AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhota Rajan: ಗ್ಯಾಂಗ್​ಸ್ಟರ್​ ಛೋಟಾ ರಾಜನ್​ಗೆ ಜಾಮೀನು

ಹೋಟೆಲ್​ ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗ್ಯಾಂಗ್​ಸ್ಟರ್ ಛೋಟಾ ರಾಜನ್​ಗೆ ಜಾಮೀನು ಮಂಜೂರು ಮಾಡಲಾಗಿದೆ. 2001ರಲ್ಲಿ ಉದ್ಯಮಿ ಜಯ್​ಶೆಟ್ಟಿ ಕೊಲೆಯಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲವು ಕಳೆದ ಮೇ 30ರಂದು ಛೋಟಾ ರಾಜನ್​ಗೆ ಜೀವಾವಧಿ ಶಿಕ್ಷೆ ಘೋಷಿಸಿತ್ತು.

Chhota Rajan: ಗ್ಯಾಂಗ್​ಸ್ಟರ್​ ಛೋಟಾ ರಾಜನ್​ಗೆ ಜಾಮೀನು
ಛೋಟಾ ರಾಜನ್Image Credit source: The Hindu
ನಯನಾ ರಾಜೀವ್
|

Updated on: Oct 23, 2024 | 12:15 PM

Share

ಹೋಟೆಲ್​ ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗ್ಯಾಂಗ್​ಸ್ಟರ್ ಛೋಟಾ ರಾಜನ್​ಗೆ ಜಾಮೀನು ಮಂಜೂರು ಮಾಡಲಾಗಿದೆ. 2001ರಲ್ಲಿ ಉದ್ಯಮಿ ಜಯ್​ಶೆಟ್ಟಿ ಕೊಲೆಯಾಗಿತ್ತು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲವು ಕಳೆದ ಮೇ 30ರಂದು ಛೋಟಾ ರಾಜನ್​ಗೆ ಜೀವಾವಧಿ ಶಿಕ್ಷೆ ಘೋಷಿಸಿತ್ತು.

ಈ ತೀರ್ಪನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್​ಗೆ ಛೋಟಾ ರಾಜನ್ ಮೇಲ್ಮನವಿ ಸಲ್ಲಿಸಿದ್ದ, ಜಾಮೀನು ಮಂಜೂರು ಮಾಡಿ ಅಧೀನ ನ್ಯಾಯಾಲಯದ ಶಿಕ್ಷೆಯನ್ನು ರದ್ದುಪಡಿಸುವಂತೆ ಅರ್ಜಿಯಲ್ಲಿ ಛೋಟಾ ರಾಜನ್ ಕೋರಿದ್ದ. ಸಧ್ಯಕ್ಕೆ ಛೋಟಾ ರಾಜನ್​ಗೆ ಬಾಂಬೆ ಹೈಕೋರ್ಟ್​ನ ವಿಭಾಗೀಯ ಪೀಠವು ಜಾಮೀನು ಮಂಜೂರು ಮಾಡಿದೆ. ಜಾಮೀನಿಗಾಗಿ ಒಂದು ಲಕ್ಷ ರೂ. ಭದ್ರತಾ ಬಾಂಡ್ ನೀಡಲು ಆದೇಶಿಸಲಾಗಿದೆ.

ಆದರೆ ಛೋಟಾ ರಾಜನ್ ಜೈಲಿನಿಂದ ಹೊರ ಬರಲು ಸಾಧ್ಯವಿಲ್ಲ. ಏಕೆಂದರೆ ಉಳಿದ ಪ್ರಕರಣಗಳಲ್ಲೂ ಆತ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ.

ಜಯ್​ಶೆಟ್ಟಿ ಯಾರು? ಕೇಂದ್ರೀಯ ಮುಂಬೈನ ಗಾಂಧೇವಿಯಲ್ಲಿ ಗೋಲ್ಡನ್​ ಕ್ರೌನ್ ಎನ್ನುವ ಹೋಟೆಲ್​ನ್ನು ನಡೆಸುತ್ತಿದ್ದರು. 2001ರ ಮೇ 4 ರಂದು ಛೋಟಾ ರಾಜನ್ ಗ್ಯಾಂಗ್​ನ ಇಬ್ಬರು ಶೂಟರ್​ಗಳು ಜಯ್​ಶೆಟ್ಟಿಯನ್ನು ಕೊಲೆ ಮಾಡಿದ್ದರು ಎನ್ನುವ ಆರೋಪವಿದೆ. ಇದಕ್ಕೂ ಮುನ್ನ ಛೋಟಾ ರಾಜನ್ ಗ್ಯಾಂಗ್​ಗೆ ಸೇರಿದ ಹೇಮಂತ್ ಪೂಜಾರಿ ಎನ್ನುವ ವ್ಯಕ್ತಿ ಹಣ ನೀಡುವಂತೆ ಬೆದರಿಕೆ ಹಾಕಿದ್ದ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

ಜಯ್​ಶೆಟ್ಟಿ ಹಣವನ್ನು ನೀಡದ ಹಿನ್ನೆಲೆಯಲ್ಲಿ ಈ ಕೊಲೆ ಮಾಡಲಾಗಿದೆ ಎನ್ನುವುದು ಪೊಲೀಸರ ವಾದವಾಗಿದೆ. ಸಧ್ಯಕ್ಕೆ ತಿಹಾರ್ ಜೈಲಿನಲ್ಲಿರುವ ಛೋಟಾ ರಾಜನ್ ಖ್ಯಾತ ಪತ್ರಕರ್ತ ಜೇ ಡೇ ಅವರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್