AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Alert: ಇನ್ನು ಐದು ದಿನ ದೇಶದ ಹಲವು ರಾಜ್ಯಗಳಲ್ಲಿ ಉಷ್ಣ ಅಲೆ, ಮಳೆಯೂ ಇರಲಿದೆ: ಹವಾಮಾನ ಇಲಾಖೆ

ಭಾರತದ ಈಶಾನ್ಯ ಮತ್ತು ದಕ್ಷಿಣ ಪರ್ಯಾಯ ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದಾಗಿಯೂ ಹವಾಮಾನ ತಜ್ಞರು ತಿಳಿಸಿದ್ದಾರೆ. 

Weather Alert: ಇನ್ನು ಐದು ದಿನ ದೇಶದ ಹಲವು ರಾಜ್ಯಗಳಲ್ಲಿ ಉಷ್ಣ ಅಲೆ, ಮಳೆಯೂ ಇರಲಿದೆ: ಹವಾಮಾನ ಇಲಾಖೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Mar 27, 2022 | 9:12 PM

Share

ಈಗಾಗಲೇ ಬೇಸಿಗೆ ಶುರುವಾಗಿದೆ. ಅದರಲ್ಲೂ ಉತ್ತರ ಭಾರತದಲ್ಲಂತೂ ತೀರ ಒಣಹವೆ. ಈ ಮಧ್ಯೆ ಮತ್ತೆ ಮುಂದಿನ ಐದು ದಿನಗಳವರೆಗೆ ದೇಶದ ಹಲವು ಭಾಗಗಳಲ್ಲಿ ಉಷ್ಣಅಲೆ (Heat Wave) ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯ ದೇಶದ ಉತ್ತರ ಮತ್ತು ಪಶ್ಚಿಮದ ಹಲವು ರಾಜ್ಯಗಳು ಪ್ರದೇಶಗಳಲ್ಲಿ ಬಿರುಬಿಸಿಲು ಶುರುವಾಗಿದ್ದು, ಸೌರಾಷ್ಟ್ರ-ಕಚ್​ ಸೇರಿ ಇನ್ನೂ ಅನೇಕ ಪ್ರದೇಶಗಳಲ್ಲಿ ಮಾರ್ಚ್​ 31ರವರೆಗೂ ಉಷ್ಣ ಗಾಳಿ ಇರಲಿದೆ ಎಂದು ಐಎಂಡಿ (IMD) ತಿಳಿಸಿದೆ. 

ದೆಹಲಿಯಲ್ಲಿ ಮಾರ್ಚ್​ 28ರಂದು ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್​ಗೆ ತಲುಪಬಹುದು. ರಾಷ್ಟ್ರರಾಜಧಾನಿಯಲ್ಲಿ ಶನಿವಾರ ಕನಿಷ್ಠ ತಾಪಮಾನ 20.1 ಡಿಗ್ರಿ ಸೆಲ್ಸಿಯಸ್​ ಇತ್ತು. ಇದು ಈ ಸೀಸನ್​​ನ ಸರಾಸರಿ ತಾಪಮಾನಕ್ಕಿಂತ ಮೂರು ಪಟ್ಟು ಜಾಸ್ತಿ. ಹಾಗೇ, ಬೆಳಗ್ಗೆ 8.30ರ ವೇಳೆಗೆ ತೇವಾಂಶದ ಪ್ರಮಾಣ ಶೇ.56ರಷ್ಟಿತ್ತು ಎಂದೂ ಹವಾಮಾನ ಇಲಾಖೆ ಮಾಹಿತಿ ನೀಡಿದೆ.  ಮಾರ್ಚ್​ 31ರವರೆಗೆ ಜಮ್ಮು-ಕಾಶ್ಮೀರ, ಉತ್ತರಾಖಂಡ್​, ರಾಜಸ್ಥಾನ, ಗುಜರಾತ್​, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಪಂಜಾಬ್​ ಮತ್ತು ಹರ್ಯಾಣದ ದಕ್ಷಿಣ ಭಾಗಗಳು ಸೇರಿ ಹಲವೆಡೆ ಉಷ್ಣ ಅಲೆ ಇರಲಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಐಎಂಡಿ ಎಚ್ಚರಿಕೆ ನೀಡಿದೆ.

ಮಳೆ ಮುನ್ಸೂಚನೆ

ಈ ಮಧ್ಯೆ ಭಾರತದ ಈಶಾನ್ಯ ಮತ್ತು ದಕ್ಷಿಣ ಪರ್ಯಾಯ ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದಾಗಿಯೂ ಹವಾಮಾನ ತಜ್ಞರು ತಿಳಿಸಿದ್ದಾರೆ.  ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್​, ಮಣಿಪುರ, ಮಿಜೋರಾಂ, ತ್ರಿಪುರ,  ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿ ಹಲವೆಡೆ ಚದುರಿದ ಮಳೆಯಾಗಬಹುದು. ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಜೋರಾದ ಮಳೆಯೂ ಬರಬಹುದು ಎಂದೂ ಹೇಳಿದೆ.

ಇದನ್ನೂ ಓದಿ: Nitish Kumar ಬಿಹಾರ ಸಿಎಂ ನಿತೀಶ್ ಕುಮಾರ್ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿ ಪೊಲೀಸರ ವಶಕ್ಕೆ

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ