Chhota Rajan: ಗ್ಯಾಂಗ್​ಸ್ಟರ್​ ಛೋಟಾ ರಾಜನ್​ಗೆ ಜಾಮೀನು

ಹೋಟೆಲ್​ ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗ್ಯಾಂಗ್​ಸ್ಟರ್ ಛೋಟಾ ರಾಜನ್​ಗೆ ಜಾಮೀನು ಮಂಜೂರು ಮಾಡಲಾಗಿದೆ. 2001ರಲ್ಲಿ ಉದ್ಯಮಿ ಜಯ್​ಶೆಟ್ಟಿ ಕೊಲೆಯಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲವು ಕಳೆದ ಮೇ 30ರಂದು ಛೋಟಾ ರಾಜನ್​ಗೆ ಜೀವಾವಧಿ ಶಿಕ್ಷೆ ಘೋಷಿಸಿತ್ತು.

Chhota Rajan: ಗ್ಯಾಂಗ್​ಸ್ಟರ್​ ಛೋಟಾ ರಾಜನ್​ಗೆ ಜಾಮೀನು
ಛೋಟಾ ರಾಜನ್Image Credit source: The Hindu
Follow us
|

Updated on: Oct 23, 2024 | 12:15 PM

ಹೋಟೆಲ್​ ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗ್ಯಾಂಗ್​ಸ್ಟರ್ ಛೋಟಾ ರಾಜನ್​ಗೆ ಜಾಮೀನು ಮಂಜೂರು ಮಾಡಲಾಗಿದೆ. 2001ರಲ್ಲಿ ಉದ್ಯಮಿ ಜಯ್​ಶೆಟ್ಟಿ ಕೊಲೆಯಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲವು ಕಳೆದ ಮೇ 30ರಂದು ಛೋಟಾ ರಾಜನ್​ಗೆ ಜೀವಾವಧಿ ಶಿಕ್ಷೆ ಘೋಷಿಸಿತ್ತು.

ಈ ತೀರ್ಪನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್​ಗೆ ಛೋಟಾ ರಾಜನ್ ಮೇಲ್ಮನವಿ ಸಲ್ಲಿಸಿದ್ದ, ಜಾಮೀನು ಮಂಜೂರು ಮಾಡಿ ಅಧೀನ ನ್ಯಾಯಾಲಯದ ಶಿಕ್ಷೆಯನ್ನು ರದ್ದುಪಡಿಸುವಂತೆ ಅರ್ಜಿಯಲ್ಲಿ ಛೋಟಾ ರಾಜನ್ ಕೋರಿದ್ದ. ಸಧ್ಯಕ್ಕೆ ಛೋಟಾ ರಾಜನ್​ಗೆ ಬಾಂಬೆ ಹೈಕೋರ್ಟ್​ನ ವಿಭಾಗೀಯ ಪೀಠವು ಜಾಮೀನು ಮಂಜೂರು ಮಾಡಿದೆ. ಜಾಮೀನಿಗಾಗಿ ಒಂದು ಲಕ್ಷ ರೂ. ಭದ್ರತಾ ಬಾಂಡ್ ನೀಡಲು ಆದೇಶಿಸಲಾಗಿದೆ.

ಆದರೆ ಛೋಟಾ ರಾಜನ್ ಜೈಲಿನಿಂದ ಹೊರ ಬರಲು ಸಾಧ್ಯವಿಲ್ಲ. ಏಕೆಂದರೆ ಉಳಿದ ಪ್ರಕರಣಗಳಲ್ಲೂ ಆತ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ.

ಜಯ್​ಶೆಟ್ಟಿ ಯಾರು? ಕೇಂದ್ರೀಯ ಮುಂಬೈನ ಗಾಂಧೇವಿಯಲ್ಲಿ ಗೋಲ್ಡನ್​ ಕ್ರೌನ್ ಎನ್ನುವ ಹೋಟೆಲ್​ನ್ನು ನಡೆಸುತ್ತಿದ್ದರು. 2001ರ ಮೇ 4 ರಂದು ಛೋಟಾ ರಾಜನ್ ಗ್ಯಾಂಗ್​ನ ಇಬ್ಬರು ಶೂಟರ್​ಗಳು ಜಯ್​ಶೆಟ್ಟಿಯನ್ನು ಕೊಲೆ ಮಾಡಿದ್ದರು ಎನ್ನುವ ಆರೋಪವಿದೆ. ಇದಕ್ಕೂ ಮುನ್ನ ಛೋಟಾ ರಾಜನ್ ಗ್ಯಾಂಗ್​ಗೆ ಸೇರಿದ ಹೇಮಂತ್ ಪೂಜಾರಿ ಎನ್ನುವ ವ್ಯಕ್ತಿ ಹಣ ನೀಡುವಂತೆ ಬೆದರಿಕೆ ಹಾಕಿದ್ದ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

ಜಯ್​ಶೆಟ್ಟಿ ಹಣವನ್ನು ನೀಡದ ಹಿನ್ನೆಲೆಯಲ್ಲಿ ಈ ಕೊಲೆ ಮಾಡಲಾಗಿದೆ ಎನ್ನುವುದು ಪೊಲೀಸರ ವಾದವಾಗಿದೆ. ಸಧ್ಯಕ್ಕೆ ತಿಹಾರ್ ಜೈಲಿನಲ್ಲಿರುವ ಛೋಟಾ ರಾಜನ್ ಖ್ಯಾತ ಪತ್ರಕರ್ತ ಜೇ ಡೇ ಅವರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ದಿವಾಕರ್ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ, ಬಂಡಾಯವೆದ್ದಿಲ್ಲ: ರೆಡ್ಡಿ
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​ ಕಾಂಗ್ರೆಸ್​ ಸೇರ್ಪಡೆ, ಲೈವ್ ನೋಡಿ​
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್