AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಶೀಲ್ಡ್ ಲಸಿಕೆ ತೆಗೆದುಕೊಂಡಿದ್ದ ವಾರ್ಡ್​ಬಾಯ್​ ಸಾವು; ವ್ಯಾಕ್ಸಿನ್​ ಕಾರಣವಲ್ಲ ಎಂದ ಸ್ಥಳೀಯ ಆಡಳಿತ

ಲಸಿಕೆಗಳು ಸುರಕ್ಷಿತವಾಗಿವೆ. ಮಹಿಪಾಲ್​ ಪ್ರಕರಣ ಭಿನ್ನವಾಗಿದೆ. ಈ ಸಾವಿನ ಬಗ್ಗೆ ಉನ್ನತ ಮಟ್ಟದ ಪರಿಶೀಲನೆ ಮಾಡಲು ವೈದ್ಯರ ತಂಡ ರಚಿಸಲಾಗುವುದು ಎಂದು ಮೊರದಾಬಾದ್ ಜಿಲ್ಲಾಧಿಕಾರಿ ರಾಕೇಶ್​ ಸಿಂಗ್​ ತಿಳಿಸಿದ್ದಾರೆ.

ಕೊವಿಶೀಲ್ಡ್ ಲಸಿಕೆ ತೆಗೆದುಕೊಂಡಿದ್ದ ವಾರ್ಡ್​ಬಾಯ್​ ಸಾವು; ವ್ಯಾಕ್ಸಿನ್​ ಕಾರಣವಲ್ಲ ಎಂದ ಸ್ಥಳೀಯ ಆಡಳಿತ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Jan 18, 2021 | 2:43 PM

Share

ಮೊರದಾಬಾದ್​: ನಿನ್ನೆ ಕೊವಿಡ್​-19 ಲಸಿಕೆಯನ್ನು ಪಡೆದಿದ್ದ 46 ವರ್ಷದ ಆರೋಗ್ಯ ಕಾರ್ಯಕರ್ತನೊಬ್ಬ ಇಂದು ಮೃತಪಟ್ಟಿದ್ದಾಗಿ ಪಿಟಿಐ ವರದಿ ಮಾಡಿದೆ. ಆದರೆ ಈ ಸಾವಿನ ವಿಚಾರದಲ್ಲಿ ಇನ್ನೂ ಗೊಂದಲ ಇದ್ದು, ಲಸಿಕೆ ಪಡೆದಿದ್ದರಿಂದಲೇ ಹೀಗಾಗಿದೆಯಾ ಎಂಬುದು ಸ್ಪಷ್ಟವಾಗಿಲ್ಲ.

ಉತ್ತರಪ್ರದೇಶದ ಮೊರದಾಬಾದ್​ ಸರ್ಕಾರಿ ಆಸ್ಪತ್ರೆಯಲ್ಲಿ ವಾರ್ಡ್​ಬಾಯ್​ ಆಗಿದ್ದ ಮಹಿಪಾಲ್ ಶನಿವಾರ​ ಕೊವಿಶೀಲ್ಡ್ ಲಸಿಕೆ ಪಡೆದಿದ್ದರು. ಲಸಿಕೆ ತೆಗೆದುಕೊಂಡ ಬಳಿಕ ಅಸ್ವಸ್ಥನಾಗಿದ್ದ. ನಂತರ ಆತ ಸಾವನ್ನಪ್ಪಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಆದರೆ ಇದನ್ನು ಸ್ಥಳೀಯ ಆಡಳಿತ ನಿರಾಕರಿಸಿದ್ದು, ಮಹಿಪಾಲ್​ ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ.

ಇದರಿಂದಲೇ ಮರಣ ಹೊಂದಿದ್ದಾನೆ ಎಂದು ಹೇಳಿದೆ. ಆದರೆ ಈ ವಾದವನ್ನು ಕುಟುಂಬದವರು ಒಪ್ಪುತ್ತಿಲ್ಲ. ಮಹಿಪಾಲ್​ಗೆ ಯಾವುದೇ ಹೃದಯ ಸಂಬಂಧಿ ರೋಗ ಇರಲಿಲ್ಲ. ಜ್ವರ ಹಾಗೂ ಕೆಮ್ಮು ಬಿಟ್ಟರೆ ಇನ್ಯಾವುದೇ ರೋಗವೂ ಇರಲಿಲ್ಲ ಎಂದು ಹೇಳುತ್ತಿದ್ದಾರೆ.

ಲಸಿಕೆ ತೆಗೆದುಕೊಂಡ ಹಲವರು ಜ್ವರದಿಂದ ಬಳಲುತ್ತಿರುವುದು ಸತ್ಯ. ಆದರೆ ರಾಜ್ಯದಲ್ಲಿ ಎಲ್ಲಿಯೂ, ಯಾರಿಗೂ ಅಡ್ಡಪರಿಣಾಮ ಉಂಟಾಗಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಲಸಿಕೆಗಳು ಸುರಕ್ಷಿತವಾಗಿವೆ. ಮಹಿಪಾಲ್​ ಪ್ರಕರಣ ಭಿನ್ನವಾಗಿದೆ. ಈ ಸಾವಿನ ಬಗ್ಗೆ ಉನ್ನತ ಮಟ್ಟದ ಪರಿಶೀಲನೆ ಮಾಡಲು ವೈದ್ಯರ ತಂಡ ರಚಿಸಲಾಗುವುದು ಎಂದು ಮೊರದಾಬಾದ್ ಜಿಲ್ಲಾಧಿಕಾರಿ ರಾಕೇಶ್​ ಸಿಂಗ್​ ತಿಳಿಸಿದ್ದಾರೆ.

ದೆಹಲಿ: ಕೊರೊನಾ ಲಸಿಕೆ ಪಡೆದ 51 ಜನರಿಗೆ ಅಲರ್ಜಿ, ಓರ್ವನ ಸ್ಥಿತಿ ಗಂಭೀರ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್