AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Irani: ಮೋದಿ ವರ್ಚಸ್ಸು ಹಾಳು ಮಾಡಲು ರಾಹುಲ್ ಪಣ ತೊಟ್ಟಿದ್ದಾರೆ, ವಿದೇಶ, ಸಂಸತ್ತು ಎಲ್ಲೆಲ್ಲೂ ಸುಳ್ಳು ಸುಳ್ಳು: ಸ್ಮೃತಿ ಇರಾನಿ

ಪ್ರಧಾನಿ ನರೇಂದ್ರ ಮೋದಿಯವರ ವ್ಯಕ್ತಿತ್ವ ಹಾಳು ಮಾಡಲು ರಾಹುಲ್ ಗಾಂಧಿ ಪಣತೊಟ್ಟಂತಿದೆ. ವಿದೇಶ, ದೇಶ, ಸಂಸತ್ತು ಎಲ್ಲಾ ಕಡೆಯೂ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ರಾಜಕೀಯ ದ್ವೇಷವು ದೇಶಕ್ಕೆ ಅವಮಾನ ಮಾಡುವ ಹಂತದ ವರೆಗೆ ತಲುಪುತ್ತಿದೆ.

Smriti Irani: ಮೋದಿ ವರ್ಚಸ್ಸು ಹಾಳು ಮಾಡಲು ರಾಹುಲ್ ಪಣ ತೊಟ್ಟಿದ್ದಾರೆ, ವಿದೇಶ, ಸಂಸತ್ತು ಎಲ್ಲೆಲ್ಲೂ ಸುಳ್ಳು ಸುಳ್ಳು: ಸ್ಮೃತಿ ಇರಾನಿ
ಸ್ಮೃತಿ ಇರಾನಿ
ನಯನಾ ರಾಜೀವ್
|

Updated on: Mar 28, 2023 | 12:24 PM

Share

ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಹಾಳು ಮಾಡಲು ರಾಹುಲ್ ಗಾಂಧಿ ಪಣತೊಟ್ಟಂತಿದೆ. ವಿದೇಶ, ದೇಶ, ಸಂಸತ್ತು ಎಲ್ಲಾ ಕಡೆಯೂ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ರಾಜಕೀಯ ದ್ವೇಷವು ದೇಶಕ್ಕೆ ಅವಮಾನ ಮಾಡುವ ಹಂತದ ವರೆಗೆ ತಲುಪುತ್ತಿದೆ. ನರೇಂದ್ರ ಮೋದಿಯವರ ಶಕ್ತಿ ಅವರ ವರ್ಚಸ್ಸು ಎಂದು ರಾಹುಲ್ ಹೇಳಿದ್ದರು, ಅಷ್ಟೇ ಅಲ್ಲದೆ ನರೇಂದ್ರ ಮೋದಿಯವರ ವ್ಯಕ್ತಿತ್ವವನ್ನು ಹಾಳು ಮಾಡುವವರೆಗೂ ನಾನು ಅವರ ಮೇಲೆ ದಾಳಿ ಮಾಡುತ್ತಲೇ ಇರುತ್ತೇನೆ ಎಂದಿದ್ದರು.

ರಾಜಕೀಯ ಹತಾಶೆಯಿಂದಾಗಿ, ಪ್ರಧಾನಿ ಮೋದಿಯವರ ಮೇಲಿನ ರಾಹುಲ್ ಗಾಂಧಿಯವರ ದ್ವೇಷವು ಈಗ ಇಡೀ ರಾಷ್ಟ್ರಕ್ಕೆ ಅವಮಾನವಾಗಿ ಮಾರ್ಪಟ್ಟಿದೆ.

ಗಾಂಧಿ ಕುಟುಂಬ ದಲಿತ ಅಥವಾ ಹಿಂದುಳಿದ ಸಮುದಾಯಗಳ ಜನರನ್ನು ಅವಮಾನಿಸಲು ಪ್ರಯತ್ನಿಸುತ್ತಿರುವುದು ಇದೇ ಮೊದಲಲ್ಲ. ಬುಡಕಟ್ಟು ಕುಟುಂಬದ ಮಹಿಳೆಯೊಬ್ಬರು ರಾಷ್ಟ್ರಪತಿಯಾದಾಗ ಕಾಂಗ್ರೆಸ್ ಸದಸ್ಯರೊಬ್ಬರು ಅವರಿಗೆ ಅವಮಾನ ಮಾಡಿದ್ದರು.

ಮತ್ತಷ್ಟು ಓದಿ: ರಾಹುಲ್ ಗಾಂಧಿ ದೇಶದ ಜನತೆಗೆ ಕ್ಷಮೆ ಕೇಳಬೇಕು ಎಂದ ಸಚಿವೆ ಸ್ಮೃತಿ ಇರಾನಿ

ರಾಹುಲ್ ಗಾಂಧಿ ಮೋದಿ ಉಪನಾಮದ ಕುರಿತು ಹೇಳಿಕೆ ನೀಡಿ ಮಾನನಷ್ಟ ಮೊಕದ್ದಮೆ ಎದುರಿಸುತ್ತಿದ್ದರು, ಇಚ್ಚೀಚೆಗಷ್ಟೇ ಸೂರತ್ ನ್ಯಾಯಾಲಯವು ಅವರು ದೋಷಿ ಎಂದು ತೀರ್ಪು ನೀಡಿ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 30 ದಿನಗಳ ಜಾಮೀನಿನ ಮೇಲೆ ಹೊರಗಿದ್ದಾರೆ.

ಇದೀಗ ನಾನು ಕ್ಷಮೆ ಕೇಳುವುದಿಲ್ಲ, ಕ್ಷಮೆ ಕೇಳಲು ನಾನು ಸಾವರ್ಕರ್ ಅಲ್ಲ ಎಂದು ಹೇಳುವ ಮೂಲಕ ಮತ್ತೊಂದು ಸಮಸ್ಯೆಯನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ