AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ರೂಪಾಯಿನೂ ಕೊಡಲ್ಲ ಎಂದಿದ್ದಕ್ಕೆ ರೋಹಿತ್ ಗ್ಯಾಂಗ್​ನಿಂದ ರಾಜಸ್ಥಾನದ ಉದ್ಯಮಿಯ ಗುಂಡಿಕ್ಕಿ ಹತ್ಯೆ

ನೂರು ರೂಪಾಯಿನೂ ಕೊಡಲ್ಲ ಎಂದಿದ್ದಕ್ಕೆ ರಾಜಸ್ಥಾನದ ಉದ್ಯಮಿ(Businessman)ಯನ್ನು ರೋಹಿತ್ ಗೋದಾರ ಗ್ಯಾಂಗ್ ಗುಂಡಿಕ್ಕಿ ಹತ್ಯೆ(Murder) ಮಾಡಿರುವ ಘಟನೆ ವರದಿಯಾಗಿದೆ. ನಗರದಲ್ಲಿ ಬೈಕ್ ಶೋ ರೂಂ ಹಾಗೂ ಹೋಟೆಲ್ ಹೊಂದಿರುವ 40 ವರ್ಷದ ರಮೇಶ್ ರುಲಾನಿಯಾ ಅವರ ಮೇಲೆ ಮುಸುಕುಧಾರಿ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಘಟನೆ ಬೆಳಗಿನ ಜಾವ ನಡೆದಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಶಂಕಿತ ವ್ಯಕ್ತಿ ಎರಡನೇ ಮಹಡಿಯಲ್ಲಿರುವ ಜಿಮ್‌ಗೆ ಪ್ರವೇಶಿಸಿ ರುಲಾನಿಯಾ ಮೇಲೆ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ.

100 ರೂಪಾಯಿನೂ ಕೊಡಲ್ಲ ಎಂದಿದ್ದಕ್ಕೆ ರೋಹಿತ್ ಗ್ಯಾಂಗ್​ನಿಂದ ರಾಜಸ್ಥಾನದ ಉದ್ಯಮಿಯ ಗುಂಡಿಕ್ಕಿ ಹತ್ಯೆ
ಉದ್ಯಮಿ ಹತ್ಯೆ
ನಯನಾ ರಾಜೀವ್
|

Updated on: Oct 07, 2025 | 2:47 PM

Share

ಜೈಪುರ, ಅಕ್ಟೋಬರ್ 07: ನೂರು ರೂಪಾಯಿನೂ ಕೊಡಲ್ಲ ಎಂದಿದ್ದಕ್ಕೆ ರಾಜಸ್ಥಾನದ ಉದ್ಯಮಿ(Businessman)ಯನ್ನು ರೋಹಿತ್ ಗೋದಾರ ಗ್ಯಾಂಗ್ ಗುಂಡಿಕ್ಕಿ ಹತ್ಯೆ(Murder) ಮಾಡಿರುವ ಘಟನೆ ವರದಿಯಾಗಿದೆ. ನಗರದಲ್ಲಿ ಬೈಕ್ ಶೋ ರೂಂ ಹಾಗೂ ಹೋಟೆಲ್ ಹೊಂದಿರುವ 40 ವರ್ಷದ ರಮೇಶ್ ರುಲಾನಿಯಾ ಅವರ ಮೇಲೆ ಮುಸುಕುಧಾರಿ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಘಟನೆ ಬೆಳಗಿನ ಜಾವ ನಡೆದಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಶಂಕಿತ ವ್ಯಕ್ತಿ ಎರಡನೇ ಮಹಡಿಯಲ್ಲಿರುವ ಜಿಮ್‌ಗೆ ಪ್ರವೇಶಿಸಿ ರುಲಾನಿಯಾ ಮೇಲೆ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ.

ಪಶ್ಚಿಮ ರಾಜಸ್ಥಾನದಲ್ಲಿ ರೋಹಿತ್ ಗ್ಯಾಂಗ್​ನ ಹವಾ ಹೆಚ್ಚಿದೆ. ಪೋರ್ಚುಗಲ್‌ನಲ್ಲಿ ಇದ್ದಾರೆ ಎಂದು ನಂಬಲಾದ ರೋಹಿತ್ ಗೋದಾರನ ಸಹಚರ ವೀರಂದರ್ ಚರಣ್, ರುಲಾನಿಯಾಗೆ ಹಣ ಕೊಡುವಂತೆ ಕರೆ ಮಾಡಿ ಬೆದರಿಕೆ ಹಾಕಿದ್ದ, ಆ ಸಮಯದಲ್ಲಿ ರುಲಾನಿಯಾ ನಿನಗೆ 100 ರೂಪಾಯಿನೂ ಕೊಡಲ್ಲ ಎಂದು ಹೇಳಿ ಕರೆ ಕಟ್ ಮಾಡಿದ್ದರು.

ಅದೇ ಕೋಪವನ್ನಯ ಮನಸ್ಸಿನಲ್ಲಿಟ್ಟುಕೊಂಡಿದ್ದ ಆತ ರುಲಾನಿಯಾ ಹತ್ಯೆಗೆ ಸಂಚು ರೂಪಿಸಿದ್ದ, ಯಾರನ್ನೂ ಮರೆಯುವುದಿಲ್ಲ ಎಲ್ಲವೂ ನೆನಪಿರುತ್ತದೆ ಎಂದು ಹೇಳುತ್ತಾ ಗುಂಡು ಹಾರಿಸಿದ್ದಾನೆ. ನಮ್ಮ ಕರೆಗಳನ್ನು ಯಾರು ನಿರ್ಲಕ್ಷಿಸುತ್ತಾರೋ ಅಥವಾ ಕಿವಿಗೊಡುವುದಿಲ್ಲವೋ ಸಿದ್ಧರಾಗಿರಿ ಮುಂದಿನ ಸರದಿ ನಿಮ್ಮದೇ ಎಂದು ಹೇಳಿದ್ದಾನೆ. ಇತ್ತೀಚೆಗೆ ಈ ಪ್ರದೇಶದ ಹಲವಾರು ಇತರ ಉದ್ಯಮಿಗಳಿಗೂ ಇದೇ ರೀತಿಯ ಬೆದರಿಕೆಗಳು ಬಂದಿವೆ ಎಂದು ವರದಿಯಾಗಿದೆ.

ರೋಹಿತ್ ಗೋದಾರ ಗ್ಯಾಂಗ್ ರಾವತರಾಮ್ ಸ್ವಾಮಿ, ಅಲಿಯಾಸ್ ರೋಹಿತ್ ಗೋದಾರ, ರಾಜಸ್ಥಾನದ ಬಿಕಾನೇರ್‌ನ ಕುಖ್ಯಾತ ಗ್ಯಾಂಗ್​​ಸ್ಟರ್ ಆಗಿದ್ದು, ಪ್ರಸ್ತುತ ಪೋರ್ಚುಗಲ್‌ನಲ್ಲಿದ್ದಾನೆಂದು ಹೇಳಲಾಗುತ್ತದೆ. ಡಿಸೆಂಬರ್ 2022 ರಲ್ಲಿ ಸಿಕಾರ್‌ನಲ್ಲಿ ನಾಲ್ವರು ದುಷ್ಕರ್ಮಿಗಳಿಂದ ಗುಂಡಿಕ್ಕಿ ಕೊಲ್ಲಲ್ಪಟ್ಟ ಗ್ಯಾಂಗ್​ಸ್ಟರ್ ರಾಜು ಥೆಹತ್ ಹತ್ಯೆಯ ಮಾಸ್ಟರ್ ಮೈಂಡ್ ಕೂಡ ಈತನೇ ಎಂದು ನಂಬಲಾಗಿದೆ.

ಮತ್ತಷ್ಟು ಓದಿ: ಟ್ರಂಪ್ ಆಪ್ತ ಚಾರ್ಲಿ ಕಿರ್ಕ್ ಹತ್ಯೆ; ಗುಂಡೇಟಿನ ಕ್ಷಣ, ಜನರ ಕಿರುಚಾಟದ ವಿಡಿಯೋ ಇಲ್ಲಿದೆ

ಮೇ 2022 ರಲ್ಲಿ ನಡೆದ ಜನಪ್ರಿಯ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯಲ್ಲೂ ಗೋದಾರಾ ಹೆಸರು ಕೇಳಿಬಂದಿತ್ತು. ಡಿಸೆಂಬರ್ 2023 ರಲ್ಲಿ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೇಡಿ ಅವರ ಹತ್ಯೆಯ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ (ಡಿಯುಎಸ್‌ಯು) ಮಾಜಿ ಅಧ್ಯಕ್ಷ ರೋನಕ್ ಖತ್ರಿ ಕೂಡ ಇತ್ತೀಚೆಗೆ ತಮಗೆ ಅಂತಾರಾಷ್ಟ್ರೀಯ ಸಂಖ್ಯೆಯಿಂದ 5 ಕೋಟಿ ರೂ.ಗೆ ಬೆದರಿಕೆ ಕರೆ ಬಂದಿತ್ತು ಎಂದು ಆರೋಪಿಸಿದ್ದರು. ಕರೆ ಮಾಡಿದ ವ್ಯಕ್ತಿ ರೋಹಿತ್ ಗೋದಾರ ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿರುವುದಾಗಿ ಹೇಳಿಕೊಂಡು ಹಣ ಪಾವತಿಸದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು.

ಕರೆ ಬಂದ ಕೂಡಲೇ, ಅದೇ ಸಂಖ್ಯೆಯಿಂದ ನನಗೆ ಕೊಲೆ ಬೆದರಿಕೆ ಮತ್ತು ಬೇಡಿಕೆಯನ್ನು ಪುನರಾವರ್ತಿಸುವ ವಾಟ್ಸಾಪ್ ಸಂದೇಶ ಬಂದಿತು ಎಂದು ಖತ್ರಿ ತಮ್ಮ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!