Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋತು ಸೋತು ದಾಖಲೆ ನಿರ್ಮಿಸುತ್ತೇನೆ ಎನ್ನುತ್ತಾರೆ ಈ ವೃದ್ಧ; ತಮ್ಮ 94ನೇ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ಸ್ವತಂತ್ರ ಅಭ್ಯರ್ಥಿ

1988ರಲ್ಲಿ ಭಾರತದ ರಾಷ್ಟ್ರಪತಿ ಚುನಾವಣೆಗೂ ಸ್ಪರ್ಧಿಸಲು ಅವರು ನಾಮಪತ್ರ ಸಲ್ಲಿಸಿದ್ದರು. ಆದರೆ ಅದು ತಿರಸ್ಕೃತಗೊಂಡಿತ್ತು. 2019ರಲ್ಲಿ ಆಗ್ರಾ ಮತ್ತು ಫತೇಹ್​​ಪುರ್​ ಕ್ಷೇತ್ರದಿಂದ ಸ್ಪರ್ಧಿಸಿದ್ದರು.  2021ರಲ್ಲಿ ಜಿಲ್ಲಾ ಪಂಚಾಯತ್​ ಚುನಾವಣೆಗಳಲ್ಲೂ ಸ್ಪರ್ಧಿಸಿದ್ದರು.

ಸೋತು ಸೋತು ದಾಖಲೆ ನಿರ್ಮಿಸುತ್ತೇನೆ ಎನ್ನುತ್ತಾರೆ ಈ ವೃದ್ಧ; ತಮ್ಮ 94ನೇ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ಸ್ವತಂತ್ರ ಅಭ್ಯರ್ಥಿ
ಹಸನೂರಾಮ್ ಅಂಬೇಡ್ಕರಿ
Follow us
TV9 Web
| Updated By: Lakshmi Hegde

Updated on:Jan 20, 2022 | 6:25 PM

ಆಗ್ರಾ: ಉತ್ತರಪ್ರದೇಶದ ಆಗ್ರಾದ ಖೇರಗಢ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು 74 ವರ್ಷದ ಹಸನೂರಾಮ್ ಅಂಬೇಡ್ಕರಿ ಎಂಬುವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ನಾಮಪತ್ರವನ್ನೂ ಸಲ್ಲಿಸಿಯಾಗಿದೆ. ಆದರೆ ಇದರಲ್ಲಿ ಒಂದು ದೊಡ್ಡ ವಿಶೇಷವಿದೆ. ಅದೇನೆಂದರೆ ಹಸನೂರಾಮ್​ರಿಗೆ ಇದು 94ನೇ ಚುನಾವಣೆ. ಅಂದರೆ ಅವರೀಗ 94ನೇ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಅಂಬೇಡ್ಕರಿ ಅವರು ಕೃಷಿ ಕಾರ್ಮಿಕರು ಮತ್ತು ನರೇಗಾ ಉದ್ಯೋಗ ಕಾರ್ಡ್​ ಹೊಂದಿದ್ದಾರೆ. ಇವರು ಶಾಲೆಗೆ ಹೋಗಿ ವಿದ್ಯಾಭ್ಯಾಸ ಕಲಿತವರೇನೂ ಅಲ್ಲ. ಹಾಗಿದ್ದಾಗ್ಯೂ ಹಿಂದಿ, ಉರ್ದು, ಇಂಗ್ಲಿಷ್​​ ಭಾಷೆಯನ್ನು ಸರಾಗವಾಗಿ ಓದುತ್ತಾರೆ. ಬರೆಯುತ್ತಾರೆ. 

ಅಂಬೇಡ್ಕರಿ ಅವರು 1985ರಿಂದಲೂ ಹಲವು ವಿಧದ ಚುನಾವಣೆಗಳಲ್ಲಿ ಭಾಗವಹಿಸುತ್ತಲೇ ಇದ್ದಾರೆ. ರಾಜ್ಯದ ವಿಧಾನಸಭೆ ಚುನಾವಣೆಗಳು, ಲೋಕಸಭಾ ಚುನಾವಣೆ, ಪಂಚಾಯತ್​ ಚುನಾವಣೆಗಳು ಸೇರಿ ವಿವಿಧ ಮಾದರಿಗಳ ಇಲೆಕ್ಷನ್​ಗಳಲ್ಲಿ, ಬೇರೆಬೇರೆ ಕ್ಷೇತ್ರ, ಸೀಟ್​ಗಳಿಂದ ಸ್ಪರ್ಧಿಸಿದ್ದಾರೆ. ಅದೆಲ್ಲ ಸೇರಿ ಇಲ್ಲಿಯವರೆಗೆ ಒಟ್ಟು 93 ಚುನಾವಣೆಗಳಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಹಾಗೇ ಇವರು ಅಖಿಲ ಭಾರತೀಯ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯದ ನೌಕರರ ಒಕ್ಕೂಟದ ಸದಸ್ಯರೂ ಹೌದು.

1988ರಲ್ಲಿ ಭಾರತದ ರಾಷ್ಟ್ರಪತಿ ಚುನಾವಣೆಗೂ ಸ್ಪರ್ಧಿಸಲು ಅವರು ನಾಮಪತ್ರ ಸಲ್ಲಿಸಿದ್ದರು. ಆದರೆ ಅದು ತಿರಸ್ಕೃತಗೊಂಡಿತ್ತು. 2019ರಲ್ಲಿ ಆಗ್ರಾ ಮತ್ತು ಫತೇಹ್​​ಪುರ್​ ಕ್ಷೇತ್ರದಿಂದ ಸ್ಪರ್ಧಿಸಿದ್ದರು.  2021ರಲ್ಲಿ ಜಿಲ್ಲಾ ಪಂಚಾಯತ್​ ಚುನಾವಣೆಗಳಲ್ಲೂ ಸ್ಪರ್ಧಿಸಿದ್ದರು. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಹಸನೂರಾಮ್ ಅಂಬೇಡ್ಕರಿ, ನಾನು ಸೋಲಲೆಂದೇ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಗೆಲ್ಲುವ ರಾಜಕಾರಣಿಗಳು ನಂತರ ಜನಸಮೂಹವನ್ನು ಮರೆಯುತ್ತಾರೆ. ನಾನು 100 ಚುನಾವಣೆಗಳಲ್ಲಿ ಸ್ಪರ್ಧಿಸಿ ಸೋತು, ದಾಖಲೆ ನಿರ್ಮಿಸಲು ಹೊರಟಿದ್ದೇನೆ. ನಾನು ಅಂಬೇಡ್ಕರ್ ಅವರ ಕಟ್ಟಾ ಅನುಯಾಯಿ. ನನಗೆ ಚುನಾವಣೆಯಲ್ಲಿ ನನ್ನ ಪ್ರತಿಸ್ಪರ್ಧಿಗಳು ಯಾರು ಎಂಬ ಬಗ್ಗೆ ಯೋಚನೆಯಿಲ್ಲ. ಯಾರೆಲ್ಲ ಅಂಬೇಡ್ಕರ್ ತತ್ವಗಳನ್ನು ಗೌರವಿಸುತ್ತಾರೋ, ಅವರು ನನಗೆ ಮತ ಹಾಕುತ್ತಾರೆ ಎಂದು ಹೇಳಿದ್ದಾರೆ.

ಇಷ್ಟು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರೂ ಅವರಿಗೆ ಇದುವರೆಗೆ ಬಂದ ಅತ್ಯಂತ ಹೆಚ್ಚಿನ ಮತಗಳು 36 ಸಾವಿರ. ಅದು 1989ರ ಲೋಕಸಭೆ ಚುನಾವಣೆಯಲ್ಲಿ ಫಿರೋಜಾಬಾದ್ ಕ್ಷೇತ್ರದಿಂದ ಸ್ಪರ್ಧಿಸಿದಾಗ ಬಂದಿತ್ತು. ಇದೀಗ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿರುವ ಅವರು, ಈಗಾಗಲೇ ಮನೆಮನೆ ಪ್ರಚಾರ ಶುರು ಮಾಡಿದ್ದಾರೆ.  ಅಂದಹಾಗೆ, ಅವರು 1985ರ ಸಮಯದಲ್ಲಿ ಬಹುಜನ ಸಮಾಜ ಪಾರ್ಟಿಯನ್ನು ಸೇರಿದ್ದರು. ಆದರೆ ಟಿಕೆಟ್ ಕೇಳಿದ್ದಕ್ಕೆ, ಪಕ್ಷದ ವರಿಷ್ಠರು ತುಂಬ ಕಟುವಾಗಿ ಮಾತನಾಡಿದ್ದರು. ನಿಮಗೆ ಟಿಕೆಟ್​ ಕೊಟ್ಟರೆ ನಿಮ್ಮ ಹೆಂಡತಿಯೂ ಮತ ಹಾಕುವುದಿಲ್ಲ ಎಂದು ಮುಖಂಡರು ಹೇಳಿದ್ದಕ್ಕೆ, ಬೇಸರಗೊಂಡು ನಾನು ಆ ಪಕ್ಷ ಬಿಟ್ಟುಬಿಟ್ಟೆ ಎಂದೂ ಹೇಳಿಕೊಂಡಿದ್ದಾರೆ.  ಹಾಗೇ, ಅಂದಿನಿಂದಲೂ ಸ್ವತಂತ್ರ ಅಭ್ಯರ್ಥಿಯಾಗಿಗೇ ಸ್ಪರ್ಧಿಸುತ್ತಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: Petrol- Diesel Price: ತೈಲ ಬೆಲೆ 7 ವರ್ಷದ ಗರಿಷ್ಠ, 4 ವಾರಗಳಲ್ಲಿ ಶೇ 25ರಷ್ಟು ಹೆಚ್ಚಳ; ಪೆಟ್ರೋಲ್, ಡೀಸೆಲ್ ದರ ಏರಿಕೆ ಸಾಧ್ಯತೆ

Published On - 6:25 pm, Thu, 20 January 22

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಹೋರಿ ಹಬ್ಬ ಅವಳಿಗೆ ಪಂಚಪ್ರಾಣ: ಕೊಲೆಯಾದ ಸ್ವಾತಿ ನೆನೆದು ಗೆಳತಿ ಕಣ್ಣೀರು
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!
ಚಕ್ರಗಳನ್ನು ಕದಿಯಲು ಕಳ್ಳರು ಬಂದಿದ್ದು ಇನ್ನೋವಾ ಕಾರಲ್ಲಂತೆ!