AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಧರ್ಮವನ್ನು ಬಿಜೆಪಿ ಗುತ್ತಿಗೆ ತೆಗೆದುಕೊಂಡಿದೆಯೇ?: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ತಾನು ಪ್ರಬುದ್ಧ ರಾಜಕಾರಣಿಯಂತೆ ವರ್ತಿಸಿದ್ದೇನೆ. ಬಿಜೆಪಿ ಹಿಂದೂ ದೇವರ ವಾರೀಸುದಾರರಲ್ಲ. ಬಂಗಾಳಿಗಳಿಗೆ ಮಾ ಕಾಳಿಯನ್ನು ಹೇಗೆ ಪೂಜಿಸಬೇಕೆಂದು ಅವರು ಹೇಳಿಕೊಡಬೇಕಿಲ್ಲ. ರಾಮ ಅಥವಾ ಹನುಮಾನ್ ಬಿಜೆಪಿಗೆ ಮಾತ್ರ ಸೇರಿದ್ದಲ್ಲ. ಬಿಜೆಪಿ ಹಿಂದೂ ಧರ್ಮವನ್ನು ಗುತ್ತಿಗೆ ಪಡೆದುಕೊಂಡಿದೆಯೇ ಎಂದು ಮಹುವಾ ಪ್ರಶ್ನಿಸಿದ್ದಾರೆ.

ಹಿಂದೂ ಧರ್ಮವನ್ನು ಬಿಜೆಪಿ ಗುತ್ತಿಗೆ ತೆಗೆದುಕೊಂಡಿದೆಯೇ?: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ
ಮಹುವಾ ಮೊಯಿತ್ರಾ
TV9 Web
| Edited By: |

Updated on: Jul 08, 2022 | 4:36 PM

Share

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ (Mahua Moitra) ಕಾಳಿ ಬಗ್ಗೆ(Kaali Row) ನೀಡಿದ ಹೇಳಿಕೆ ವಿವಾದಕ್ಕೀಡಾಗಿದೆ. ಈ ನಡುವೆ ಕಾಮಾಖ್ಯ ದೇವಾಲಯದಲ್ಲಿ ದೇವರಿಗೆ ಏನು ಅರ್ಪಿಸಲಾಗುತ್ತದೆ ಎಂಬುದರ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಲಿಖಿತ ರೂಪದಲ್ಲಿ ವಿವರಿಸಬಹುದೇ ಎಂದು ಮೊಯಿತ್ರಾ ಕೇಳಿದ್ದಾರೆ. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಮಾ ಕಾಳಿಗೆ ಏನು ಅರ್ಪಿಸಲಾಗುತ್ತದೆ ಎಂಬುದರ ಬಗ್ಗೆ ಇತರ ಮುಖ್ಯಮಂತ್ರಿಗಳೂ ಹೇಳಲಿ. ಈ ದೇವಾಲಯಗಳಲ್ಲಿ ಮದ್ಯ ಅರ್ಪಿಸಲಾಗುತ್ತಿಲ್ಲವೇ? ಬಿಜೆಪಿ (BJP) ಉದ್ದೇಶಪೂರ್ವಕವಾಗಿ ನನ್ನ ಮೇಲೆ ದಾಳಿ ಮಾಡಲು ಬಯಸುತ್ತಿದೆ. ಅವರ ಈ ಕಾರ್ಯತಂತ್ರ ಕೆಲಸ ಮಾಡುವುದಿಲ್ಲ ಎಂದು ಬಂಗಾಳಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಮೊಯಿತ್ರಾ ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ನನ್ನ ವಿರುದ್ಧ ಎಫ್ಐಆರ್ ದಾಖಲಾಗಿರುವ ರಾಜ್ಯಗಳಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನಾನು ಸವಾಲು ಹಾಕುತ್ತಿದ್ದೇನೆ. ಅಲ್ಲಿನ ರಾಜ್ಯಗಳಲ್ಲಿ ಮಾ ಕಾಳಿಗೆ ಏನು ಅರ್ಪಿಸಲಾಗುತ್ತಿದೆ ಎಂಬುದನ್ನು ನ್ಯಾಯಾಲಯಕ್ಕೆ ಅಫಿಡವಿಟ್ ಮೂಲಕ ಸಲ್ಲಿಸಿ ಎಂದಿದ್ದಾರೆ ಮೊಯಿತ್ರಾ.

ತಾನು ಪ್ರಬುದ್ಧ ರಾಜಕಾರಣಿಯಂತೆ ವರ್ತಿಸಿದ್ದೇನೆ. ಬಿಜೆಪಿ ಹಿಂದೂ ದೇವರ ವಾರೀಸುದಾರರಲ್ಲ. ಬಂಗಾಳಿಗಳಿಗೆ ಮಾ ಕಾಳಿಯನ್ನು ಹೇಗೆ ಪೂಜಿಸಬೇಕೆಂದು ಅವರು ಹೇಳಿಕೊಡಬೇಕಿಲ್ಲ. ರಾಮ ಅಥವಾ ಹನುಮಾನ್ ಬಿಜೆಪಿಗೆ ಮಾತ್ರ ಸೇರಿದ್ದಲ್ಲ. ಬಿಜೆಪಿ ಹಿಂದೂ ಧರ್ಮವನ್ನು ಗುತ್ತಿಗೆ ಪಡೆದುಕೊಂಡಿದೆಯೇ ಎಂದು ಮಹುವಾ ಪ್ರಶ್ನಿಸಿದ್ದಾರೆ.

ಇಂಡಿಯಾ ಟುಡೇ ಮೀಡಿಯಾ ಕಾನ್​​​ಕ್ಲೇವ್​​​ನಲ್ಲಿ ಮಾತನಾಡಿದ್ದ ಮೊಯಿತ್ರಾ, ಕಾಳಿ ಮಾಂಸಾಹಾರ, ಮದ್ಯ ಇಷ್ಟ ಪಡುವ ದೇವರು ಎಂದು ಹೇಳಿದ್ದರು. ಈ ಹೇಳಿಕೆಗೆ ಭಾರೀ ಖಂಡನೆ ವ್ಯಕ್ತವಾಗಿದ್ದು, ಪಶ್ಚಿಮ ಬಂಗಾಳ ಸೇರಿದಂತೆ ಹಲವೆಡೆ ಮಹುವಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.  ಮಹುವಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಒತ್ತಾಯಿಸಿದ್ದು ಈ ವಿವಾದ ರಾಜಕೀಯ ತಿರುವು ಪಡೆದುಕೊಂಡಿತು. ಇತ್ತ ತೃಣಮೂಲ ಕಾಂಗ್ರೆಸ್ ಮಹುವಾ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದು ಸಾರ್ವಜನಿಕವಾಗಿ ಹೇಳಿಕೆ ಖಂಡಿಸಿತ್ತು. ಆದಾಗ್ಯೂ, ತಮ್ಮ ಹೇಳಿಕೆಯನ್ನು ಮಹುವಾ ವಾಪಸ್ ಪಡೆದುಕೊಂಡಿಲ್ಲ. ಆದರೆ ಪಶ್ಚಿಮ ಬಂಗಾಳಗ ತಾರಾಪೀಠದಲ್ಲಿ ಮಾ ಕಾಳಿಯನ್ನು ಹೇಗೆ ಪೂಜಿಸಲಾಗುತ್ತಿದೆ ಎಂದು ನಾನು ಹೇಳಿದ್ದೆ ಅಂದಿದ್ದರು.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು