AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ರಾಸ್​ ಗ್ಯಾಂಗ್​ರೇಪ್: ನಾಲ್ವರು ಆರೋಪಿಗಳ ವಿರುದ್ಧ ಸಿಬಿಐ ಚಾರ್ಜ್​ಶೀಟ್

ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿರುವುದು ನಿಜ ಎಂದು ಸಿಬಿಐ ಚಾರ್ಜ್​​ಶೀಟ್​ನಲ್ಲಿ ಉಲ್ಲೇಖ ಮಾಡಿದೆ.

ಹತ್ರಾಸ್​ ಗ್ಯಾಂಗ್​ರೇಪ್: ನಾಲ್ವರು ಆರೋಪಿಗಳ ವಿರುದ್ಧ ಸಿಬಿಐ ಚಾರ್ಜ್​ಶೀಟ್
ಹತ್ರಾಸ್​ನಲ್ಲಿ ಬಾಲಕಿ ಶವ ಸುಟ್ಟ ಪೊಲೀಸ್ ಅಧಿಕಾರಿಗಳು (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on:Dec 18, 2020 | 4:40 PM

Share

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಆರೋಪಿಗಳ ವಿರುದ್ಧ ಅತ್ಯಾಚಾರ-ಕೊಲೆ ಪ್ರಕರಣ ದಾಖಲಾಗಿದೆ.

ಈ ಮೊದಲು ವರದಿ ನೀಡಿದ್ದ ಸಿಬಿಐ, ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ಹೇಳಿತ್ತು. ಆದರೆ, ಈಗ ಹೆಚ್ಚಿನ ತನಿಖೆ ನಡೆಸಿರುವ ಸಿಬಿಐ, ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿರುವುದು ನಿಜ ಎಂದು ಚಾರ್ಜ್​​ಶೀಟ್​ನಲ್ಲಿ ಉಲ್ಲೇಖ ಮಾಡಿದೆ.

ಎಸ್​ಸಿ/ಎಸ್​ಟಿ ದೌರ್ಜನ್ಯ ತಡೆ ಕಾಯ್ದೆ ಸೆಕ್ಷನ್​ 376 ಡಿ, ಸೆಕ್ಷನ್​ 302 ಸೆಕ್ಷನ್​ 354 ಹಾಗೂ 376 ಎ ಅಡಿಯಲ್ಲಿ ಸಿಬಿಐ ದೂರು ದಾಖಲು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿ ಸಂದೀಪ್​, ಲವಕುಶ್, ರವಿ ಹಾಗೂ ರಾಮು ಅವರನ್ನು ಬಂಧಿಸಲಾಗಿತ್ತು.

ಸೆ.14ರಂದು ಉತ್ತರ ಪ್ರದೇಶದ ಹತ್ರಾಸ್​ನಲ್ಲಿ 19 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿತ್ತು. ನಂತರ ಈಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸೆ.29ರಂದು ಬಾಲಕಿ ಮೃತಪಟ್ಟಿದ್ದಳು. ಬಾಲಕಿ ಶವವನ್ನು ಕುಟುಂಬದವರಿಗೂ ನಿಡದೆಯೇ ಅಂತ್ಯ ಸಂಸ್ಕಾರ ಮಾಡಿದ್ದಕ್ಕೆ ಭಾರೀ ಆಕ್ರೋಶಕ್ಕೆ ವ್ಯಕ್ತವಾಗಿತ್ತು. ಅಲ್ಲದೆ, ಈ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎನ್ನುವ ಆಗ್ರಹ ಕೂಡ ಕೇಳಿ ಬಂದಿತ್ತು. ಒತ್ತಡ ಹೆಚ್ಚಿದ ನಂತರದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಿದ್ದರು.

ಹತ್ರಾಸ್‌ ಅತ್ಯಾಚಾರ-ಕೊಲೆ ಪ್ರಕರಣ: ತನಿಖೆಯ ಹೊಣೆ CBIಗೆ ವಹಿಸಿದ ಯುಪಿ ಸರ್ಕಾರ

Published On - 4:39 pm, Fri, 18 December 20

Follow Us
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ