Sign In

By signing in or creating an account, you agree with Associated Broadcasting Company's Terms & Conditions and Privacy Policy.

Snakebite: ಸಾವು ಯಾವಾಗ, ಹೇಗೆ, ಯಾರಿಗೆ ಬೇಕಾದರೂ ಬರಬಹುದು! ಹಾವು ಕಚ್ಚಿ ಹೆಡ್​​​ ಕಾನ್ಸಟೇಬಲ್​​ ಸಾವು

ಕಾನ್ಸ್‌ಟೇಬಲ್ ಪವನ್ ಕುಮಾರ್ ಅವರ ಮೃತದೇಹವನ್ನು ಚಿಮಕುರ್ತಿಯಲ್ಲಿ ಪೊಲೀಸ್ ಗೌರವದೊಂದಿಗೆ ಅಂತ್ಯಸಂಸ್ಕಾರ ಮಾಡಲಾಯಿತು.

Snakebite: ಸಾವು ಯಾವಾಗ, ಹೇಗೆ, ಯಾರಿಗೆ ಬೇಕಾದರೂ ಬರಬಹುದು! ಹಾವು ಕಚ್ಚಿ ಹೆಡ್​​​ ಕಾನ್ಸಟೇಬಲ್​​ ಸಾವು
ಹಾವು ಕಚ್ಚಿ ಹೆಡ್​​​ ಕಾನ್ಸಟೇಬಲ್​​ ಸಾವು
Follow us
ಸಾಧು ಶ್ರೀನಾಥ್​
|

Updated on:May 26, 2023 | 11:21 AM

ವಿಜಯವಾಡ: ಹಾವಿಗೆ ಪೊಲೀಸ್​ ಪೇದೆ ಆದರೇನು, ಶ್ರೀಸಾಮಾನ್ಯ ಮನುಷ್ಯ ಆದರೇನು. ಕಚ್ಚುವುದು ಅದರ ಬುದ್ಧಿಯಾಗಿರುವಾಗ ಯಾರಿಗೆ ಬೇಕಾದರೂ ಕಚ್ಚೀತು ಅದು. ಇನ್ನು ಸಾವು ಎಂಬ ಮಾಯೆ ಯಾವಾಗ, ಹೇಗೆ, ಯಾರಿಗೆ ಬೇಕಾದರೂ ಬರಬಹುದು! ಇಲ್ಲೂ ಅದೇ ಆಗಿರುವುದು ಭುಸುಗುಟ್ಟಿತ್ತಿರುವ ಹಾವೊಂದು ಹೆಡ್​​​ ಕಾನ್ಸಟೇಬಲ್​​ (Head constable) ಗೆ ಕಚ್ಚಿಯೇ ಬಿಟ್ಟಿದೆ (Snakebite). ದುರ್ದೃರ್ದೈವವೆಂದರೆ ಆ ಪೇದೆ ಸಾವಿಗೀಡಾಗಿದ್ದಾರೆ. ಇಷ್ಟಕ್ಕೂ ಅಷ್ಟೊಂದು ಬಲಾಢ್ಯ ಪೊಲೀಸ್​​ ಪೇದೆಯನ್ನು ಅದು ಹೇಗೆ ಹಾವು ಕಚ್ಚಿತು ಎಂಬುದೇ ಎಲ್ರನ್ನೂ ಕಾಡುವ ಪ್ರಶ್ನೆ.  ಗುಂಟೂರು ಜಿಲ್ಲೆಯ ತಲ್ಲೂರು ಜಗನಣ್ಣ ಲೇಔಟ್‌ನಲ್ಲಿ ಕಳೆದ ವಾರ ಹಾವು ಕಡಿತಕ್ಕೊಳಗಾದ ಪೊಲೀಸ್ ಪೇದೆಯೊಬ್ಬರು ಗುಂಟೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕೊನೆಗೂ ಕೊನೆಯುಸಿರೆಳೆದಿದ್ದಾರೆ.

ಪೊಲೀಸರ ಪ್ರಕಾರ, ಪ್ರಕಾಶಂ ಜಿಲ್ಲೆಯ ತಲ್ಲೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಪವನ್ ಕುಮಾರ್ (34) ತಲ್ಲೂರು ಮಂಡಲದ ಜಗನಣ್ಣ ಲೇಔಟ್‌ನಲ್ಲಿ ಸೇವೆಗೆ ನಿಯೋಜಿಸಲ್ಪಟ್ಟಿದ್ದರು. ವಾರದ ಹಿಂದೆ ಸೋಮವಾರ ಮತ್ತು ಮಂಗಳವಾರ ಮಧ್ಯರಾತ್ರಿ ಅವರಿಗೆ ಹಾವು ಕಚ್ಚಿದೆ. ತಕ್ಷಣವೇ ಹಾವನ್ನು ಕೊಂದು, ಕಾನ್‌ಸ್ಟೆಬಲ್‌ನನ್ನು ಗುಂಟೂರಿನ ಜಿಜಿಎಚ್‌ಗೆ ದಾಖಲಿಸಲಾಯಿತು.

Also read:  Mangaluru News: ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ನಂತರ ಉತ್ತಮ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಕಾನ್ಸ್‌ಟೇಬಲ್ ಪವನ್ ಕುಮಾರ್ ಅವರ ಮೃತದೇಹವನ್ನು ಚಿಮಕುರ್ತಿಯಲ್ಲಿ ಪೊಲೀಸ್ ಗೌರವದೊಂದಿಗೆ ಅಂತ್ಯಸಂಸ್ಕಾರ ಮಾಡಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:20 am, Fri, 26 May 23

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ