ದಕ್ಷಿಣ ಭಾರತದಲ್ಲಿ ವೃದ್ಧರ ಸಂಖ್ಯೆ ಹೆಚ್ಚಳ, ಹೆಚ್ಚು ಮಕ್ಕಳನ್ನು ಹೊಂದುವಂತೆ ಯುವಕರಿಗೆ ಚಂದ್ರಬಾಬು ನಾಯ್ಡು ಸಲಹೆ

|

Updated on: Oct 20, 2024 | 3:47 PM

ದಕ್ಷಿಣ ಭಾರತದಲ್ಲಿ ವೃದ್ಧರ ಸಂಖ್ಯೆ ಹೆಚ್ಚಾಗಿರುವ ಕುರಿತು ಕಳವಳ ವ್ಯಕ್ತಪಡಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್​ ಚಂದ್ರಬಾಬು ನಾಯ್ಡು ಹೆಚ್ಚು ಮಕ್ಕಳನ್ನು ಹೊಂದುವಂತೆ ಯುವಕರಿಗೆ ಸಲಹೆ ನೀಡಿದ್ದಾರೆ. ಜನಸಂಖ್ಯಾ ನಿರ್ವಹಣೆಗೆ ರಾಜ್ಯ ಸರಕಾರ ಯೋಜನೆ ರೂಪಿಸುತ್ತಿದೆ ಎಂದು ಶನಿವಾರ ತಿಳಿಸಿದರು.

ದಕ್ಷಿಣ ಭಾರತದಲ್ಲಿ ವೃದ್ಧರ ಸಂಖ್ಯೆ ಹೆಚ್ಚಳ, ಹೆಚ್ಚು ಮಕ್ಕಳನ್ನು ಹೊಂದುವಂತೆ ಯುವಕರಿಗೆ ಚಂದ್ರಬಾಬು ನಾಯ್ಡು ಸಲಹೆ
ಚಂದ್ರಬಾಬು ನಾಯ್ಡು
Image Credit source: India Today
Follow us on

ದಕ್ಷಿಣ ಭಾರತದಲ್ಲಿ ವೃದ್ಧರ ಸಂಖ್ಯೆ ಹೆಚ್ಚಾಗಿರುವ ಕುರಿತು ಕಳವಳ ವ್ಯಕ್ತಪಡಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್​ ಚಂದ್ರಬಾಬು ನಾಯ್ಡು ಹೆಚ್ಚು ಮಕ್ಕಳನ್ನು ಹೊಂದುವಂತೆ ಯುವಕರಿಗೆ ಸಲಹೆ ನೀಡಿದ್ದಾರೆ. ಜನಸಂಖ್ಯಾ ನಿರ್ವಹಣೆಗೆ ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಶನಿವಾರ ತಿಳಿಸಿದರು.

ಇದರ ಅಡಿಯಲ್ಲಿ ಹೆಚ್ಚು ಮಕ್ಕಳಿರುವ ಕುಟುಂಬಗಳಿಗೆ ಪ್ರೋತ್ಸಾಹಧನ ನೀಡುವ ಮಸೂದೆಯನ್ನು ತರಲು ಚಿಂತನೆ ನಡೆಸಲಾಗಿದೆ. ಅಷ್ಟೇ ಅಲ್ಲ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ ಕಾನೂನು ರೂಪಿಸುವ ಬಗ್ಗೆಯೂ ಚಿಂತನೆ ನಡೆದಿದೆ ಎಂದರು.

ಹೆಚ್ಚು ಮಕ್ಕಳಿರುವವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ಕಾನೂನನ್ನು ಈ ಹಿಂದೆಯೇ ಮಾಡಿದ್ದೆವು ಎಂದು ಚಂದ್ರಬಾಬು ನಾಯ್ಡು ಹೇಳಿದರು. ಆದರೆ ಈಗ ನಾವು ಆ ಕಾನೂನನ್ನು ರದ್ದುಪಡಿಸಿದ್ದೇವೆ ಮತ್ತು ಅದನ್ನು ಹಿಂತಿರುಗಿಸಲು ಯೋಚಿಸುತ್ತಿದ್ದೇವೆ. ಹೆಚ್ಚು ಮಕ್ಕಳಿರುವ ಕುಟುಂಬಗಳಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. 2047 ರವರೆಗೆ ನಮಗೆ ಜನಸಂಖ್ಯಾ ಪ್ರಯೋಜನವಿದೆ ಎಂದು ನಾಯ್ಡು ಹೇಳಿದರು.

ಮತ್ಷ್ಟು ಓದಿ: World Population Day 2024 : ದೇಶದ ಅಭಿವೃದ್ಧಿಗೆ ಹೊರೆಯಾಗದಿರಲಿ ಜನ ಸಂಖ್ಯೆ ಹೆಚ್ಚಳ

ಆದರೆ ದಕ್ಷಿಣದ ರಾಜ್ಯಗಳಲ್ಲಿ ಅದರಲ್ಲೂ ಆಂಧ್ರಪ್ರದೇಶದಲ್ಲಿ ಹೆಚ್ಚುತ್ತಿರುವ ವಯಸ್ಸಾದ ಜನಸಂಖ್ಯೆಯು ಆತಂಕಕಾರಿ ವಿಷಯವಾಗಿದೆ. ಜಪಾನ್, ಚೀನಾ ಸೇರಿದಂತೆ ಕೆಲವು ಯುರೋಪಿಯನ್ ರಾಷ್ಟ್ರಗಳು ಸಹ ಈ ಸಮಸ್ಯೆಯಿಂದ ಹೋರಾಡುತ್ತಿವೆ ಎಂದು ಅವರು ಹೇಳಿದರು. ಯುವಜನರು ದೇಶದ ಇತರ ಭಾಗಗಳಿಗೆ ಅಥವಾ ವಿದೇಶಗಳಿಗೆ ತೆರಳುತ್ತಿರುವ ಕಾರಣ ದಕ್ಷಿಣ ಭಾರತದಲ್ಲಿ ಈ ಸಮಸ್ಯೆ ಉಂಟಾಗುತ್ತಿದೆ.

ದಕ್ಷಿಣದ ರಾಜ್ಯಗಳಲ್ಲಿ ಫಲವತ್ತತೆ ಪ್ರಮಾಣ ಕುಸಿಯುತ್ತಿರುವ ಬಗ್ಗೆಯೂ ಮುಖ್ಯಮಂತ್ರಿ ಕಳವಳ ವ್ಯಕ್ತಪಡಿಸಿದರು. ಇಲ್ಲಿ ಫಲವತ್ತತೆ ದರವು 1.6 ಪ್ರತಿಶತವಾಗಿದ್ದು, ಇದು ರಾಷ್ಟ್ರೀಯ ದರವಾದ 2.1 ಕ್ಕಿಂತ ಕಡಿಮೆಯಾಗಿದೆ ಎಂದು ಅವರು ಹೇಳಿದರು. ಪರಿಸ್ಥಿತಿ ಹೀಗೇ ಮುಂದುವರಿದರೆ 2047ರ ವೇಳೆಗೆ ನಮ್ಮ ವೃದ್ಧರ ಸಂಖ್ಯೆ ಗಣನೀಯವಾಗಿ ಹೆಚ್ಚಲಿದೆ.

ಆಂಧ್ರಪ್ರದೇಶ ಮಾತ್ರವಲ್ಲ, ದೇಶದ ಹಲವು ಗ್ರಾಮಗಳಲ್ಲಿ ಈಗ ವೃದ್ಧರೇ ಉಳಿದಿದ್ದಾರೆ ಎಂದರು. ನಾಯ್ಡು ಅವರು ಜನಸಂಖ್ಯೆ ನಿಯಂತ್ರಣದ ಹಿಂದಿನ ಪ್ರಯತ್ನಗಳ ಬಗ್ಗೆ ಮಾತನಾಡಿದರು. ಆಗಿನ ಪರಿಸ್ಥಿತಿಯೇ ಬೇರೆ ಇತ್ತು ಎಂದರು. ವೇಗವಾಗಿ ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ನೈಸರ್ಗಿಕ ಸಂಪನ್ಮೂಲಗಳು ಅಪಾಯಕ್ಕೆ ಒಳಗಾಗಿದ್ದವು. ಆದರೆ ಈಗ ಪರಿಸ್ಥಿತಿ ಬದಲಾಗಿದೆ.

2018ರಲ್ಲೂ ಇದೇ ರೀತಿ ಮನವಿ ಮಾಡಿದ್ದರು
ಕುಟುಂಬ ಯೋಜನಾ ನೀತಿಗಳಲ್ಲಿ ಬದಲಾವಣೆಗೆ ನಾಯ್ಡು ಕರೆ ನೀಡಿರುವುದು ಇದೇ ಮೊದಲಲ್ಲ . ಅವರ ಹಿಂದಿನ ಅಧಿಕಾರಾವಧಿಯಲ್ಲಿ, ಅವರು ಎರಡು ಮಕ್ಕಳನ್ನು ಹೊಂದಲು ಸಿದ್ಧರಿರುವ ದಂಪತಿಗೆ ಪ್ರೋತ್ಸಾಹವನ್ನು ನೀಡಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ