AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್​ನಿಂದ ಕೆಳಗಿಳಿದು ಕಬ್ಬಿನಹಾಲು ಕುಡಿದ ಆರೋಗ್ಯ ಕಾರ್ಯಕರ್ತ; ಸ್ಥಳದಲ್ಲಿದ್ದವರಿಗೆಲ್ಲ ಆತಂಕ

ನೀವು ಕೊರೊನಾ ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೀರಿ, ಆದರೂ ಮಾಸ್ಕ್ ಕೂಡ ಸರಿಯಾಗಿ ಧರಿಸಿಲ್ಲವಲ್ಲ ಎಂದು ವಿಡಿಯೋ ಮಾಡುತ್ತಿದ್ದವರು ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ಈ ಆರೋಗ್ಯ ಕಾರ್ಯಕರ್ತ, ಕೊರೊನಾ ಇರುವುದು ನನಗಲ್ಲ.. ಅವನಿಗೆ ಎಂದು ರೋಗಿಯ ಕಡೆ ಕೈ ತೋರಿಸಿದ್ದಾರೆ.

ಕೊರೊನಾ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್​ನಿಂದ ಕೆಳಗಿಳಿದು ಕಬ್ಬಿನಹಾಲು ಕುಡಿದ ಆರೋಗ್ಯ ಕಾರ್ಯಕರ್ತ; ಸ್ಥಳದಲ್ಲಿದ್ದವರಿಗೆಲ್ಲ ಆತಂಕ
ಪಿಪಿಇ ಕಿಟ್​ ಧರಿಸಿ, ಆಂಬುಲೆನ್ಸ್​ನಿಂದ ಇಳಿದು ಜ್ಯೂಸ್ ಕುಡಿದ ಆರೋಗ್ಯ ಕಾರ್ಯಕರ್ತ
Lakshmi Hegde
|

Updated on:Apr 09, 2021 | 2:57 PM

Share

ಭೋಪಾಲ್​: ಕೊವಿಡ್​ 19 ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಆಂಬುಲೆನ್ಸ್​​ನಿಂದ ಆರೋಗ್ಯ ಕಾರ್ಯಕರ್ತನೊಬ್ಬ ಕೆಳಗಿಳಿದು ಜ್ಯೂಸ್​ ಕುಡಿದ ವಿಡಿಯೋ ವೈರಲ್ ಆಗುತ್ತಿದೆ. ಇದು ಮಧ್ಯಪ್ರದೇಶದ್ದು ಎಂದು ಹೇಳಲಾಗಿದೆ. ಸಾಮಾನ್ಯವಾಗಿ ಕೊವಿಡ್​-19 ರೋಗಿಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ, ಆಂಬುಲೆನ್ಸ್ ಚಾಲಕ, ಅವರ ಜತೆಗಿರುವ ಆರೋಗ್ಯ ಸಿಬ್ಬಂದಿ ಪಿಪಿಇ ಕಿಟ್​ ಹಾಕಿಕೊಳ್ಳಬೇಕು. ಕೊರೊನಾ ಸಾಂಕ್ರಾಮಿಕ ರೋಗವಾಗಿದ್ದರಿಂದ ಅವರಿಗೆ ರೋಗಿಗಳಿ ಚಿಕಿತ್ಸೆ ನೀಡುವಾಗ, ಅವರೊಂದಿಗೆ ವ್ಯವಹರಿಸುವಾಗ ತುಂಬ ಜಾಗರೂಕತೆಯಿಂದ ಇರಬೇಕಾಗುತ್ತದೆ. ಅಂಥದ್ದರಲ್ಲಿ ಈ ಆರೋಗ್ಯ ಕಾರ್ಯಕರ್ತ ಪಿಪಿಇ ಕಿಟ್​ ಹಾಕಿಕೊಂಡು, ಆಂಬುಲೆನ್ಸ್​ನಿಂದ ಕೆಳಗಿಳಿದು ಜ್ಯೂಸ್​ ಕುಡಿದಿದ್ದಾರೆ.

ಇದು ಮಧ್ಯಪ್ರದೇಶದ ಶಾಹ್​ದೋಲ್ ಜಿಲ್ಲೆಯಲ್ಲಿ ಚಿತ್ರೀಕರಿಸಲಾದ ವಿಡಿಯೋ. ಕೊರೊನಾ ರೋಗಿಯನ್ನು ಕರೆದುಕೊಂಡು ಹೋಗಲಾಗುತ್ತಿದ್ದ ಆಂಬುಲೆನ್ಸ್​​ನಲ್ಲಿ ಇಬ್ಬರು ಆರೋಗ್ಯ ಕಾರ್ಯಕರ್ತರು ಇದ್ದರು. ಅದರಲ್ಲಿ ಒಬ್ಬ ಕೆಳಗೆ ಇಳಿದು, ರಸ್ತೆ ಪಕ್ಕ ಇರುವ ಕಬ್ಬಿನ ಹಾಲಿನ ಅಂಗಡಿ ಬಳಿ ನಿಂತು ಕಬ್ಬಿನ ಹಾಲನ್ನು ನೀಡುವಂತೆ ಕೇಳಿದ್ದಾರೆ. ಅವರು ಪಿಪಿಇ ಕಿಟ್​ ಧರಿಸಿದ್ದರೂ, ಮಾಸ್ಕ್​ ಗಲ್ಲದ ಮೇಲೆ ಇತ್ತು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​ ಕಡ್ಡಾಯ ಎಂದು ನಿಯಮವೇ ಇದೆ. ಹಾಗಿರುವಾಗ ಆಂಬುಲೆನ್ಸ್​ನಲ್ಲಿ ಕೊರೊನಾ ರೋಗಿಯನ್ನು ಕರೆದುಕೊಂಡು ಹೋಗುವಾಗ, ಅದನ್ನು ನಿಲ್ಲಿಸಿ ಕೆಳಗಳಿದಿದ್ದೇ ನಿಯಮ ಉಲ್ಲಂಘನೆ. ಅದರಲ್ಲೂ ಮಾಸ್ಕ್​ ಧರಿಸಿದೆ ಇರುವುದು ಎಳ್ಳಷ್ಟೂ ಸರಿಯಲ್ಲ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ನೀವು ಕೊರೊನಾ ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೀರಿ, ಆದರೂ ಮಾಸ್ಕ್ ಕೂಡ ಸರಿಯಾಗಿ ಧರಿಸಿಲ್ಲವಲ್ಲ ಎಂದು ವಿಡಿಯೋ ಮಾಡುತ್ತಿದ್ದವರು ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ಈ ಆರೋಗ್ಯ ಕಾರ್ಯಕರ್ತ, ಕೊರೊನಾ ಇರುವುದು ನನಗಲ್ಲ.. ಅವನಿಗೆ. ನಾನು ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೇನೆ ಅಷ್ಟೇ. ನಾನು ಜ್ಯೂಸ್ ಕುಡಿಯಲು ಬಿಡಿ ಎಂದು ಕಟುವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ವಿಡಿಯೋ ಮಾಡುತ್ತಿದ್ದಾರೆ ಎಂದು ಗೊತ್ತಾದ ತಕ್ಷಣ ಮತ್ತೆ ಮಾಸ್ಕ್​ ಧರಿಸಿದ್ದಾರೆ.

ಸದ್ಯ ದೇಶದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರಿಸುತ್ತಿದ್ದು, ದಿನವೊಂದಕ್ಕೆ ಲಕ್ಷದಷ್ಟು ಪ್ರಕರಣಗಳು ದಾಖಲಾಗುತ್ತಿವೆ. ಅದರಲ್ಲಿ ಶೇ.84ರಷ್ಟು ಪಾಲು 10 ರಾಜ್ಯಗಳದ್ದು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಈ 10 ರಾಷ್ಟ್ರಗಳ ಪೈಕಿ ಮಧ್ಯಪ್ರದೇಶವೂ ಒಂದು. ಇಂದು ಒಂದೇ ದಿನ ಭಾರತದಲ್ಲಿ 1,31,968 ಸೋಂಕಿನ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: Karnataka Bus Strike Live: ಸಾರಿಗೆ ನೌಕರರ ಮುಷ್ಕರಕ್ಕೆ ಮೂರನೇ ದಿನ.. ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ ಸಿಬ್ಬಂದಿ

ಮಾರ್ಸ್​ ಪರ್ಸಿವರೆನ್ಸ್​ ರೋವರ್​ ಕಳುಹಿಸಿದೆ ನೋಡಿ.. ಚೊಚ್ಚಲ ಬಾಟ್​ ಸೆಲ್ಫಿ!

Published On - 2:56 pm, Fri, 9 April 21

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ