AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಜೋಡೋ ಯಾತ್ರೆಗಾಗಿ ಕೆಜಿಎಫ್ 2 ಹಾಡು ಬಳಕೆ: ರಾಹುಲ್ ಗಾಂಧಿ ವಿರುದ್ಧದ ಕೇಸ್ ರದ್ದತಿಗೆ ಹೈಕೋರ್ಟ್ ನಕಾರ

ಭಾರತ್ ಜೋಡೋ ಯಾತ್ರೆಗಾಗಿ ಕೆಜಿಎಫ್ ಚಾಪ್ಟರ್ 2 ಹಾಡಿನ ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ವಿರುದ್ಧದ ಎಫ್ಐಆರ್​ ರದ್ದುಪಡಿಸಲು ಹೈಕೋರ್ಟ್​ ನಕಾರವೆತ್ತಿದೆ.

ಭಾರತ್ ಜೋಡೋ ಯಾತ್ರೆಗಾಗಿ ಕೆಜಿಎಫ್ 2 ಹಾಡು ಬಳಕೆ: ರಾಹುಲ್ ಗಾಂಧಿ ವಿರುದ್ಧದ ಕೇಸ್ ರದ್ದತಿಗೆ ಹೈಕೋರ್ಟ್ ನಕಾರ
ರಾಹುಲ್ ಗಾಂಧಿ
ರಮೇಶ್​ ಎಮ್​.
| Edited By: |

Updated on:Jun 28, 2023 | 4:17 PM

Share

ಬೆಂಗಳೂರು: ಭಾರತ್ ಜೋಡೋ ಯಾತ್ರೆಗಾಗಿ ಕೆಜಿಎಫ್ ಚಾಪ್ಟರ್ 2 (KGF 2) ಹಾಡಿನ ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧದ ಎಫ್ಐಆರ್​ ರದ್ದುಪಡಿಸಲು ಹೈಕೋರ್ಟ್​ ನಕಾರವೆತ್ತಿದೆ. ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧದ‌ ಕೇಸ್ ತನಿಖೆಗೂ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ಪಕ್ಷದಿಂದ ಕೆಜಿಎಫ್ 2 ಹಾಡಿನ ದುರ್ಬಳಕೆ ಆರೋಪ ಕೇಳಿಬಂದಿತ್ತು.

ಈ ಹಿನ್ನೆಲೆ ಎಂಆರ್​ಟಿ ಮ್ಯೂಸಿಕ್​ನಿಂದ ರಾಹುಲ್ ಗಾಂಧಿ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧ FIR ದಾಖಲಾಗಿತ್ತು. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ಧಗೊಳಿಸಿವಂತೆ ಕೋರಿ ರಾಹುಲ್ ಗಾಂಧಿ, ಜೈರಾಮ್ ರಮೇಶ್, ಸುಪ್ರಿಯಾ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ನಡೆದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ತೀರ್ಪು ಕಾಯ್ದಿರಿಸಿತು.

ಇದನ್ನೂ ಓದಿ: ರಾಹುಲ್ ಗಾಂಧಿಗೆ ಕರ್ನಾಟಕ ಹೈಕೋರ್ಟ್ ನೊಟೀಸ್: ಕೆಜಿಎಫ್ 2 ಹಾಡಿನ ದುರ್ಬಳಕೆ ಆರೋಪ

ಪ್ರಕರಣ ಹಿನ್ನೆಲೆ

ರಾಹುಲ್ ಗಾಂಧಿ ಅವರು ಇತ್ತೀಚೆಗೆ ಭಾರತ್ ಜೋಡೋ ಯಾತ್ರೆಗಾಗಿ ಕರ್ನಾಟಕಕ್ಕೆ ಆಗಮಿಸಿದ್ದರು. ಕರ್ನಾಟಕದ ಹಲವು ಜಿಲ್ಲೆಗಳಿಗೆ ಕಾಲ್ನಡಿಗೆಯಲ್ಲಿ ಸಾಗಿದ್ದರು. ಈ ವೇಳೆ ರಾಹುಲ್ ಗಾಂಧಿ ಅವರ ಕಾಲ್ನಡಿಗೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು. ಹಾಗೇ ಹರಿಬಿಟ್ಟ ವಿಡಿಯೋಗೆ ‘ಕೆಜಿಎಫ್ 2’ ಚಿತ್ರದ ಹಿಂದಿ ಗೀತೆ ‘ಸುಲ್ತಾನ್​..’ ಹಾಡನ್ನು ಬಳಕೆ ಮಾಡಲಾಗಿತ್ತು.

ಈ ಕಾರಣಕ್ಕೆ ರಾಹುಲ್ ಗಾಂಧಿ ವಿರುದ್ಧ ಈ ಹಾಡಿನ ಹಿಂದಿ ಹಕ್ಕನ್ನು ಹೊಂದಿರುವ ಎಂಆರ್​​ಟಿ ಮ್ಯೂಸಿಕ್​ನವರು ಕಾಪಿರೈಟ್ ಉಲ್ಲಂಘನೆ ಪ್ರಕರಣ​ ದಾಖಲು ಮಾಡಿದ್ದರು. ಯಶವಂತಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ರಾಹುಲ್ ಗಾಂಧಿ ಮಾತ್ರವಲ್ಲದೆ, ಜೈರಾಮ್ ರಮೇಶ್, ಸುಪ್ರಿಯಾ ವಿರುದ್ಧವೂ ಎಫ್ಐಆರ್ ದಾಖಲಾಗಿತ್ತು.

ಇದನ್ನೂ ಓದಿ: Uniform Civil Code: ಏಕರೂಪ ನಾಗರಿಕ ಸಂಹಿತೆ ಕುರಿತು ಪ್ರಧಾನಿ ಮೋದಿ ಹೇಳಿಕೆ ಹಿನ್ನೆಲೆ ಮುಸ್ಲಿಂ ಕಾನೂನು ಮಂಡಳಿ ಸಭೆ

ಈ ಪ್ರಕರಣವನ್ನು ಬೆಂಗಳೂರಿನ ವಾಣಿಜ್ಯ ಕೋರ್ಟ್​ನಲ್ಲಿ ವಿಚಾರಣೆ ಮಾಡಲಾಗಿತ್ತು. ಈ ವೇಳೆ ದೂರುದಾರರು ನೀಡಿದ ದಾಖಲೆಗಳನ್ನು ಕೋರ್ಟ್​ ಪರಿಗಣಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:16 pm, Wed, 28 June 23

Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ