AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಲ್ಗಾಮ್​ ದಾಳಿ: ಉಗ್ರರಲ್ಲಿ ಒಬ್ಬ ಪಾಕಿಸ್ತಾನ ಸೇನೆಯ ಮಾಜಿ ಕಮಾಂಡೋ

Pahalgam Terror Attack: ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಪಹಲ್ಗಾಮ್​(Pahalgam)ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಭಾಗಿಯಾಗಿದ್ದ ಲಷ್ಕರ್​ ಉಗ್ರನೊಬ್ಬ ಪಾಕಿಸ್ತಾನ ಸೇನೆಯ ಮಾಜಿ ಕಮಾಂಡೋ ಎಂಬುದು ತಿಳಿದುಬಂದಿದೆ. ಇಂಡಿಯಾ ಟಿವಿ ಈ ಕುರಿತು ವರದಿ ಮಾಡಿದ್ದು, ಆತ ಹತ್ಯಾಕಾಂಡ ನಡೆಸುವ ಉದ್ದೇಶಕ್ಕಾಗಿಯೇ ಸೇನೆ ತೊರೆದು ಲಷ್ಕರ್​-ಎ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ್ದ ಎನ್ನಲಾಗಿದೆ.

ಪಹಲ್ಗಾಮ್​ ದಾಳಿ: ಉಗ್ರರಲ್ಲಿ ಒಬ್ಬ ಪಾಕಿಸ್ತಾನ ಸೇನೆಯ ಮಾಜಿ ಕಮಾಂಡೋ
ಉಗ್ರರುImage Credit source: Timesnow
ನಯನಾ ರಾಜೀವ್
|

Updated on:May 22, 2025 | 12:50 PM

Share

ಶ್ರೀನಗರ, ಏಪ್ರಿಲ್ 29: ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಪಹಲ್ಗಾಮ್​(Pahalgam)ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಭಾಗಿಯಾಗಿದ್ದ ಲಷ್ಕರ್​ ಉಗ್ರನೊಬ್ಬ ಪಾಕಿಸ್ತಾನ ಸೇನೆಯ ಮಾಜಿ ಕಮಾಂಡೋ ಎಂಬುದು ತಿಳಿದುಬಂದಿದೆ. ಇಂಡಿಯಾ ಟಿವಿ ಈ ಕುರಿತು ವರದಿ ಮಾಡಿದ್ದು, ಆತ ಹತ್ಯಾಕಾಂಡ ನಡೆಸುವ ಉದ್ದೇಶಕ್ಕಾಗಿಯೇ ಸೇನೆ ತೊರೆದು ಲಷ್ಕರ್​-ಎ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ್ದ ಎನ್ನಲಾಗಿದೆ.

ದಿನ ಕಳೆದಂತೆ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಪಿತೂರಿ ಐಎಸ್ಐ ಮತ್ತು ದೇಶದ ಸೇನೆಯ ನೇರ ಭಾಗಿಯಾಗಿರುವ ಬಗ್ಗೆ ಹೆಚ್ಚು ಹೆಚ್ಚು ಮಾಹಿತಿಗಳು ಬೆಳಕಿಗೆ ಬರುತ್ತಿವೆ. ಈ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎಂದು ಗುರುತಿಸಲಾದ ಪಾಕಿಸ್ತಾನಿ ಭಯೋತ್ಪಾದಕ ಹಾಶಿಮ್ ಮೂಸಾ ಪಾಕಿಸ್ತಾನ ಸೇನೆಯ ವಿಶೇಷ ಪಡೆಗಳ ಮಾಜಿ ಪ್ಯಾರಾ ಕಮಾಂಡೋ ಎಂಬುದು ದೃಢಪಟ್ಟಿದೆ.

ಪಾಕಿಸ್ತಾನ ಮೂಲದ ನಿಷೇಧಿತ ಸಂಘಟನೆ ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ದೊಂದಿಗೆ ಸಂಬಂಧ ಹೊಂದಿರುವ ಭಯೋತ್ಪಾದಕ ಮೂಸಾನನ್ನು ಕಾಶ್ಮೀರಕ್ಕೆ ಸ್ಥಳೀಯರಲ್ಲದವರು ಮತ್ತು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ನಿರ್ದಿಷ್ಟ ಕಾರ್ಯಾಚರಣೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ
Image
ಬನ್ನೇರುಘಟ್ಟ ಜೂ, ಸಫಾರಿಗೆ ಆನ್​ಲೈನ್ ಮೂಲಕ ಟಿಕೆಟ್ ಬುಕ್ ಮಾಡುವಾಗ ಎಚ್ಚರ
Image
‘ಭಾರತವನ್ನು ದ್ವೇಷಿಸುತ್ತೇನೆ’: ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್
Image
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ ಸೌಲಭ್ಯ
Image
ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಆನ್​ಲೈನ್ ವಂಚನೆ: ಎಚ್ಚರದಿಂದಿರಿ

ಪಾಕಿಸ್ತಾನದ ವಿಶೇಷ ಪಡೆಗಳಾದ ಸ್ಪೆಷಲ್ ಸರ್ವಿಸ್ ಗ್ರೂಪ್ (ಎಸ್‌ಎಸ್‌ಜಿ) ಅವನನ್ನು ಎಲ್‌ಇಟಿಗೆ ವರ್ಗಾಯಿಸಿದೆ ಎಂದು ಮೂಲಗಳು ತಿಳಿಸಿವೆ. ಎನ್‌ಐಎ ತನಿಖೆಯು ಮೂಸಾ ಪಾಕಿಸ್ತಾನ ಸೇನೆಯಲ್ಲಿನ ಹಿನ್ನೆಲೆಯನ್ನು ಸಹ ಬಹಿರಂಗಪಡಿಸಿದೆ.

ಮತ್ತಷ್ಟು ಓದಿ: Khawaja Asif: ಭಾರತದಲ್ಲಿ ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸಿಫ್ ‘ಎಕ್ಸ್​’ ಖಾತೆ ನಿರ್ಬಂಧ

ಆತ ದಾಳಿಯ ಪ್ರಮುಖ ಶಂಕಿತರಲ್ಲಿ ಒಬ್ಬ. ಪಹಲ್ಗಾಮ್ ದಾಳಿಯಲ್ಲಿ ಮತ್ತು ಕಾಶ್ಮೀರದಲ್ಲಿ ಈ ಹಿಂದೆ ನಡೆದ ದಾಳಿಗಳಲ್ಲಿ ಐಎಸ್‌ಐ ನೇರ ಭಾಗಿಯಾಗಿರುವ ಅನುಮಾನಗಳನ್ನು ಮತ್ತಷ್ಟು ಬಲಪಡಿಸಿದೆ. ಈ ಹಿಂದಿನ ಘಟನೆಗಳಲ್ಲಿ ಅಕ್ಟೋಬರ್ 2024 ರಲ್ಲಿ ಗಂಡೇರ್‌ಬಲ್‌ನ ಗಗಂಗೀರ್‌ನಲ್ಲಿ ನಡೆದ ದಾಳಿಗಳು ಕೂಡ ಸೇರಿದೆ. ಇದರಲ್ಲಿ ಆರು ಸ್ಥಳೀಯರಲ್ಲದವರು ಮತ್ತು ಒಬ್ಬ ವೈದ್ಯರು ಸಾವನ್ನಪ್ಪಿದ್ದರು, ಮತ್ತು ಬಾರಾಮುಲ್ಲಾದ ಬುಟಾ ಪತ್ರಿಯಲ್ಲಿ ಇಬ್ಬರು ಸೈನಿಕರು ಮತ್ತು ಇಬ್ಬರು ಸೇನಾ ಪೋರ್ಟರ್‌ಗಳು ಸಾವನ್ನಪ್ಪಿದ್ದರು. ಈ ಮೂರು ದಾಳಿಗಳ ಹಿಂದೆ ಮೂಸಾ ಇದ್ದ ಎಂದು ತಿಳಿದುಬಂದಿದೆ.

ಪಾಕಿಸ್ತಾನದಲ್ಲಿ ತರಬೇತಿ ಪಡೆದ ಇಬ್ಬರು ಸ್ಥಳೀಯ ಭಯೋತ್ಪಾದಕರಾದ ಜುನೈದ್ ಅಹ್ಮದ್ ಭಟ್ ಮತ್ತು ಅರ್ಬಾಜ್ ಮಿರ್, ಗಗಂಗೀರ್ ಮತ್ತು ಬುಟಾ ಪತ್ರಿ ದಾಳಿಗಳಲ್ಲಿ ಭಾಗಿಯಾಗಿದ್ದರು ಆದರೆ 2024 ರ ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಅವರನ್ನು ತಟಸ್ಥಗೊಳಿಸಲಾಯಿತು. ಅಂದಿನಿಂದ ಮೂಸಾ ಕಾಶ್ಮೀರದಲ್ಲಿ ಸ್ಥಳೀಯರಲ್ಲದವರ ವಿರುದ್ಧ ಭಯೋತ್ಪಾದನಾ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾನೆ.

ಇದು ಬೈಸರನ್‌ನಲ್ಲಿ 25 ಪ್ರವಾಸಿಗರು ಸೇರಿದಂತೆ 26ಜನರ ಕ್ರೂರ ಹತ್ಯೆಯಲ್ಲಿ ಕೊನೆಗೊಂಡಿತು. ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವಾರು ಭಯೋತ್ಪಾದಕರು ಸಕ್ರಿಯರಾಗಿದ್ದು, ಭಾರತದ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಈ ಉಗ್ರಗಾಮಿಗಳು ಸೋಪೋರ್, ಪುಲ್ವಾಮಾ ಮತ್ತು ಶೋಪಿಯಾನ್‌ನಂತಹ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅನಂತ್‌ನಾಗ್ ಮತ್ತು ಕುಲ್ಗಮ್‌ನಲ್ಲಿಯೂ ಸಹ ಅನೇಕ ಭಯೋತ್ಪಾದಕರು ಇದ್ದಾರೆ.

14 ಭಯೋತ್ಪಾದಕರ ಹೆಸರುಗಳನ್ನು ಒಳಗೊಂಡಿರುವ ಹಿಟ್‌ಲಿಸ್ಟ್ ಇದೆ. ಅವರಲ್ಲಿ, ಸೋಪೋರ್‌ನ ಆದಿಲ್ ರೆಹಮಾನ್, ಪುಲ್ವಾಮಾದ ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಪ್ರಮುಖ ಗುರಿಗಳಾಗಿವೆ. ಶೋಪಿಯಾನ್‌ನಿಂದ, ಆಸಿಫ್ ಅಹ್ಮದ್, ನಸೀರ್ ಅಹ್ಮದ್, ಶಾಹಿದ್ ಅಹ್ಮದ್, ಅಮೀರ್ ಅಹ್ಮದ್ ದಾರ್ ಮತ್ತು ಅದ್ನಾನ್ ದಾರ್ ಇದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:08 pm, Tue, 29 April 25

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ