AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್​ಡಿಎಫ್​ಸಿ ನೆಟ್, ಮೊಬೈಲ್ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ; ಸೋಷಿಯಲ್ ಮೀಡಿಯಾ ಮೂಲಕ ಅಸಮಾಧಾನ ಹೊರಹಾಕಿದ ಗ್ರಾಹಕರು

ಇಂದು ಕೂಡ ಎಚ್​​ಡಿಎಫ್​ಸಿ ಬ್ಯಾಂಕ್​ ಗ್ರಾಹಕರು ತುಂಬ ಸಮಸ್ಯೆಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹೇಳಿಕೊಂಡಿದ್ದಾರೆ. ಇದು ಹಣಕಾಸು ವರ್ಷದ ಅಂತ್ಯ. ಈಗಲೇ ನೆಟ್​ ಬ್ಯಾಂಕಿಂಗ್​ ಮತ್ತು ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಕೈಕೊಟ್ಟಿವೆ. ವ್ಯವಹಾರಕ್ಕೆ ತುಂಬ ತೊಡಕಾಗುತ್ತಿದೆ ಎಂದು ಅಲವತ್ತುಕೊಂಡಿದ್ದಾರೆ.

ಎಚ್​ಡಿಎಫ್​ಸಿ ನೆಟ್, ಮೊಬೈಲ್ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ; ಸೋಷಿಯಲ್ ಮೀಡಿಯಾ ಮೂಲಕ ಅಸಮಾಧಾನ ಹೊರಹಾಕಿದ ಗ್ರಾಹಕರು
HDFC ಬ್ಯಾಂಕ್ 18 ವರ್ಷದೊಳಗಿನ ಯಾವುದೇ ಮಕ್ಕಳಿಗಾಗಿ ಕಿಡ್ಸ್ ಅಡ್ವಾಂಟೇಜ್ ಅಕೌಂಟ್ ತೆರೆಯಬಹುದು. ಆದರೆ ಪಾಲಕರು ಅಥವಾ ಪೋಷಕರು ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಉಳಿತಾಯ ಖಾತೆಯನ್ನು ಹೊಂದಿರಬೇಕು. ಈ ಉಳಿತಾಯ ಖಾತೆಯು ರೂ. 5,000 ಕನಿಷ್ಠ ಬ್ಯಾಲೆನ್ಸ್ ಮಾನದಂಡದೊಂದಿಗೆ ಬರುತ್ತದೆ ಮತ್ತು ಅದನ್ನು ನಿರ್ವಹಿಸಬೇಕು. ಪಾಲಕರು ಅಥವಾ ಪೋಷಕರ ಸಾವಿನ ಸಂದರ್ಭದಲ್ಲಿ ಈ ಖಾತೆ ಮೂಲಕವಾಗಿ ಮಗುವಿಗೆ 1 ಲಕ್ಷ ರೂಪಾಯಿಗಳ ಉಚಿತ ಶಿಕ್ಷಣ ವಿಮಾ ರಕ್ಷಣೆ ಇದೆ. ಮನಿಮ್ಯಾಕ್ಸಿಮೈಸರ್ ಸೌಲಭ್ಯವೂ ಇದೆ. ಇದರಲ್ಲಿ ಮಗುವಿನ ಉಳಿತಾಯ ಖಾತೆಯಲ್ಲಿನ ಬ್ಯಾಲೆನ್ಸ್ ರೂ. 35,000 ಮೀರಿದರೆ ರೂ. 25,000 ಮೀರಿದ ಮೊತ್ತವು ಮಗುವಿನ ಹೆಸರಿನಲ್ಲಿ 1 ವರ್ಷ 1 ದಿನದ ಫಿಕ್ಸೆಡ್​ ಡೆಪಾಸಿಟ್​ ಆಗಿ ತಾನೇ ತಾನಾಗಿ ವರ್ಗಾವಣೆಯಾಗುತ್ತದೆ. 7 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಬ್ಯಾಂಕಿನಿಂದ ಎಟಿಎಂ, ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್‌ನಂತಹ ಸೌಲಭ್ಯಗಳನ್ನು ಒದಗಿಸಲಾಗಿದೆ. ಮಗುವು ಎಟಿಎಮ್‌ಗಳಲ್ಲಿ ರೂ. 2,500ವರೆಗೂ ಹಣವನ್ನು ಹಿಂಪಡೆಯಬಹುದು ಮತ್ತು ದಿನಕ್ಕೆ ರೂ. 10,000 ವ್ಯಾಪಾರ- ವಹಿವಾಟಿನ ಸ್ಥಳಗಳಲ್ಲಿ ಖರ್ಚು ಮಾಡಬಹುದು. ಆದರೆ ಇದಕ್ಕೆ ಪೋಷಕರ ಅನುಮತಿಯು ಬ್ಯಾಂಕ್‌ಗೆ ಬೇಕಾಗುತ್ತದೆ.
Lakshmi Hegde
|

Updated on: Mar 30, 2021 | 6:59 PM

Share

ದೇಶದ ಖಾಸಗಿ ವಲಯದ ಅತಿದೊಡ್ಡ ಬ್ಯಾಂಕ್ ಆಗಿರುವ ಎಚ್​ಡಿಎಫ್​ಸಿ ಬ್ಯಾಂಕ್​ನ ನೆಟ್​ ಬ್ಯಾಂಕಿಂಗ್​ ಮತ್ತು ಮೊಬೈಲ್ ಬ್ಯಾಂಕಿಂಗ್​ ಸೇವೆಯಲ್ಲಿ ಮಂಗಳವಾರ ವ್ಯತ್ಯಯವಾಗಿದೆ. ಈ ಬಗ್ಗೆ ಎಚ್​ಡಿಎಫ್​ಸಿ ಬ್ಯಾಂಕ್ ಟ್ವೀಟ್ ಮಾಡಿ, ನಮ್ಮ ಹಲವು ಗ್ರಾಹಕರಿಗೆ ಇಂದು ನೆಟ್​ ಬ್ಯಾಂಕ್​ ಮತ್ತು ಮೊಬೈಲ್ ಬ್ಯಾಂಕಿಂಗ್​ ಸರಿಯಾಗಿ ಕಾರ್ಯನಿರ್ವಹಿಸಿಲ್ಲ. ಆ್ಯಪ್​ನಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಬಗ್ಗೆ ನಮಗೆ ರಿಪೋರ್ಟ್ ಮಾಡಿದ್ದು, ನಾವು ಪರಿಶೀಲನೆ ನಡೆಸಿದ್ದೇವೆ ಎಂದು ತಿಳಿಸಿದೆ. ಅಷ್ಟೇ ಅಲ್ಲ, ಅನನುಕೂಲತೆಗಾಗಿ ಕ್ಷಮೆ ಕೇಳುತ್ತೇವೆ ಎಂದೂ ಹೇಳಿಕೊಂಡಿದೆ.

ಎಚ್​ಡಿಎಫ್​ಸಿ ಹಲವು ಗ್ರಾಹಕರಿಗೆ ಇಂದು ನೆಟ್​ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್​ ಸೇವೆಯಲ್ಲಿ ಸಮಸ್ಯೆಯಾಗಿದ್ದು, ಟ್ವಿಟರ್​, ಸೋಷಿಯಲ್ ಮೀಡಿಯಾಗಳ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. ಇನ್ನು ಎಚ್​ಡಿಎಫ್​ಸಿ ಆ್ಯಪ್​ನಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ನೆಟ್​ ಹಾಗೂ ಮೊಬೈಲ್ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯವಾಗಿದ್ದು ಇದೇ ಮೊದಲೇನೂ ಅಲ್ಲ. ಕಳೆದ ವರ್ಷ ಡಿಸೆಂಬರ್​ನಲ್ಲಿ ಕೂಡ ಪದೇಪದೆ ಹೀಗೆ ಆಗುತ್ತಿತ್ತು. ಆಗ ಎಲ್ಲ ಡಿಜಿಟಲ್​ ಲಾಂಚ್​ಗಳನ್ನೂ ತಾತ್ಕಾಲಿಕವಾಗಿ ನಿಲ್ಲಿಸುವಂತೆ ಆರ್​ಬಿಐ ಎಚ್​ಡಿಎಫ್​ಸಿ ಬ್ಯಾಂಕ್​ಗೆ ಹೇಳಿತ್ತು.

ಇಂದು ಕೂಡ ಎಚ್​​ಡಿಎಫ್​ಸಿ ಬ್ಯಾಂಕ್​ ಗ್ರಾಹಕರು ತುಂಬ ಸಮಸ್ಯೆಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹೇಳಿಕೊಂಡಿದ್ದಾರೆ. ಇದು ಹಣಕಾಸು ವರ್ಷದ ಅಂತ್ಯ. ಈಗಲೇ ನೆಟ್​ ಬ್ಯಾಂಕಿಂಗ್​ ಮತ್ತು ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಕೈಕೊಟ್ಟಿವೆ. ವ್ಯವಹಾರಕ್ಕೆ ತುಂಬ ತೊಡಕಾಗುತ್ತಿದೆ ಎಂದು ಅಲವತ್ತುಕೊಂಡಿದ್ದಾರೆ. ಎಚ್​ಡಿಎಫ್​ಸಿ ಬ್ಯಾಂಕ್​ನ ಡಿಜಿಟಲ್ ಸೇವೆಗಳು ಸಂಪೂರ್ಣವಾಗಿ ಸರಿ ಹೋಗುವುದಾದರೂ ಯಾವಾಗ ಎಂದು ಅನೇಕರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: PM Modi in Tamil Nadu: ವಿಧಾನಸಭೆಯಲ್ಲಿ ಡಿಎಂಕೆ ನಾಯಕರು ಜಯಲಲಿತಾ ಜತೆ ವರ್ತಿಸಿದ್ದನ್ನು ಮರೆಯಬಾರದು: ನರೇಂದ್ರ ಮೋದಿ

ಬೆಳಗಾವಿಯಲ್ಲೇ ವಾಸ್ತವ್ಯ ಹೂಡಬೇಕಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಪ್ರವಾಸದಲ್ಲಿ ದಿಢೀರ್ ಬದಲಾವಣೆ

Follow Us
Lakshmi Hegde
Lakshmi Hegde
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ