AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಧರ್ಮವನ್ನು ಬಿಜೆಪಿ ಗುತ್ತಿಗೆ ತೆಗೆದುಕೊಂಡಿದೆಯೇ?: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ತಾನು ಪ್ರಬುದ್ಧ ರಾಜಕಾರಣಿಯಂತೆ ವರ್ತಿಸಿದ್ದೇನೆ. ಬಿಜೆಪಿ ಹಿಂದೂ ದೇವರ ವಾರೀಸುದಾರರಲ್ಲ. ಬಂಗಾಳಿಗಳಿಗೆ ಮಾ ಕಾಳಿಯನ್ನು ಹೇಗೆ ಪೂಜಿಸಬೇಕೆಂದು ಅವರು ಹೇಳಿಕೊಡಬೇಕಿಲ್ಲ. ರಾಮ ಅಥವಾ ಹನುಮಾನ್ ಬಿಜೆಪಿಗೆ ಮಾತ್ರ ಸೇರಿದ್ದಲ್ಲ. ಬಿಜೆಪಿ ಹಿಂದೂ ಧರ್ಮವನ್ನು ಗುತ್ತಿಗೆ ಪಡೆದುಕೊಂಡಿದೆಯೇ ಎಂದು ಮಹುವಾ ಪ್ರಶ್ನಿಸಿದ್ದಾರೆ.

ಹಿಂದೂ ಧರ್ಮವನ್ನು ಬಿಜೆಪಿ ಗುತ್ತಿಗೆ ತೆಗೆದುಕೊಂಡಿದೆಯೇ?: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ
ಮಹುವಾ ಮೊಯಿತ್ರಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jul 08, 2022 | 4:36 PM

Share

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ (Mahua Moitra) ಕಾಳಿ ಬಗ್ಗೆ(Kaali Row) ನೀಡಿದ ಹೇಳಿಕೆ ವಿವಾದಕ್ಕೀಡಾಗಿದೆ. ಈ ನಡುವೆ ಕಾಮಾಖ್ಯ ದೇವಾಲಯದಲ್ಲಿ ದೇವರಿಗೆ ಏನು ಅರ್ಪಿಸಲಾಗುತ್ತದೆ ಎಂಬುದರ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಲಿಖಿತ ರೂಪದಲ್ಲಿ ವಿವರಿಸಬಹುದೇ ಎಂದು ಮೊಯಿತ್ರಾ ಕೇಳಿದ್ದಾರೆ. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಮಾ ಕಾಳಿಗೆ ಏನು ಅರ್ಪಿಸಲಾಗುತ್ತದೆ ಎಂಬುದರ ಬಗ್ಗೆ ಇತರ ಮುಖ್ಯಮಂತ್ರಿಗಳೂ ಹೇಳಲಿ. ಈ ದೇವಾಲಯಗಳಲ್ಲಿ ಮದ್ಯ ಅರ್ಪಿಸಲಾಗುತ್ತಿಲ್ಲವೇ? ಬಿಜೆಪಿ (BJP) ಉದ್ದೇಶಪೂರ್ವಕವಾಗಿ ನನ್ನ ಮೇಲೆ ದಾಳಿ ಮಾಡಲು ಬಯಸುತ್ತಿದೆ. ಅವರ ಈ ಕಾರ್ಯತಂತ್ರ ಕೆಲಸ ಮಾಡುವುದಿಲ್ಲ ಎಂದು ಬಂಗಾಳಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಮೊಯಿತ್ರಾ ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ನನ್ನ ವಿರುದ್ಧ ಎಫ್ಐಆರ್ ದಾಖಲಾಗಿರುವ ರಾಜ್ಯಗಳಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ನಾನು ಸವಾಲು ಹಾಕುತ್ತಿದ್ದೇನೆ. ಅಲ್ಲಿನ ರಾಜ್ಯಗಳಲ್ಲಿ ಮಾ ಕಾಳಿಗೆ ಏನು ಅರ್ಪಿಸಲಾಗುತ್ತಿದೆ ಎಂಬುದನ್ನು ನ್ಯಾಯಾಲಯಕ್ಕೆ ಅಫಿಡವಿಟ್ ಮೂಲಕ ಸಲ್ಲಿಸಿ ಎಂದಿದ್ದಾರೆ ಮೊಯಿತ್ರಾ.

ತಾನು ಪ್ರಬುದ್ಧ ರಾಜಕಾರಣಿಯಂತೆ ವರ್ತಿಸಿದ್ದೇನೆ. ಬಿಜೆಪಿ ಹಿಂದೂ ದೇವರ ವಾರೀಸುದಾರರಲ್ಲ. ಬಂಗಾಳಿಗಳಿಗೆ ಮಾ ಕಾಳಿಯನ್ನು ಹೇಗೆ ಪೂಜಿಸಬೇಕೆಂದು ಅವರು ಹೇಳಿಕೊಡಬೇಕಿಲ್ಲ. ರಾಮ ಅಥವಾ ಹನುಮಾನ್ ಬಿಜೆಪಿಗೆ ಮಾತ್ರ ಸೇರಿದ್ದಲ್ಲ. ಬಿಜೆಪಿ ಹಿಂದೂ ಧರ್ಮವನ್ನು ಗುತ್ತಿಗೆ ಪಡೆದುಕೊಂಡಿದೆಯೇ ಎಂದು ಮಹುವಾ ಪ್ರಶ್ನಿಸಿದ್ದಾರೆ.

ಇಂಡಿಯಾ ಟುಡೇ ಮೀಡಿಯಾ ಕಾನ್​​​ಕ್ಲೇವ್​​​ನಲ್ಲಿ ಮಾತನಾಡಿದ್ದ ಮೊಯಿತ್ರಾ, ಕಾಳಿ ಮಾಂಸಾಹಾರ, ಮದ್ಯ ಇಷ್ಟ ಪಡುವ ದೇವರು ಎಂದು ಹೇಳಿದ್ದರು. ಈ ಹೇಳಿಕೆಗೆ ಭಾರೀ ಖಂಡನೆ ವ್ಯಕ್ತವಾಗಿದ್ದು, ಪಶ್ಚಿಮ ಬಂಗಾಳ ಸೇರಿದಂತೆ ಹಲವೆಡೆ ಮಹುವಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.  ಮಹುವಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ಒತ್ತಾಯಿಸಿದ್ದು ಈ ವಿವಾದ ರಾಜಕೀಯ ತಿರುವು ಪಡೆದುಕೊಂಡಿತು. ಇತ್ತ ತೃಣಮೂಲ ಕಾಂಗ್ರೆಸ್ ಮಹುವಾ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದು ಸಾರ್ವಜನಿಕವಾಗಿ ಹೇಳಿಕೆ ಖಂಡಿಸಿತ್ತು. ಆದಾಗ್ಯೂ, ತಮ್ಮ ಹೇಳಿಕೆಯನ್ನು ಮಹುವಾ ವಾಪಸ್ ಪಡೆದುಕೊಂಡಿಲ್ಲ. ಆದರೆ ಪಶ್ಚಿಮ ಬಂಗಾಳಗ ತಾರಾಪೀಠದಲ್ಲಿ ಮಾ ಕಾಳಿಯನ್ನು ಹೇಗೆ ಪೂಜಿಸಲಾಗುತ್ತಿದೆ ಎಂದು ನಾನು ಹೇಳಿದ್ದೆ ಅಂದಿದ್ದರು.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!