AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲಿಂದ ದೂರವಿರಿ; ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆ

ಬೇಸಿಗೆ ಆರಂಭವಾಗುತ್ತಿದ್ದಂತೆ ದೇಶಾದ್ಯಂತ ತಾಪಮಾನ ಏರಿಕೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಛತ್ತೀಸ್‌ಗಢ, ಒಡಿಶಾ ಮತ್ತು ಪೂರ್ವ ಮಧ್ಯಪ್ರದೇಶದ ಪ್ರತ್ಯೇಕ ಪ್ರದೇಶಗಳಿಗೆ ಹವಾಮಾನ ಇಲಾಖೆ ಉಷ್ಣ ಅಲೆಯ ಎಚ್ಚರಿಕೆ ನೀಡಿದೆ. ಇದರ ಜೊತೆಗೆ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ ಮತ್ತು ಗುಜರಾತ್, ಸೌರಾಷ್ಟ್ರ ಮತ್ತು ಕಚ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಬಿಸಿ ಗಾಳಿ ಮುಂದುವರಿಯುವ ನಿರೀಕ್ಷೆಯಿದೆ. ರಾಯಲಸೀಮಾ, ಕರಾವಳಿ ಆಂಧ್ರಪ್ರದೇಶ ಮತ್ತು ಕರಾವಳಿ ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಸೇರಿದಂತೆ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಇದೇ ರೀತಿಯ ಪರಿಸ್ಥಿತಿಗಳು ಕಂಡುಬರುವ ಸಾಧ್ಯತೆಯಿದೆ.

ಬಿಸಿಲಿಂದ ದೂರವಿರಿ; ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆ
HeatwaveImage Credit source: PTI
ಸುಷ್ಮಾ ಚಕ್ರೆ
|

Updated on: Apr 13, 2026 | 6:07 PM

Share

ನವದೆಹಲಿ, ಏಪ್ರಿಲ್ 13: ಭಾರತದಾದ್ಯಂತ ಉಷ್ಣ ಅಲೆಗಳ (Heatwave) ಪರಿಸ್ಥಿತಿ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ. ಭಾರತದಾದ್ಯಂತ ತಾಪಮಾನವು ಏರುತ್ತಲೇ ಇರುವುದರಿಂದ ಈ ವಾರ ಶಾಖ ಹೆಚ್ಚಾಗುವ ಸಾಧ್ಯತೆಯಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹೆಚ್ಚಿನ ಪ್ರದೇಶಗಳಲ್ಲಿ ಬೇಸಿಗೆಯ ಶಾಖ ಹೆಚ್ಚಾಗಲಿದೆ. ಈ ಬಗ್ಗೆ ಇಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದ್ದು, ಏಪ್ರಿಲ್ 17ರ ವೇಳೆಗೆ ದೆಹಲಿಯು ಗರಿಷ್ಠ 41 ಡಿಗ್ರಿ ಸೆಲ್ಸಿಯಸ್ ಅನ್ನು ಮುಟ್ಟಲಿದೆ.

ಏಪ್ರಿಲ್ 18ರವರೆಗೆ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನ 4ರಿಂದ 6 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ. ಮಧ್ಯಪ್ರದೇಶ, ವಿದರ್ಭ ಮತ್ತು ಛತ್ತೀಸ್‌ಗಢ ಸೇರಿದಂತೆ ಮಧ್ಯ ಭಾಗಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ 3ರಿಂದ 5 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ. ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿಯೂ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ: ಏನೇನು ಮುನ್ನೆಚ್ಚರಿಕೆ ವಹಿಸಬೇಕು? ನೀವು ಮಾಡಬೇಕಾದ್ದಿಷ್ಟು…

ಒಡಿಶಾ, ಗುಜರಾತ್ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿ ವಾತಾವರಣ ಇರಲಿದೆ. ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಇದೇ ರೀತಿಯ ಪರಿಸ್ಥಿತಿಗಳು ಕಂಡುಬರುವ ನಿರೀಕ್ಷೆಯಿದೆ. ಈಶಾನ್ಯದಲ್ಲಿ ಮಳೆ, ಗುಡುಗು ಸಹಿತ ಮಳೆಯಾಗಲಿದೆ. ಈಶಾನ್ಯ ಭಾರತದಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮುಂಬರುವ ದಿನಗಳಲ್ಲಿ ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ (ಗಂಟೆಗೆ 30–50 ಕಿ.ಮೀ) ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಈ ವಾರದ ಕೆಲವು ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿಯೂ ಸಹ ಕೆಲವು ದಿನಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: Karnataka Weather: ಮುಂದಿನ 2 ದಿನಗಳ ಕಾಲ ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ, 6 ಜಿಲ್ಲೆಗಳಲ್ಲಿ ಉಷ್ಣ ಅಲೆ

ಕರ್ನಾಟಕ, ಕೇರಳ ಮತ್ತು ಕರಾವಳಿ ಆಂಧ್ರಪ್ರದೇಶ ಸೇರಿದಂತೆ ದಕ್ಷಿಣ ರಾಜ್ಯಗಳ ಕೆಲವು ಸ್ಥಳಗಳಲ್ಲಿ ಭಾರೀ ಉಷ್ಣ ಅಲೆಯ ನಿರೀಕ್ಷೆಯಿದೆ. ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ