Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಭಿಣಿಯರು ಕೊರೊನಾ ಲಸಿಕೆ ಪಡೆಯಬಹುದು: ಕೇಂದ್ರ ಆರೋಗ್ಯ ಇಲಾಖೆ ನಿರ್ಧಾರ

ಬಾಣಂತಿಯರು ಲಸಿಕೆ ಪಡೆಯಲು ಈ ಮೊದಲು ಒಪ್ಪಿಗೆ ನೀಡಲಾಗಿತ್ತು. ಇದೀಗ, ಗರ್ಭಿಣಿಯರು ಕೂಡ ಲಸಿಕೆ ಪಡೆಯಬಹುದು ಎಂದು ರಾಷ್ಟ್ರೀಯ ಲಸಿಕಾ ತಾಂತ್ರಿಕ ಸಲಹಾ ತಂಡ ಶಿಫಾರಸು ಮಾಡಿದೆ.

ಗರ್ಭಿಣಿಯರು ಕೊರೊನಾ ಲಸಿಕೆ ಪಡೆಯಬಹುದು: ಕೇಂದ್ರ ಆರೋಗ್ಯ ಇಲಾಖೆ ನಿರ್ಧಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Jul 02, 2021 | 6:24 PM

ದೆಹಲಿ: ಗರ್ಭಿಣಿಯರು ಕೂಡ ಕೊರೊನಾ ಲಸಿಕೆ ಪಡೆಯಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಬಾಣಂತಿಯರು ಲಸಿಕೆ ಪಡೆಯಲು ಈ ಮೊದಲು ಒಪ್ಪಿಗೆ ನೀಡಲಾಗಿತ್ತು. ಇದೀಗ, ಗರ್ಭಿಣಿಯರು ಕೂಡ ಲಸಿಕೆ ಪಡೆಯಬಹುದು ಎಂದು ರಾಷ್ಟ್ರೀಯ ಲಸಿಕಾ ತಾಂತ್ರಿಕ ಸಲಹಾ ತಂಡ ಶಿಫಾರಸು ಮಾಡಿದೆ. ರಾಷ್ಟ್ರೀಯ ಲಸಿಕಾ ತಾಂತ್ರಿಕ ಸಲಹಾ ತಂಡದ ಶಿಫಾರಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಕೊವಿಡ್ -19 ಲಸಿಕೆ ಗರ್ಭಿಣಿಯರಿಗೆ ಉಪಯುಕ್ತವಾದ ಕಾರಣ ಅವರಿಗೆ ನೀಡಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಹಾನಿರ್ದೇಶಕ ಡಾ. ಬಲರಾಮ್ ಭಾರ್ಗವ ಜೂನ್ 25ರಂದು ಹೇಳಿದ್ದರು. ಗರ್ಭಿಣಿಯರಿಗೆ ಲಸಿಕೆ ನೀಡಬಹುದು ಎಂದು ಆರೋಗ್ಯ ಸಚಿವಾಲಯ ಮಾರ್ಗಸೂಚಿಯಲ್ಲಿ ಹೇಳಿತ್ತು. ಗರ್ಭಿಣಿ ಮಹಿಳೆಯರಿಗೆ ವ್ಯಾಕ್ಸಿನೇಷನ್ ಉಪಯುಕ್ತವಾಗಿದೆ, ಅದನ್ನು ನೀಡಬೇಕು ಎಂದು ಅವರು ಹೇಳಿದ್ದರು.

ದೇಶದ ಕೊವಿಡ್ -19 ಪರಿಸ್ಥಿತಿ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರ್ಗವ, ಕೇವಲ ಒಂದು ದೇಶ ಮಾತ್ರ ಮಕ್ಕಳಿಗೆ ಕೋವಿಡ್ -19 ಲಸಿಕೆ ನೀಡುತ್ತಿದೆ. 2-18 ವಯಸ್ಸಿನ ಮಕ್ಕಳ ಬಗ್ಗೆ ಸಣ್ಣ ಅಧ್ಯಯನವನ್ನು ನಡೆಸಲಾಗಿದ್ದು, ಸೆಪ್ಟೆಂಬರ್ ವೇಳೆಗೆ ಫಲಿತಾಂಶಗಳು ಬರುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದರು. ತೀರಾ ಸಣ್ಣ ಮಕ್ಕಳಿಗೆ ಲಸಿಕೆ ಅಗತ್ಯವಿದೆಯೇ ಎಂಬುದು ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ ಎಂದು ಭಾರ್ಗವ ಹೇಳಿದ್ದರು. ಅಲ್ಲಿಯವರೆಗೆ ನಾವು ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಹೆಚ್ಚಿನ ಡೇಟಾವನ್ನು ಹೊಂದಿರುತ್ತೇವೆ, ಹೆಚ್ಚಿನ ಪ್ರಮಾಣದಲ್ಲಿ ಮಕ್ಕಳಿಗೆ ಲಸಿಕೆ ಹಾಕಲು ನಮಗೆ ಸಾಧ್ಯವಾಗುವುದಿಲ್ಲ ಎಂದು ಅವರು ವಿವರಣೆ ನೀಡಿದ್ದರು.

ಐಸಿಎಂಆರ್ ಇತ್ತೀಚಿನ ಅಧ್ಯಯನವೊಂದರಲ್ಲಿ ಗರ್ಭಿಣಿ ಮತ್ತು ಪ್ರಸವನಂತರದ ಮಹಿಳೆಯರು ಭಾರತದ ಎರಡನೇ ಕೊವಿಡ್ -19 ಅಲೆಯಲ್ಲಿ ಮೊದಲಿಗಿಂತ ಹೆಚ್ಚು ತೀವ್ರ ಪರಿಣಾಮಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿತ್ತು. ಈ ವರ್ಷ ಸಾವಿನ ಪ್ರಮಾಣ ಮತ್ತು ರೋಗಲಕ್ಷಣದ ಪ್ರಕರಣಗಳು ಗಮನಾರ್ಹವಾಗಿ ಹೆಚ್ಚಿವೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪಡೆಯುವ ಮುನ್ನ ಗರ್ಭಿಣಿಯರು ಗಮನಿಸಲೇಬೇಕಾದ ಅಂಶಗಳು; ಆರೋಗ್ಯ ಇಲಾಖೆಯ ಮಾರ್ಗಸೂಚಿ ಪ್ರಕಟ

ಗರ್ಭಿಣಿ, ಬಾಣಂತಿಯರಿಗೆ ತೀವ್ರವಾಗಿ ಬಾಧಿಸಿದ ಕೊವಿಡ್​ 19 ಎರಡನೇ ಅಲೆ; ಐಸಿಎಂಆರ್​ ಅಧ್ಯಯನ

Published On - 5:58 pm, Fri, 2 July 21

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ