AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ರಾಸ್ ಬರ್ಬರ ಘಟನೆ: ಯೋಗಿ ಸರ್ಕಾರ ವಿರುದ್ಧ ಭುಗಿಲೆದ್ದ ಆಕ್ರೋಶ

ಉತ್ತರಪ್ರದೇಶದ ಹತ್ರಾಸ್​ನಲ್ಲಿ 19 ವರ್ಷದ ಯುವತಿ ಮೇಲೆ ಮಾನವ ರೂಪಿ ರಾಕ್ಷಸರು ಅತ್ಯಾಚಾರವೆಸಗಿ, ಬರ್ಬರವಾಗಿ ಕೊಲೆಮಾಡಿದ ಪ್ರಕರಣ ಇಡೀ ರಾಷ್ಟ್ರವನ್ನೇ ಕೆರಳಿಸಿದೆ. ಉತ್ತರಪ್ರದೇಶವನ್ನು ರಾಮ ರಾಜ್ಯವನ್ನಾಗಿಸುತ್ತೇನೆ ಅಂತ ದಿನಬೆಳಗಾದರೆ ಬೊಗಳೆ ಬಿಡುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಡಳಿತದ ರಾಜ್ಯದಲ್ಲಿ ಈಗ ಅಕ್ಷರಶ: ಕಾಮ ಪಿಶಾಚಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಮರ್ಯಾದಾ ಪುರುಷೋತ್ತಮ ರಾಮನ ನಾಡಿನಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲ. ಅಲ್ಲದೆ ನತದೃಷ್ಟ ಯುವತಿಯನ್ನು ಧಾರ್ಮಿಕ ವಿಧಿವಿಧಾನಗಳಿಲ್ಲದೆ ಪೊಲೀಸರೇ ಅಂತ್ಯಸಂಸ್ಕಾರ ನಡೆಸಿದ್ದು ಪ್ರತಿಯೊಬ್ಬ ಭಾರತೀಯನನ್ನು ರೊಚ್ಚಿಗೆಬ್ಬಿಸಿದೆ. ಸೆಪ್ಟೆಂಬರ್ 14ರಂದು ಹತ್ರಾಸ್​ನ […]

ಹತ್ರಾಸ್ ಬರ್ಬರ ಘಟನೆ: ಯೋಗಿ ಸರ್ಕಾರ ವಿರುದ್ಧ ಭುಗಿಲೆದ್ದ ಆಕ್ರೋಶ
ಅರುಣ್​ ಕುಮಾರ್​ ಬೆಳ್ಳಿ
| Updated By: ಸಾಧು ಶ್ರೀನಾಥ್​|

Updated on:Oct 02, 2020 | 8:29 AM

Share

ಉತ್ತರಪ್ರದೇಶದ ಹತ್ರಾಸ್​ನಲ್ಲಿ 19 ವರ್ಷದ ಯುವತಿ ಮೇಲೆ ಮಾನವ ರೂಪಿ ರಾಕ್ಷಸರು ಅತ್ಯಾಚಾರವೆಸಗಿ, ಬರ್ಬರವಾಗಿ ಕೊಲೆಮಾಡಿದ ಪ್ರಕರಣ ಇಡೀ ರಾಷ್ಟ್ರವನ್ನೇ ಕೆರಳಿಸಿದೆ. ಉತ್ತರಪ್ರದೇಶವನ್ನು ರಾಮ ರಾಜ್ಯವನ್ನಾಗಿಸುತ್ತೇನೆ ಅಂತ ದಿನಬೆಳಗಾದರೆ ಬೊಗಳೆ ಬಿಡುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಡಳಿತದ ರಾಜ್ಯದಲ್ಲಿ ಈಗ ಅಕ್ಷರಶ: ಕಾಮ ಪಿಶಾಚಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಮರ್ಯಾದಾ ಪುರುಷೋತ್ತಮ ರಾಮನ ನಾಡಿನಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲ. ಅಲ್ಲದೆ ನತದೃಷ್ಟ ಯುವತಿಯನ್ನು ಧಾರ್ಮಿಕ ವಿಧಿವಿಧಾನಗಳಿಲ್ಲದೆ ಪೊಲೀಸರೇ ಅಂತ್ಯಸಂಸ್ಕಾರ ನಡೆಸಿದ್ದು ಪ್ರತಿಯೊಬ್ಬ ಭಾರತೀಯನನ್ನು ರೊಚ್ಚಿಗೆಬ್ಬಿಸಿದೆ.

ಸೆಪ್ಟೆಂಬರ್ 14ರಂದು ಹತ್ರಾಸ್​ನ ಜಮೀನೊಂದರಲ್ಲಿ ಕೆಲಸ ಮಾಡ್ತಿದ್ದ ದಲಿತ ಯುವತಿಯ ಮೇಲೆ ನಾಲ್ವರು ಕಾಮುಕರು ಪೈಶಾಚಿಕವಾಗಿ ಅತ್ಯಾಚಾರವೆಸಗಿದ್ದೂ ಅಲ್ಲದೆ, ಆಕೆಯ ಮೇಲೆ ಭೀಕರವಾಗಿ ಹಲ್ಲೆ ಕೂಡ ನಡೆಸಿದ್ದರು. ರಕ್ತದ ಮಡುವಿನಲ್ಲಿ ಬೆತ್ತಲೆಯಾಗಿ ಬಿದ್ದಿದ್ದ ಯುವತಿಯನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಆಕೆಯನ್ನು ದೆಹಲಿಯ ಏಮ್ಸ್​ಗೆ ಸಹ ಸ್ಥಳಾಂತರಿಸಲಾಗಿತ್ತು. ಆದರೆ ಅಲ್ಲೂ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರದಂದು ಆಕೆ ಕೊನೆಯುಸಿರೆಳೆದಳು.

ಆಕೆಯ ಮೃತದೇಹವನ್ನ ಗ್ರಾಮಕ್ಕೆ ತೆಗೆದುಕೊಂಡು ಬಂದ ಪೊಲೀಸರು ಹೆತ್ತವರಿಗೂ ಕೊನೆಯ ಬಾರಿಗೆ ಒಮ್ಮೆ ನೋಡಲು ಬಿಡಲಿಲ್ಲ. ಅವರು ಆ್ಯಂಬುಲೆನ್ಸ್​ಗೆ ಅಡ್ಡಗಟ್ಟಿ ಅಂಗಾಲಾಚಿದರೂ ಖಾಕಿಧಾರಿಗಳ ಮನಸ್ಸು ಕರಗಿರಲಿಲ್ಲ. ಅಂತ್ಯಸಂಸ್ಕಾರದ ಯಾವ ಶಾಸ್ತ್ರವನ್ನೂ ಮಾಡಲು ಅವರಿಗೆ ಅವಕಾಶ ನೀಡಲಿಲ್ಲ. ಕುಟುಂಬಸ್ಥರ ಇಚ್ಛೆಗೆ ವಿರುದ್ಧವಾಗಿ ಪೊಲೀಸರೇ ಮೃತದೇಹವನ್ನ ತೆಗೆದುಕೊಂಡು ಹೋಗಿ ಅಂತ್ಯಸಂಸ್ಕಾರ ನಡೆಸಿದರು.

ಅಷ್ಟು ಮಾತ್ರವಲ್ಲ, ಘಟನೆ ವೇಳೆ ಸ್ಥಳದಲ್ಲಿದ್ದ ಮಾಧ್ಯಮಗಳ ಎದುರೇ, ಯುವತಿಯ ಕುಟುಂಬದವರಿಗೆ ಬೆದರಿಕೆ ಹಾಕಿದ್ದಾರೆ. ‘ಮಾಧ್ಯಮಗಳು ಯಾವಗಲೂ ನಿಮ್ಮ ಜೊತೆ ಇರಲ್ಲ, ಆದ್ರೆ ನೀವು ಇಲ್ಲೇ ಬದುಕಬೇಕು, ಆಲೋಚಿಸಿ’ ಅಂತ ಅಧಿಕಾರಿಯೊಬ್ಬ ಅವರಿಗೆ ಹೆದರಿಸಿದ್ದಾನೆ. ಪೊಲೀಸರ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಯಾರನ್ನೋ ರಕ್ಷಿಸುವುದಕ್ಕಾಗಿ ಈ ರೀತಿ ಮಾಡಿದ್ದಾರೆ ಎಂಬ ಸಂಶಯ ದಟ್ಟವಾಗುತ್ತಿದೆ. ಪೊಲೀಸರು ಅದ್ಹೇಗೆ ಕಟುಕರಂತೆ ಅಷ್ಟು ಅಮಾನವೀಯವಾಗಿ ವರ್ತಿಸಿದರು ಎನ್ನುವ ಪ್ರಶ್ನೆ ಉದ್ಭವಿಸಿದೆ.

ಈ ಮಧ್ಯೆ, ಇಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸಂತ್ರಸ್ತೆ ಯುವತಿ ಕುಟುಂಬಸ್ಥರ ಭೇಟಿಗೆ ಮುಂದಾಗಿದ್ದರು. ಹತ್ರಾಸ್​ಗೆ ತೆರಳಿದ್ದ ರಾಹುಲ್​, ಪ್ರಿಯಾಂಕಾರನ್ನ ಮಾರ್ಗ ಮಧ್ಯೆಯೇ ಪೊಲೀಸರು ತಡೆದಿದ್ದಾರೆ. ಯಮುನಾ ಎಕ್ಸ್​​ಪ್ರೆಸ್ ಹೈವೇನಲ್ಲಿ ತಳ್ಳಾಟ ನೂಕಾಟದ ವೇಳೆ ರಾಹುಲ್ ನೆಲಕ್ಕೆ ಬಿದ್ದರು. ನಂತರ ಅವರಿಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಗೆಸ್ಟ್ ಹೌಸ್ ಒಂದರಲ್ಲಿ ಕೂಡಿ ಹಾಕಿದ್ದರು. ಆಮೇಲೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್, ದೇಶದಲ್ಲಿ ಕೇವಲ ಮೋದಿ ಮಾತ್ರ ಓಡಾಡೋಕೆ ಅವಕಾಶನಾ ಅಂತಾ ಕೆಂಡಕಾರಿದರು.

ಮನುಕುಲವೇ ತಲೆತಗ್ಗಿಸುವಂತೆ ಮಾಡಿ ಜನರ ಎದೆ ನಡುಗಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಬಹುಜನ ಸಮಾಜ ಪಕ್ಷದ ಮಾಯಾವತಿ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೇರಿದಂತೆ ಹಲವಾರು ವಿರೋಧಪಕ್ಷಗಳ ನಾಯಕರು ಯೋಗಿ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆ ಮಧ್ಯೆ, ಉತ್ತರಪ್ರದೇಶದ ಬಲರಾಮ್​ಪುರದಲ್ಲಿ ಅತ್ಯಾಚಾರಕ್ಕೊಳಗಾದ 22 ವರ್ಷದ ಇನ್ನೊಬ್ಬ ಯುವತಿ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದ್ದು ಯೋಗಿ ಆಡಳಿತದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.

Published On - 11:23 pm, Thu, 1 October 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ