AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾದ ಜಾಜ್‌ಪುರ್ ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಮಗು ಸಾವು; ಅನ್ನ, ಉಪ್ಪು ಮತ್ತು ನೀರು ಸೇವಿಸಿಯೇ ಬದುಕುತ್ತಿದೆ ಕುಟುಂಬ

ಅಸಹಾಯಕ ಕುಟುಂಬ ನೆರವಿಗಾಗಿ ಮನೆ ಮನೆಗೆ ಅಲೆದಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ದಿನಗೂಲಿ ಕಾರ್ಮಿಕ ಬಂಕು ಪಡಿತರ ಚೀಟಿ ಹೊಂದಿದ್ದರೂ ಪಡಿತರದಿಂದ ವಂಚಿತರಾಗಿದ್ದಾರೆ.

ಒಡಿಶಾದ ಜಾಜ್‌ಪುರ್ ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಮಗು ಸಾವು; ಅನ್ನ, ಉಪ್ಪು ಮತ್ತು ನೀರು ಸೇವಿಸಿಯೇ ಬದುಕುತ್ತಿದೆ ಕುಟುಂಬ
ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಗು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Mar 24, 2023 | 10:36 PM

Share

ಮುಖ್ಯಾಂಶಗಳು

  • ಒಡಿಶಾದ ಜಾಜ್‌ಪುರ ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಮಗು ಸಾವಿಗೀಡಾಗಿದೆ
  • ಜಾಜ್‌ಪುರ ಜಿಲ್ಲೆಯ ದನಗಡಿ ಬ್ಲಾಕ್‌ನ ರಣಗುಂಡಿ ಪಂಚಾಯತ್‌ನ ಘಾಟಿಶಾಹಿ ಗ್ರಾಮದಲ್ಲಿ ಈ ಘಟನೆ ನಡೆದಿದೆ
  • ನೀರು, ಅನ್ನ, ಉಪ್ಪನ್ನು ತಿಂದು ಕುಟುಂಬ ಬದುಕುತ್ತಿದೆ

ಅಪೌಷ್ಟಿಕತೆಯಿಂದ (Malnutrition) ಮಗು ಸಾವಿಗೀಡಾಗಿರುವ ಪ್ರಕರಣ ಒಡಿಶಾದ (Odisha) ಜಾಜ್‌ಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಇದೇ ಕುಟುಂಬದಲ್ಲಿಮಗುವಿನ ಸಹೋದರಿ ಕೂಡ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ಮಗುವಿನ ಅಮ್ಮ ಹೇಳಿದ್ದಾಳೆ.ಈ ಬಾಲಕಿಗೆ ಸ್ವಂತವಾಗಿ ನಡೆಯಲು ಮತ್ತು ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಜಾಜ್‌ಪುರ ಜಿಲ್ಲೆಯ ದನಗಡಿ ಬ್ಲಾಕ್‌ನ ರಣಗುಂಡಿ ಪಂಚಾಯತ್‌ನ ಘಾಟಿಶಾಹಿ ಗ್ರಾಮದಲ್ಲಿ ಈ ಘಟನೆ ವರದಿ ಆಗಿದೆ. ಅಪೌಷ್ಟಿಕತೆಯಿಂದ ಮೃತಪಟ್ಟ ಮಗುವಿನ ತಾಯಿ ಹೇಳುವಂತೆ, ಮಗಳ ಸ್ಥಿತಿಯೂ ಹದಗೆಟ್ಟಿದೆ. ಸ್ವಂತವಾಗಿ ನಡೆಯಲು ಮತ್ತು ಕುಳಿತುಕೊಳ್ಳಲು ಸಾಧ್ಯವಾಗದೆ ಆಕೆ ಹಾಸಿಗೆ ಹಿಡಿದಿದ್ದಾಳೆ. ಮೂಲಗಳ ಪ್ರಕಾರ, ಬಂಕು ಹೆಂಬ್ರಾಮ್ ತನ್ನ ಪತ್ನಿ ತುಳಸಿ ಹೆಂಬ್ರಾಮ್  ಒಂಬತ್ತು ಮಕ್ಕಳೊಂದಿಗೆ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಇವರ ಇಬ್ಬರು ಪುತ್ರರಲ್ಲಿ ಒಬ್ಬ ಅಪೌಷ್ಟಿಕತೆಯಿಂದ ಕೆಲವು ದಿನಗಳ ಹಿಂದೆ ಸಾವಿಗೀಡಾಗಿದ್ದ. ಇದೀಗ ಅವರ ಮಗಳ ಸ್ಥಿತಿ ಗಂಭೀರವಾಗಿದೆ ಎಂದು ಜಾಗರಣ್ ಡಾಟ್ ಕಾಮ್ ವರದಿ ಮಾಡಿದೆ.

ಇದಲ್ಲದೇ ಬಂಕುವಿನ ಇತರ ಮಕ್ಕಳಲ್ಲಿಯೂ ಅಪೌಷ್ಟಿಕತೆ ಕಾಡುತ್ತಿದೆ. ಅಸಹಾಯಕ ಕುಟುಂಬ ನೆರವಿಗಾಗಿ ಮನೆ ಮನೆಗೆ ಅಲೆದಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ದಿನಗೂಲಿ ಕಾರ್ಮಿಕ ಬಂಕು ಪಡಿತರ ಚೀಟಿ ಹೊಂದಿದ್ದರೂ ಪಡಿತರದಿಂದ ವಂಚಿತರಾಗಿದ್ದಾರೆ. ನೀರು, ಅನ್ನ, ಉಪ್ಪನ್ನು ತಿಂದು ಕುಟುಂಬ ಬದುಕುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಮಾಧ್ಯಮಗಳಿಂದ ಈ ಸುದ್ದಿಯ ಬಗ್ಗೆ ಮಾಹಿತಿ ಪಡೆದ ನಂತರ, ಡಿಸಿಪಿಒ ತಮ್ಮ ತಂಡದೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿರುವರನ್ನು ಸುಕಿಂದಾಗೆ ಸ್ಥಳಾಂತರಿಸಲಾಗಿದೆ.

ಇಲ್ಲಿ ಪೌಷ್ಟಿಕಾಂಶ ಪುನರ್ವಸತಿ ಕೇಂದ್ರವನ್ನು (ಎನ್‌ಆರ್‌ಸಿ) ಇದೆ ಅಂತಾರೆ ಜಾಜ್‌ಪುರದ ಮುಖ್ಯ ಜಿಲ್ಲಾ ವೈದ್ಯಾಧಿಕಾರಿ (ಸಿಡಿಎಂಒ), ಶಿವಶಿಶ್ ಮಹಾರಾಣಾ. ಅಲ್ಲಿ ಕೌನ್ಸಿಲರ್, ವೈದ್ಯರು, ಮಕ್ಕಳ ವೈದ್ಯರು ಇದ್ದಾರೆ. ಅವರು ಈಗ ಮಗುವನ್ನು ನೋಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಕ್ಷಯರೋಗ ಸೋಲುತ್ತದೆ, ಭಾರತ ಮತ್ತು ಜಗತ್ತು ಗೆಲ್ಲುತ್ತದೆ: ವಿಶ್ವ ಟಿಬಿ ಶೃಂಗಸಭೆಯಲ್ಲಿ ನರೇಂದ್ರ ಮೋದಿ

ಮತ್ತೊಂದು ಮಗುವನ್ನು ಈ ಹಿಂದೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಸಮಸ್ಯೆಯೆಂದರೆ ಜನರು ಅಪೌಷ್ಟಿಕತೆಯ ಬಗ್ಗೆ ತಿಳಿದಿರುವುದಿಲ್ಲ ಮತ್ತು ಆಸ್ಪತ್ರೆಗೆ ಬರಲು ಬಯಸುವುದಿಲ್ಲ. ಆದ್ದರಿಂದ ಶೀಘ್ರದಲ್ಲಿಯೇ ಜನಜಾಗೃತಿ ಕಾರ್ಯಕ್ರಮದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ