AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಶೀಲ್ಡ್ ಲಸಿಕೆ ತೆಗೆದುಕೊಂಡಿದ್ದ ವಾರ್ಡ್​ಬಾಯ್​ ಸಾವು; ವ್ಯಾಕ್ಸಿನ್​ ಕಾರಣವಲ್ಲ ಎಂದ ಸ್ಥಳೀಯ ಆಡಳಿತ

ಲಸಿಕೆಗಳು ಸುರಕ್ಷಿತವಾಗಿವೆ. ಮಹಿಪಾಲ್​ ಪ್ರಕರಣ ಭಿನ್ನವಾಗಿದೆ. ಈ ಸಾವಿನ ಬಗ್ಗೆ ಉನ್ನತ ಮಟ್ಟದ ಪರಿಶೀಲನೆ ಮಾಡಲು ವೈದ್ಯರ ತಂಡ ರಚಿಸಲಾಗುವುದು ಎಂದು ಮೊರದಾಬಾದ್ ಜಿಲ್ಲಾಧಿಕಾರಿ ರಾಕೇಶ್​ ಸಿಂಗ್​ ತಿಳಿಸಿದ್ದಾರೆ.

ಕೊವಿಶೀಲ್ಡ್ ಲಸಿಕೆ ತೆಗೆದುಕೊಂಡಿದ್ದ ವಾರ್ಡ್​ಬಾಯ್​ ಸಾವು; ವ್ಯಾಕ್ಸಿನ್​ ಕಾರಣವಲ್ಲ ಎಂದ ಸ್ಥಳೀಯ ಆಡಳಿತ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Jan 18, 2021 | 2:43 PM

Share

ಮೊರದಾಬಾದ್​: ನಿನ್ನೆ ಕೊವಿಡ್​-19 ಲಸಿಕೆಯನ್ನು ಪಡೆದಿದ್ದ 46 ವರ್ಷದ ಆರೋಗ್ಯ ಕಾರ್ಯಕರ್ತನೊಬ್ಬ ಇಂದು ಮೃತಪಟ್ಟಿದ್ದಾಗಿ ಪಿಟಿಐ ವರದಿ ಮಾಡಿದೆ. ಆದರೆ ಈ ಸಾವಿನ ವಿಚಾರದಲ್ಲಿ ಇನ್ನೂ ಗೊಂದಲ ಇದ್ದು, ಲಸಿಕೆ ಪಡೆದಿದ್ದರಿಂದಲೇ ಹೀಗಾಗಿದೆಯಾ ಎಂಬುದು ಸ್ಪಷ್ಟವಾಗಿಲ್ಲ.

ಉತ್ತರಪ್ರದೇಶದ ಮೊರದಾಬಾದ್​ ಸರ್ಕಾರಿ ಆಸ್ಪತ್ರೆಯಲ್ಲಿ ವಾರ್ಡ್​ಬಾಯ್​ ಆಗಿದ್ದ ಮಹಿಪಾಲ್ ಶನಿವಾರ​ ಕೊವಿಶೀಲ್ಡ್ ಲಸಿಕೆ ಪಡೆದಿದ್ದರು. ಲಸಿಕೆ ತೆಗೆದುಕೊಂಡ ಬಳಿಕ ಅಸ್ವಸ್ಥನಾಗಿದ್ದ. ನಂತರ ಆತ ಸಾವನ್ನಪ್ಪಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಆದರೆ ಇದನ್ನು ಸ್ಥಳೀಯ ಆಡಳಿತ ನಿರಾಕರಿಸಿದ್ದು, ಮಹಿಪಾಲ್​ ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ.

ಇದರಿಂದಲೇ ಮರಣ ಹೊಂದಿದ್ದಾನೆ ಎಂದು ಹೇಳಿದೆ. ಆದರೆ ಈ ವಾದವನ್ನು ಕುಟುಂಬದವರು ಒಪ್ಪುತ್ತಿಲ್ಲ. ಮಹಿಪಾಲ್​ಗೆ ಯಾವುದೇ ಹೃದಯ ಸಂಬಂಧಿ ರೋಗ ಇರಲಿಲ್ಲ. ಜ್ವರ ಹಾಗೂ ಕೆಮ್ಮು ಬಿಟ್ಟರೆ ಇನ್ಯಾವುದೇ ರೋಗವೂ ಇರಲಿಲ್ಲ ಎಂದು ಹೇಳುತ್ತಿದ್ದಾರೆ.

ಲಸಿಕೆ ತೆಗೆದುಕೊಂಡ ಹಲವರು ಜ್ವರದಿಂದ ಬಳಲುತ್ತಿರುವುದು ಸತ್ಯ. ಆದರೆ ರಾಜ್ಯದಲ್ಲಿ ಎಲ್ಲಿಯೂ, ಯಾರಿಗೂ ಅಡ್ಡಪರಿಣಾಮ ಉಂಟಾಗಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಲಸಿಕೆಗಳು ಸುರಕ್ಷಿತವಾಗಿವೆ. ಮಹಿಪಾಲ್​ ಪ್ರಕರಣ ಭಿನ್ನವಾಗಿದೆ. ಈ ಸಾವಿನ ಬಗ್ಗೆ ಉನ್ನತ ಮಟ್ಟದ ಪರಿಶೀಲನೆ ಮಾಡಲು ವೈದ್ಯರ ತಂಡ ರಚಿಸಲಾಗುವುದು ಎಂದು ಮೊರದಾಬಾದ್ ಜಿಲ್ಲಾಧಿಕಾರಿ ರಾಕೇಶ್​ ಸಿಂಗ್​ ತಿಳಿಸಿದ್ದಾರೆ.

ದೆಹಲಿ: ಕೊರೊನಾ ಲಸಿಕೆ ಪಡೆದ 51 ಜನರಿಗೆ ಅಲರ್ಜಿ, ಓರ್ವನ ಸ್ಥಿತಿ ಗಂಭೀರ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು