ಒಡಿಶಾದ ಜಾಜ್‌ಪುರ್ ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಮಗು ಸಾವು; ಅನ್ನ, ಉಪ್ಪು ಮತ್ತು ನೀರು ಸೇವಿಸಿಯೇ ಬದುಕುತ್ತಿದೆ ಕುಟುಂಬ

ಅಸಹಾಯಕ ಕುಟುಂಬ ನೆರವಿಗಾಗಿ ಮನೆ ಮನೆಗೆ ಅಲೆದಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ದಿನಗೂಲಿ ಕಾರ್ಮಿಕ ಬಂಕು ಪಡಿತರ ಚೀಟಿ ಹೊಂದಿದ್ದರೂ ಪಡಿತರದಿಂದ ವಂಚಿತರಾಗಿದ್ದಾರೆ.

ಒಡಿಶಾದ ಜಾಜ್‌ಪುರ್ ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಮಗು ಸಾವು; ಅನ್ನ, ಉಪ್ಪು ಮತ್ತು ನೀರು ಸೇವಿಸಿಯೇ ಬದುಕುತ್ತಿದೆ ಕುಟುಂಬ
ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಗು
ರಶ್ಮಿ ಕಲ್ಲಕಟ್ಟ

Updated on: Mar 24, 2023 | 10:36 PM

ಅಪೌಷ್ಟಿಕತೆಯಿಂದ (Malnutrition) ಮಗು ಸಾವಿಗೀಡಾಗಿರುವ ಪ್ರಕರಣ ಒಡಿಶಾದ (Odisha) ಜಾಜ್‌ಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಇದೇ ಕುಟುಂಬದಲ್ಲಿಮಗುವಿನ ಸಹೋದರಿ ಕೂಡ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ಮಗುವಿನ ಅಮ್ಮ ಹೇಳಿದ್ದಾಳೆ.ಈ ಬಾಲಕಿಗೆ ಸ್ವಂತವಾಗಿ ನಡೆಯಲು ಮತ್ತು ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಜಾಜ್‌ಪುರ ಜಿಲ್ಲೆಯ ದನಗಡಿ ಬ್ಲಾಕ್‌ನ ರಣಗುಂಡಿ ಪಂಚಾಯತ್‌ನ ಘಾಟಿಶಾಹಿ ಗ್ರಾಮದಲ್ಲಿ ಈ ಘಟನೆ ವರದಿ ಆಗಿದೆ. ಅಪೌಷ್ಟಿಕತೆಯಿಂದ ಮೃತಪಟ್ಟ ಮಗುವಿನ ತಾಯಿ ಹೇಳುವಂತೆ, ಮಗಳ ಸ್ಥಿತಿಯೂ ಹದಗೆಟ್ಟಿದೆ. ಸ್ವಂತವಾಗಿ ನಡೆಯಲು ಮತ್ತು ಕುಳಿತುಕೊಳ್ಳಲು ಸಾಧ್ಯವಾಗದೆ ಆಕೆ ಹಾಸಿಗೆ ಹಿಡಿದಿದ್ದಾಳೆ. ಮೂಲಗಳ ಪ್ರಕಾರ, ಬಂಕು ಹೆಂಬ್ರಾಮ್ ತನ್ನ ಪತ್ನಿ ತುಳಸಿ ಹೆಂಬ್ರಾಮ್  ಒಂಬತ್ತು ಮಕ್ಕಳೊಂದಿಗೆ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಇವರ ಇಬ್ಬರು ಪುತ್ರರಲ್ಲಿ ಒಬ್ಬ ಅಪೌಷ್ಟಿಕತೆಯಿಂದ ಕೆಲವು ದಿನಗಳ ಹಿಂದೆ ಸಾವಿಗೀಡಾಗಿದ್ದ. ಇದೀಗ ಅವರ ಮಗಳ ಸ್ಥಿತಿ ಗಂಭೀರವಾಗಿದೆ ಎಂದು ಜಾಗರಣ್ ಡಾಟ್ ಕಾಮ್ ವರದಿ ಮಾಡಿದೆ.

ಇದಲ್ಲದೇ ಬಂಕುವಿನ ಇತರ ಮಕ್ಕಳಲ್ಲಿಯೂ ಅಪೌಷ್ಟಿಕತೆ ಕಾಡುತ್ತಿದೆ. ಅಸಹಾಯಕ ಕುಟುಂಬ ನೆರವಿಗಾಗಿ ಮನೆ ಮನೆಗೆ ಅಲೆದಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ದಿನಗೂಲಿ ಕಾರ್ಮಿಕ ಬಂಕು ಪಡಿತರ ಚೀಟಿ ಹೊಂದಿದ್ದರೂ ಪಡಿತರದಿಂದ ವಂಚಿತರಾಗಿದ್ದಾರೆ. ನೀರು, ಅನ್ನ, ಉಪ್ಪನ್ನು ತಿಂದು ಕುಟುಂಬ ಬದುಕುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ.


ಮಾಧ್ಯಮಗಳಿಂದ ಈ ಸುದ್ದಿಯ ಬಗ್ಗೆ ಮಾಹಿತಿ ಪಡೆದ ನಂತರ, ಡಿಸಿಪಿಒ ತಮ್ಮ ತಂಡದೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿರುವರನ್ನು ಸುಕಿಂದಾಗೆ ಸ್ಥಳಾಂತರಿಸಲಾಗಿದೆ.

ಇಲ್ಲಿ ಪೌಷ್ಟಿಕಾಂಶ ಪುನರ್ವಸತಿ ಕೇಂದ್ರವನ್ನು (ಎನ್‌ಆರ್‌ಸಿ) ಇದೆ ಅಂತಾರೆ ಜಾಜ್‌ಪುರದ ಮುಖ್ಯ ಜಿಲ್ಲಾ ವೈದ್ಯಾಧಿಕಾರಿ (ಸಿಡಿಎಂಒ), ಶಿವಶಿಶ್ ಮಹಾರಾಣಾ. ಅಲ್ಲಿ ಕೌನ್ಸಿಲರ್, ವೈದ್ಯರು, ಮಕ್ಕಳ ವೈದ್ಯರು ಇದ್ದಾರೆ. ಅವರು ಈಗ ಮಗುವನ್ನು ನೋಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಕ್ಷಯರೋಗ ಸೋಲುತ್ತದೆ, ಭಾರತ ಮತ್ತು ಜಗತ್ತು ಗೆಲ್ಲುತ್ತದೆ: ವಿಶ್ವ ಟಿಬಿ ಶೃಂಗಸಭೆಯಲ್ಲಿ ನರೇಂದ್ರ ಮೋದಿ

ಮತ್ತೊಂದು ಮಗುವನ್ನು ಈ ಹಿಂದೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಸಮಸ್ಯೆಯೆಂದರೆ ಜನರು ಅಪೌಷ್ಟಿಕತೆಯ ಬಗ್ಗೆ ತಿಳಿದಿರುವುದಿಲ್ಲ ಮತ್ತು ಆಸ್ಪತ್ರೆಗೆ ಬರಲು ಬಯಸುವುದಿಲ್ಲ. ಆದ್ದರಿಂದ ಶೀಘ್ರದಲ್ಲಿಯೇ ಜನಜಾಗೃತಿ ಕಾರ್ಯಕ್ರಮದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us