AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Alert: ಇನ್ನು ಐದು ದಿನ ದೇಶದ ಹಲವು ರಾಜ್ಯಗಳಲ್ಲಿ ಉಷ್ಣ ಅಲೆ, ಮಳೆಯೂ ಇರಲಿದೆ: ಹವಾಮಾನ ಇಲಾಖೆ

ಭಾರತದ ಈಶಾನ್ಯ ಮತ್ತು ದಕ್ಷಿಣ ಪರ್ಯಾಯ ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದಾಗಿಯೂ ಹವಾಮಾನ ತಜ್ಞರು ತಿಳಿಸಿದ್ದಾರೆ. 

Weather Alert: ಇನ್ನು ಐದು ದಿನ ದೇಶದ ಹಲವು ರಾಜ್ಯಗಳಲ್ಲಿ ಉಷ್ಣ ಅಲೆ, ಮಳೆಯೂ ಇರಲಿದೆ: ಹವಾಮಾನ ಇಲಾಖೆ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Mar 27, 2022 | 9:12 PM

Share

ಈಗಾಗಲೇ ಬೇಸಿಗೆ ಶುರುವಾಗಿದೆ. ಅದರಲ್ಲೂ ಉತ್ತರ ಭಾರತದಲ್ಲಂತೂ ತೀರ ಒಣಹವೆ. ಈ ಮಧ್ಯೆ ಮತ್ತೆ ಮುಂದಿನ ಐದು ದಿನಗಳವರೆಗೆ ದೇಶದ ಹಲವು ಭಾಗಗಳಲ್ಲಿ ಉಷ್ಣಅಲೆ (Heat Wave) ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯ ದೇಶದ ಉತ್ತರ ಮತ್ತು ಪಶ್ಚಿಮದ ಹಲವು ರಾಜ್ಯಗಳು ಪ್ರದೇಶಗಳಲ್ಲಿ ಬಿರುಬಿಸಿಲು ಶುರುವಾಗಿದ್ದು, ಸೌರಾಷ್ಟ್ರ-ಕಚ್​ ಸೇರಿ ಇನ್ನೂ ಅನೇಕ ಪ್ರದೇಶಗಳಲ್ಲಿ ಮಾರ್ಚ್​ 31ರವರೆಗೂ ಉಷ್ಣ ಗಾಳಿ ಇರಲಿದೆ ಎಂದು ಐಎಂಡಿ (IMD) ತಿಳಿಸಿದೆ. 

ದೆಹಲಿಯಲ್ಲಿ ಮಾರ್ಚ್​ 28ರಂದು ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್​ಗೆ ತಲುಪಬಹುದು. ರಾಷ್ಟ್ರರಾಜಧಾನಿಯಲ್ಲಿ ಶನಿವಾರ ಕನಿಷ್ಠ ತಾಪಮಾನ 20.1 ಡಿಗ್ರಿ ಸೆಲ್ಸಿಯಸ್​ ಇತ್ತು. ಇದು ಈ ಸೀಸನ್​​ನ ಸರಾಸರಿ ತಾಪಮಾನಕ್ಕಿಂತ ಮೂರು ಪಟ್ಟು ಜಾಸ್ತಿ. ಹಾಗೇ, ಬೆಳಗ್ಗೆ 8.30ರ ವೇಳೆಗೆ ತೇವಾಂಶದ ಪ್ರಮಾಣ ಶೇ.56ರಷ್ಟಿತ್ತು ಎಂದೂ ಹವಾಮಾನ ಇಲಾಖೆ ಮಾಹಿತಿ ನೀಡಿದೆ.  ಮಾರ್ಚ್​ 31ರವರೆಗೆ ಜಮ್ಮು-ಕಾಶ್ಮೀರ, ಉತ್ತರಾಖಂಡ್​, ರಾಜಸ್ಥಾನ, ಗುಜರಾತ್​, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಪಂಜಾಬ್​ ಮತ್ತು ಹರ್ಯಾಣದ ದಕ್ಷಿಣ ಭಾಗಗಳು ಸೇರಿ ಹಲವೆಡೆ ಉಷ್ಣ ಅಲೆ ಇರಲಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಐಎಂಡಿ ಎಚ್ಚರಿಕೆ ನೀಡಿದೆ.

ಮಳೆ ಮುನ್ಸೂಚನೆ

ಈ ಮಧ್ಯೆ ಭಾರತದ ಈಶಾನ್ಯ ಮತ್ತು ದಕ್ಷಿಣ ಪರ್ಯಾಯ ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದಾಗಿಯೂ ಹವಾಮಾನ ತಜ್ಞರು ತಿಳಿಸಿದ್ದಾರೆ.  ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್​, ಮಣಿಪುರ, ಮಿಜೋರಾಂ, ತ್ರಿಪುರ,  ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿ ಹಲವೆಡೆ ಚದುರಿದ ಮಳೆಯಾಗಬಹುದು. ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಜೋರಾದ ಮಳೆಯೂ ಬರಬಹುದು ಎಂದೂ ಹೇಳಿದೆ.

ಇದನ್ನೂ ಓದಿ: Nitish Kumar ಬಿಹಾರ ಸಿಎಂ ನಿತೀಶ್ ಕುಮಾರ್ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿ ಪೊಲೀಸರ ವಶಕ್ಕೆ

ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್
ಅಭಿವೃದ್ಧಿ ವಿಷಯದಲ್ಲಿ ಸಿದ್ದರಾಮಯ್ಯ ಯಾವತ್ತೂ ಚರ್ಚೆ ಮಾಡಲ್ಲ: ಅಶೋಕ
ಅಭಿವೃದ್ಧಿ ವಿಷಯದಲ್ಲಿ ಸಿದ್ದರಾಮಯ್ಯ ಯಾವತ್ತೂ ಚರ್ಚೆ ಮಾಡಲ್ಲ: ಅಶೋಕ