AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Water Crisis: ಇನ್ಮುಂದೆ ನೀರು ಪೋಲು ಮಾಡಿದ್ರೆ 2 ಸಾವಿರ ರೂ. ದಂಡ

ದೆಹಲಿಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ನೀರಿನ ಬಿಕ್ಕಟ್ಟು ಎದುರಾಗಿದೆ. ಹೀಗಾಗಿ ನೀರನ್ನು ಪೋಲು ಮಾಡಿದರೆ 2 ಸಾವಿರ ರೂ. ದಂಡ ವಿಧಿಸುವುದಾಗಿ ದೆಹಲಿ ಜಲ ಮಂಡಳಿ ಬುಧವಾರ ಹೇಳಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ನೀರಿನ ಬಿಕ್ಕಟ್ಟನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

Water Crisis: ಇನ್ಮುಂದೆ ನೀರು ಪೋಲು ಮಾಡಿದ್ರೆ 2 ಸಾವಿರ ರೂ. ದಂಡ
Image Credit source: India Today
ನಯನಾ ರಾಜೀವ್
|

Updated on: May 29, 2024 | 3:05 PM

Share

ನೀರು(Water) ಪೋಲು ಮಾಡಿದರೆ 2 ಸಾವಿರ ರೂ. ದಂಡ ವಿಧಿಸುವುದಾಗಿ ದೆಹಲಿ ಜಲ ಮಂಡಳಿ ಬುಧವಾರ ಹೇಳಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ನೀರಿನ ಬಿಕ್ಕಟ್ಟು(Water Crisis) ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ದೆಹಲಿಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ, ಕುಡಿಯಲು ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹುಲ್ಲುಹಾಸುಗಳು, ಮನೆಯ ಮುಂಭಾಗ ನೀರುಹಾಕುವುದು, ಹೋಸ್ಪೈಪ್ ಬಳಸಿ ಕಾರುಗಳು ಮತ್ತು ಇತರ ವಾಹನಗಳನ್ನು ತೊಳೆಯಲು ಅನುಮತಿ ಇರುವುದಿಲ್ಲ.

ನಿರ್ಮಾಣ ಅಥವಾ ವಾಣಿಜ್ಯ ಉದ್ದೇಶಗಳಿಗಾಗಿ ದೇಶೀಯ ನೀರನ್ನು ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ದೆಹಲಿಯಾದ್ಯಂತ 200 ತಂಡಗಳನ್ನು ನಿಯೋಜಿಸಲಾಗುತ್ತದೆ. ನಾಳೆ ಬೆಳಗ್ಗೆ 8 ಗಂಟೆಯಿಂದ ತಂಡಗಳನ್ನು ನಿಯೋಜಿಸಲಾಗುವುದು.

ನೀರು ಸರಬರಾಜು ಖಾತೆಯನ್ನು ನಿರ್ವಹಿಸುತ್ತಿರುವ ದೆಹಲಿ ಸಚಿವೆ ಅತಿಶಿ ಅವರು ದೆಹಲಿ ಜಲ ಮಂಡಳಿಯ ಸಿಇಒ ಎ ಅನ್ಬರಸು ಅವರಿಗೆ ನೀರಿನ ವ್ಯರ್ಥ ಪ್ರಕರಣಗಳನ್ನು ಮೇಲ್ವಿಚಾರಣೆ ಮಾಡಲು 200 ತಂಡಗಳನ್ನು ರಚಿಸುವಂತೆ ನಿರ್ದೇಶನಗಳನ್ನು ನೀಡಿದ್ದಾರೆ.

ಮತ್ತಷ್ಟು ಓದಿ: ಎಂಥಾ ಬಿಸಿಲು! ಚುನಾವಣಾ ರ‍್ಯಾಲಿಯಲ್ಲಿ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್ ಗಾಂಧಿ

ಈ ತಂಡವು ನಿರ್ಮಾಣ ಅಥವಾ ವಾಣಿಜ್ಯ ಸ್ಥಳಗಳಲ್ಲಿ ಯಾವುದೇ ಅಕ್ರಮ ನೀರಿನ ಸಂಪರ್ಕಗಳನ್ನು ಕಡಿತಗೊಳಿಸಬಹುದು. ದೆಹಲಿಯಲ್ಲಿ ನೀರು ವ್ಯರ್ಥವಾಗುವುದನ್ನು ತಡೆಯುವಂತೆ ಜಲಮಂಡಳಿ ಸಿಇಒಗೆ ಜಲ ಸಚಿವ ಅತಿಶಿ ಸೂಚನೆ ನೀಡಿದ್ದಾರೆ. ಈಗ ನೀರು ಪೋಲು ಮಾಡುವುದನ್ನು ತಡೆಯಲು ಚಲನ್ ನಿಯಮ ಜಾರಿಗೆ ತರಲಾಗುವುದು ಎಂದು ಅತಿಶಿ ಮಂಗಳವಾರವೇ ಸೂಚಿಸಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ.

ಮುಂದಿನ ದಿನಗಳಲ್ಲಿ ದೆಹಲಿಯಲ್ಲಿ ಯಮುನಾ ನೀರು ಪೂರೈಕೆ ಸುಧಾರಿಸದಿದ್ದರೆ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಬಹುದು ಎಂದು ಅತಿಶಿ ಈಗಾಗಲೇ ಎಚ್ಚರಿಕೆ ನೀಡಿದ್ದರು . ದೆಹಲಿಯ ಹಲವು ಪ್ರದೇಶಗಳು ನೀರಿನ ಕೊರತೆಯಿಂದ ಬಳಲುತ್ತಿವೆ. ಜನತೆ ನೀರನ್ನು ಸಮಂಜಸವಾಗಿ ಬಳಸಬೇಕು ಎಂದು ಮನವಿ ಮಾಡಿದರು.

ಜನರು ಈ ಮನವಿಗೆ ಗಮನ ಕೊಡದಿದ್ದರೆ ಮುಂದಿನ ದಿನಗಳಲ್ಲಿ ಸರ್ಕಾರ ಅತಿಯಾದ ನೀರಿನ ಬಳಕೆಗಾಗಿ ಚಲನ್ ಜಾರಿ ಮಾಡಬೇಕಾಗಬಹುದು ಎಂದು ಸಚಿವರು ಎಚ್ಚರಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್