AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Alert: ಇನ್ನು ಐದು ದಿನ ದೇಶದ ಹಲವು ರಾಜ್ಯಗಳಲ್ಲಿ ಉಷ್ಣ ಅಲೆ, ಮಳೆಯೂ ಇರಲಿದೆ: ಹವಾಮಾನ ಇಲಾಖೆ

ಭಾರತದ ಈಶಾನ್ಯ ಮತ್ತು ದಕ್ಷಿಣ ಪರ್ಯಾಯ ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದಾಗಿಯೂ ಹವಾಮಾನ ತಜ್ಞರು ತಿಳಿಸಿದ್ದಾರೆ. 

Weather Alert: ಇನ್ನು ಐದು ದಿನ ದೇಶದ ಹಲವು ರಾಜ್ಯಗಳಲ್ಲಿ ಉಷ್ಣ ಅಲೆ, ಮಳೆಯೂ ಇರಲಿದೆ: ಹವಾಮಾನ ಇಲಾಖೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Mar 27, 2022 | 9:12 PM

Share

ಈಗಾಗಲೇ ಬೇಸಿಗೆ ಶುರುವಾಗಿದೆ. ಅದರಲ್ಲೂ ಉತ್ತರ ಭಾರತದಲ್ಲಂತೂ ತೀರ ಒಣಹವೆ. ಈ ಮಧ್ಯೆ ಮತ್ತೆ ಮುಂದಿನ ಐದು ದಿನಗಳವರೆಗೆ ದೇಶದ ಹಲವು ಭಾಗಗಳಲ್ಲಿ ಉಷ್ಣಅಲೆ (Heat Wave) ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯ ದೇಶದ ಉತ್ತರ ಮತ್ತು ಪಶ್ಚಿಮದ ಹಲವು ರಾಜ್ಯಗಳು ಪ್ರದೇಶಗಳಲ್ಲಿ ಬಿರುಬಿಸಿಲು ಶುರುವಾಗಿದ್ದು, ಸೌರಾಷ್ಟ್ರ-ಕಚ್​ ಸೇರಿ ಇನ್ನೂ ಅನೇಕ ಪ್ರದೇಶಗಳಲ್ಲಿ ಮಾರ್ಚ್​ 31ರವರೆಗೂ ಉಷ್ಣ ಗಾಳಿ ಇರಲಿದೆ ಎಂದು ಐಎಂಡಿ (IMD) ತಿಳಿಸಿದೆ. 

ದೆಹಲಿಯಲ್ಲಿ ಮಾರ್ಚ್​ 28ರಂದು ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್​ಗೆ ತಲುಪಬಹುದು. ರಾಷ್ಟ್ರರಾಜಧಾನಿಯಲ್ಲಿ ಶನಿವಾರ ಕನಿಷ್ಠ ತಾಪಮಾನ 20.1 ಡಿಗ್ರಿ ಸೆಲ್ಸಿಯಸ್​ ಇತ್ತು. ಇದು ಈ ಸೀಸನ್​​ನ ಸರಾಸರಿ ತಾಪಮಾನಕ್ಕಿಂತ ಮೂರು ಪಟ್ಟು ಜಾಸ್ತಿ. ಹಾಗೇ, ಬೆಳಗ್ಗೆ 8.30ರ ವೇಳೆಗೆ ತೇವಾಂಶದ ಪ್ರಮಾಣ ಶೇ.56ರಷ್ಟಿತ್ತು ಎಂದೂ ಹವಾಮಾನ ಇಲಾಖೆ ಮಾಹಿತಿ ನೀಡಿದೆ.  ಮಾರ್ಚ್​ 31ರವರೆಗೆ ಜಮ್ಮು-ಕಾಶ್ಮೀರ, ಉತ್ತರಾಖಂಡ್​, ರಾಜಸ್ಥಾನ, ಗುಜರಾತ್​, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಪಂಜಾಬ್​ ಮತ್ತು ಹರ್ಯಾಣದ ದಕ್ಷಿಣ ಭಾಗಗಳು ಸೇರಿ ಹಲವೆಡೆ ಉಷ್ಣ ಅಲೆ ಇರಲಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಐಎಂಡಿ ಎಚ್ಚರಿಕೆ ನೀಡಿದೆ.

ಮಳೆ ಮುನ್ಸೂಚನೆ

ಈ ಮಧ್ಯೆ ಭಾರತದ ಈಶಾನ್ಯ ಮತ್ತು ದಕ್ಷಿಣ ಪರ್ಯಾಯ ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದಾಗಿಯೂ ಹವಾಮಾನ ತಜ್ಞರು ತಿಳಿಸಿದ್ದಾರೆ.  ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್​, ಮಣಿಪುರ, ಮಿಜೋರಾಂ, ತ್ರಿಪುರ,  ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿ ಹಲವೆಡೆ ಚದುರಿದ ಮಳೆಯಾಗಬಹುದು. ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಜೋರಾದ ಮಳೆಯೂ ಬರಬಹುದು ಎಂದೂ ಹೇಳಿದೆ.

ಇದನ್ನೂ ಓದಿ: Nitish Kumar ಬಿಹಾರ ಸಿಎಂ ನಿತೀಶ್ ಕುಮಾರ್ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿ ಪೊಲೀಸರ ವಶಕ್ಕೆ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?