AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhota Rajan: ಗ್ಯಾಂಗ್​ಸ್ಟರ್​ ಛೋಟಾ ರಾಜನ್​ಗೆ ಜಾಮೀನು

ಹೋಟೆಲ್​ ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗ್ಯಾಂಗ್​ಸ್ಟರ್ ಛೋಟಾ ರಾಜನ್​ಗೆ ಜಾಮೀನು ಮಂಜೂರು ಮಾಡಲಾಗಿದೆ. 2001ರಲ್ಲಿ ಉದ್ಯಮಿ ಜಯ್​ಶೆಟ್ಟಿ ಕೊಲೆಯಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲವು ಕಳೆದ ಮೇ 30ರಂದು ಛೋಟಾ ರಾಜನ್​ಗೆ ಜೀವಾವಧಿ ಶಿಕ್ಷೆ ಘೋಷಿಸಿತ್ತು.

Chhota Rajan: ಗ್ಯಾಂಗ್​ಸ್ಟರ್​ ಛೋಟಾ ರಾಜನ್​ಗೆ ಜಾಮೀನು
ಛೋಟಾ ರಾಜನ್Image Credit source: The Hindu
ನಯನಾ ರಾಜೀವ್
|

Updated on: Oct 23, 2024 | 12:15 PM

Share

ಹೋಟೆಲ್​ ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗ್ಯಾಂಗ್​ಸ್ಟರ್ ಛೋಟಾ ರಾಜನ್​ಗೆ ಜಾಮೀನು ಮಂಜೂರು ಮಾಡಲಾಗಿದೆ. 2001ರಲ್ಲಿ ಉದ್ಯಮಿ ಜಯ್​ಶೆಟ್ಟಿ ಕೊಲೆಯಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲವು ಕಳೆದ ಮೇ 30ರಂದು ಛೋಟಾ ರಾಜನ್​ಗೆ ಜೀವಾವಧಿ ಶಿಕ್ಷೆ ಘೋಷಿಸಿತ್ತು.

ಈ ತೀರ್ಪನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್​ಗೆ ಛೋಟಾ ರಾಜನ್ ಮೇಲ್ಮನವಿ ಸಲ್ಲಿಸಿದ್ದ, ಜಾಮೀನು ಮಂಜೂರು ಮಾಡಿ ಅಧೀನ ನ್ಯಾಯಾಲಯದ ಶಿಕ್ಷೆಯನ್ನು ರದ್ದುಪಡಿಸುವಂತೆ ಅರ್ಜಿಯಲ್ಲಿ ಛೋಟಾ ರಾಜನ್ ಕೋರಿದ್ದ. ಸಧ್ಯಕ್ಕೆ ಛೋಟಾ ರಾಜನ್​ಗೆ ಬಾಂಬೆ ಹೈಕೋರ್ಟ್​ನ ವಿಭಾಗೀಯ ಪೀಠವು ಜಾಮೀನು ಮಂಜೂರು ಮಾಡಿದೆ. ಜಾಮೀನಿಗಾಗಿ ಒಂದು ಲಕ್ಷ ರೂ. ಭದ್ರತಾ ಬಾಂಡ್ ನೀಡಲು ಆದೇಶಿಸಲಾಗಿದೆ.

ಆದರೆ ಛೋಟಾ ರಾಜನ್ ಜೈಲಿನಿಂದ ಹೊರ ಬರಲು ಸಾಧ್ಯವಿಲ್ಲ. ಏಕೆಂದರೆ ಉಳಿದ ಪ್ರಕರಣಗಳಲ್ಲೂ ಆತ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ.

ಜಯ್​ಶೆಟ್ಟಿ ಯಾರು? ಕೇಂದ್ರೀಯ ಮುಂಬೈನ ಗಾಂಧೇವಿಯಲ್ಲಿ ಗೋಲ್ಡನ್​ ಕ್ರೌನ್ ಎನ್ನುವ ಹೋಟೆಲ್​ನ್ನು ನಡೆಸುತ್ತಿದ್ದರು. 2001ರ ಮೇ 4 ರಂದು ಛೋಟಾ ರಾಜನ್ ಗ್ಯಾಂಗ್​ನ ಇಬ್ಬರು ಶೂಟರ್​ಗಳು ಜಯ್​ಶೆಟ್ಟಿಯನ್ನು ಕೊಲೆ ಮಾಡಿದ್ದರು ಎನ್ನುವ ಆರೋಪವಿದೆ. ಇದಕ್ಕೂ ಮುನ್ನ ಛೋಟಾ ರಾಜನ್ ಗ್ಯಾಂಗ್​ಗೆ ಸೇರಿದ ಹೇಮಂತ್ ಪೂಜಾರಿ ಎನ್ನುವ ವ್ಯಕ್ತಿ ಹಣ ನೀಡುವಂತೆ ಬೆದರಿಕೆ ಹಾಕಿದ್ದ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

ಜಯ್​ಶೆಟ್ಟಿ ಹಣವನ್ನು ನೀಡದ ಹಿನ್ನೆಲೆಯಲ್ಲಿ ಈ ಕೊಲೆ ಮಾಡಲಾಗಿದೆ ಎನ್ನುವುದು ಪೊಲೀಸರ ವಾದವಾಗಿದೆ. ಸಧ್ಯಕ್ಕೆ ತಿಹಾರ್ ಜೈಲಿನಲ್ಲಿರುವ ಛೋಟಾ ರಾಜನ್ ಖ್ಯಾತ ಪತ್ರಕರ್ತ ಜೇ ಡೇ ಅವರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ