AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಶೀಲ್ಡ್ ಲಸಿಕೆ ತೆಗೆದುಕೊಂಡಿದ್ದ ವಾರ್ಡ್​ಬಾಯ್​ ಸಾವು; ವ್ಯಾಕ್ಸಿನ್​ ಕಾರಣವಲ್ಲ ಎಂದ ಸ್ಥಳೀಯ ಆಡಳಿತ

ಲಸಿಕೆಗಳು ಸುರಕ್ಷಿತವಾಗಿವೆ. ಮಹಿಪಾಲ್​ ಪ್ರಕರಣ ಭಿನ್ನವಾಗಿದೆ. ಈ ಸಾವಿನ ಬಗ್ಗೆ ಉನ್ನತ ಮಟ್ಟದ ಪರಿಶೀಲನೆ ಮಾಡಲು ವೈದ್ಯರ ತಂಡ ರಚಿಸಲಾಗುವುದು ಎಂದು ಮೊರದಾಬಾದ್ ಜಿಲ್ಲಾಧಿಕಾರಿ ರಾಕೇಶ್​ ಸಿಂಗ್​ ತಿಳಿಸಿದ್ದಾರೆ.

ಕೊವಿಶೀಲ್ಡ್ ಲಸಿಕೆ ತೆಗೆದುಕೊಂಡಿದ್ದ ವಾರ್ಡ್​ಬಾಯ್​ ಸಾವು; ವ್ಯಾಕ್ಸಿನ್​ ಕಾರಣವಲ್ಲ ಎಂದ ಸ್ಥಳೀಯ ಆಡಳಿತ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 18, 2021 | 2:43 PM

Share

ಮೊರದಾಬಾದ್​: ನಿನ್ನೆ ಕೊವಿಡ್​-19 ಲಸಿಕೆಯನ್ನು ಪಡೆದಿದ್ದ 46 ವರ್ಷದ ಆರೋಗ್ಯ ಕಾರ್ಯಕರ್ತನೊಬ್ಬ ಇಂದು ಮೃತಪಟ್ಟಿದ್ದಾಗಿ ಪಿಟಿಐ ವರದಿ ಮಾಡಿದೆ. ಆದರೆ ಈ ಸಾವಿನ ವಿಚಾರದಲ್ಲಿ ಇನ್ನೂ ಗೊಂದಲ ಇದ್ದು, ಲಸಿಕೆ ಪಡೆದಿದ್ದರಿಂದಲೇ ಹೀಗಾಗಿದೆಯಾ ಎಂಬುದು ಸ್ಪಷ್ಟವಾಗಿಲ್ಲ.

ಉತ್ತರಪ್ರದೇಶದ ಮೊರದಾಬಾದ್​ ಸರ್ಕಾರಿ ಆಸ್ಪತ್ರೆಯಲ್ಲಿ ವಾರ್ಡ್​ಬಾಯ್​ ಆಗಿದ್ದ ಮಹಿಪಾಲ್ ಶನಿವಾರ​ ಕೊವಿಶೀಲ್ಡ್ ಲಸಿಕೆ ಪಡೆದಿದ್ದರು. ಲಸಿಕೆ ತೆಗೆದುಕೊಂಡ ಬಳಿಕ ಅಸ್ವಸ್ಥನಾಗಿದ್ದ. ನಂತರ ಆತ ಸಾವನ್ನಪ್ಪಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಆದರೆ ಇದನ್ನು ಸ್ಥಳೀಯ ಆಡಳಿತ ನಿರಾಕರಿಸಿದ್ದು, ಮಹಿಪಾಲ್​ ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ.

ಇದರಿಂದಲೇ ಮರಣ ಹೊಂದಿದ್ದಾನೆ ಎಂದು ಹೇಳಿದೆ. ಆದರೆ ಈ ವಾದವನ್ನು ಕುಟುಂಬದವರು ಒಪ್ಪುತ್ತಿಲ್ಲ. ಮಹಿಪಾಲ್​ಗೆ ಯಾವುದೇ ಹೃದಯ ಸಂಬಂಧಿ ರೋಗ ಇರಲಿಲ್ಲ. ಜ್ವರ ಹಾಗೂ ಕೆಮ್ಮು ಬಿಟ್ಟರೆ ಇನ್ಯಾವುದೇ ರೋಗವೂ ಇರಲಿಲ್ಲ ಎಂದು ಹೇಳುತ್ತಿದ್ದಾರೆ.

ಲಸಿಕೆ ತೆಗೆದುಕೊಂಡ ಹಲವರು ಜ್ವರದಿಂದ ಬಳಲುತ್ತಿರುವುದು ಸತ್ಯ. ಆದರೆ ರಾಜ್ಯದಲ್ಲಿ ಎಲ್ಲಿಯೂ, ಯಾರಿಗೂ ಅಡ್ಡಪರಿಣಾಮ ಉಂಟಾಗಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಲಸಿಕೆಗಳು ಸುರಕ್ಷಿತವಾಗಿವೆ. ಮಹಿಪಾಲ್​ ಪ್ರಕರಣ ಭಿನ್ನವಾಗಿದೆ. ಈ ಸಾವಿನ ಬಗ್ಗೆ ಉನ್ನತ ಮಟ್ಟದ ಪರಿಶೀಲನೆ ಮಾಡಲು ವೈದ್ಯರ ತಂಡ ರಚಿಸಲಾಗುವುದು ಎಂದು ಮೊರದಾಬಾದ್ ಜಿಲ್ಲಾಧಿಕಾರಿ ರಾಕೇಶ್​ ಸಿಂಗ್​ ತಿಳಿಸಿದ್ದಾರೆ.

ದೆಹಲಿ: ಕೊರೊನಾ ಲಸಿಕೆ ಪಡೆದ 51 ಜನರಿಗೆ ಅಲರ್ಜಿ, ಓರ್ವನ ಸ್ಥಿತಿ ಗಂಭೀರ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ