AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heatwave: ಏಪ್ರಿಲ್ ಆರಂಭದಲ್ಲೇ ದೆಹಲಿಯಲ್ಲಿ ವಿಪರೀತ ಸೆಖೆ; 72 ವರ್ಷದ ದಾಖಲೆ ಮುರಿದ ಗರಿಷ್ಠ ತಾಪಮಾನ

72 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಏಪ್ರಿಲ್ ಮೊದಲಾರ್ಧದಲ್ಲಿ ದೆಹಲಿಯಲ್ಲಿ ಇಷ್ಟು ಹೆಚ್ಚಿನ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Heatwave: ಏಪ್ರಿಲ್ ಆರಂಭದಲ್ಲೇ ದೆಹಲಿಯಲ್ಲಿ ವಿಪರೀತ ಸೆಖೆ; 72 ವರ್ಷದ ದಾಖಲೆ ಮುರಿದ ಗರಿಷ್ಠ ತಾಪಮಾನ
ಬಿಸಿಗಾಳಿ
TV9 Web
| Edited By: |

Updated on: Apr 12, 2022 | 1:58 PM

Share

ನವದೆಹಲಿ: ದೆಹಲಿಯಲ್ಲಿ ಸತತ ಆರನೇ ದಿನವೂ ಬಿಸಿಗಾಳಿಗೆ ಜನರು ತತ್ತರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದ್ದು, ಇಂದಿನ ಗರಿಷ್ಠ ತಾಪಮಾನವು 42 ಡಿಗ್ರಿ ಸೆಲ್ಸಿಯಸ್‌ಗೆ ಏರುವ ನಿರೀಕ್ಷೆಯಿದೆ. ದೆಹಲಿಯಲ್ಲಿ ಕನಿಷ್ಠ ತಾಪಮಾನವು 22.5 ಡಿಗ್ರಿ ಸೆಲ್ಸಿಯಸ್‌ ಆಗಿದ್ದು, ಇಂದು ಮುಂಜಾನೆಯೇ ದೆಹಲಿಯ ಜನರಿಗೆ ಸೆಖೆಯ ಅನುಭವ ಉಂಟಾಯಿತು. ದೆಹಲಿಯ ಬಿಸಿಗಾಳಿ (Heatwave in Delhi) ಕಳೆದ 72 ವರ್ಷಗಳ ದಾಖಲೆಯನ್ನು ಮೀರಿದೆ. ದೆಹಲಿಯಲ್ಲಿ ಇಂದು ಕನಿಷ್ಠ ತಾಪಮಾನ 22.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೇರೆಲ್ಲ ವರ್ಷಗಳಲ್ಲಿ ಈ ಅವಧಿಯಲ್ಲಿ ಉಂಟಾಗುವ ತಾಪಮಾನಕ್ಕಿಂತಲೂ ಈ ಬಾರಿ ಬಿಸಿಗಾಳಿ ಹೆಚ್ಚಾಗಿದೆ.

ಭಾರತದ ಹವಾಮಾನ ಇಲಾಖೆ (IMD) ಪ್ರಕಾರ, ಉಸಿರುಗಟ್ಟಿಸುವ ಶಾಖದ ತೀವ್ರತೆಯ ಭಾರವನ್ನು ಹೊತ್ತಿರುವ ದೆಹಲಿಯು ಸೋಮವಾರ 42.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನವನ್ನು ದಾಖಲಿಸಿದೆ. ಇದು ಐದು ವರ್ಷಗಳಲ್ಲಿ ಏಪ್ರಿಲ್‌ನಲ್ಲಿ ಉಂಟಾದ ಅತ್ಯಧಿಕ ತಾಪಮಾನವಾಗಿದೆ. 72 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಏಪ್ರಿಲ್ ಮೊದಲಾರ್ಧದಲ್ಲಿ ದೆಹಲಿಯಲ್ಲಿ ಇಷ್ಟು ಹೆಚ್ಚಿನ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ವರ್ಷದ ಏಪ್ರಿಲ್‌ನಲ್ಲಿ ಇದುವರೆಗೆ ರಾಜಧಾನಿ ಐದು ಶಾಖದ ದಿನಗಳನ್ನು ದಾಖಲಿಸಿದೆ. ಈ ಹಿಂದೆ 2017ರಲ್ಲಿ ಏಪ್ರಿಲ್ ತಿಂಗಳಲ್ಲಿ ಇದೇ ರೀತಿಯ ಆರು ದಿನಗಳ ಕಾಲ ಬಿಸಿಗಾಳಿಯ ದಿನಗಳು ಉಂಟಾಗಿದ್ದವು. 2017ರ ಏಪ್ರಿಲ್ 21ರಂದು ರಾಜಧಾನಿ ದೆಹಲಿಯಲ್ಲಿ ಗರಿಷ್ಠ ತಾಪಮಾನ 43.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. 1941ರ ಏಪ್ರಿಲ್ 29ರಂದು ಏಪ್ರಿಲ್ ತಿಂಗಳ ಸಾರ್ವಕಾಲಿಕ ಗರಿಷ್ಠ ತಾಪಮಾನವು 45.6 ಡಿಗ್ರಿ ಸೆಲ್ಸಿಯಸ್ ಆಗಿತ್ತು.

ದೆಹಲಿಯಲ್ಲ ಬಿಸಿಗಾಳಿ ತೀವ್ರವಾಗುವುದರಿಂದ ಸೋಮವಾರ ಆರೆಂಜ್ ಅಲರ್ಟ್​ ಘೋಷಿಸಲಾಇತ್ತು. ಇಂದು ಹಳದಿ ಅಲರ್ಟ್​ ಘೋಷಿಸಲಾಗಿದ್ದು, ಬುಧವಾರ ಮತ್ತು ಗುರುವಾರ ಹಸಿರು ಅಲರ್ಟ್​ ಘೋಷಿಸಲಾಗಿದೆ. IMD ಪ್ರಕಾರ, ಶನಿವಾರದ ಗರಿಷ್ಠ ತಾಪಮಾನ 42.4 ಡಿಗ್ರಿ ಸೆಲ್ಸಿಯಸ್​​ನಷ್ಟಿತ್ತು. ಕಳೆದ 72 ವರ್ಷಗಳಲ್ಲಿ ಏಪ್ರಿಲ್ ಮೊದಲಾರ್ಧದಲ್ಲಿ 1951 ಮತ್ತು 2022 ರ ನಡುವೆ ದಾಖಲಾದ ಅತ್ಯಧಿಕವಾಗಿದೆ.

ಇದನ್ನೂ ಓದಿ: Watch ಕುಡಿಯುವ ನೀರಿಗೆ ಹಾಹಾಕಾರ; ಪ್ರಾಣ ಪಣಕ್ಕಿಟ್ಟು ಬಾವಿಯ ತಳದಿಂದ ನೀರು ತಂದ ಮಹಾರಾಷ್ಟ್ರದ ಮಹಿಳೆ

Karnataka Rain: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಚದುರಿದ ಮಳೆ; ಕೇರಳದಲ್ಲಿ ಹಳದಿ ಅಲರ್ಟ್​ ಘೋಷಣೆ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ