃಷ್ಟಿಯಿಂದ ನುಹ್ ಮತ್ತು ಪಲ್ವಾಲ್ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಹೇರಲಾಗಿದೆ. ನುಹ್‌ನಲ್ಲಿ ಪ್ರಾರಂಭವಾದ ಕೋಮು ಹಿಂಸಾಚಾರವು ಗುರುಗ್ರಾಮವನ್ನು ತಲುಪಿತು.

ಹಿಂಸಾಚಾರದಲ್ಲಿ ಇದುವರೆಗೆ ಆರು ಜನರು ಸಾವನ್ನಪ್ಪಿದ್ದಾರೆ, 116 ಜನರನ್ನು ಬಂಧಿಸಲಾಗಿದೆ ಎಂದು ಹರ್ಯಾಣ ಸರ್ಕಾರ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು