AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನಲ್ಲಿ ನಿರಂತರ ಮಳೆ; ಚೆಂಬರಂಬಕ್ಕಂ ಜಲಾಶಯದಿಂದ ನೀರು ಬಿಡುಗಡೆ

ಇಂದು ಚೆನ್ನೈ ನಗರದಲ್ಲಿ 6 ಸೆಮೀ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯ ಮಳೆಯಾಗಲಿದ್ದು, ಮೋಡಮುಸುಕಿದ ವಾತಾವರಣ ಇರಲಿದೆ. ಚೆನ್ನೈ ನಗರದ ರಸ್ತೆಗಳು ಈಗಾಗಲೇ ನೀರಿನಿಂದ ತುಂಬಿದ್ದು, ನಾಳೆ ತಮಿಳುನಾಡಿನ ಇತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಚೆನ್ನೈನಲ್ಲಿ ನಿರಂತರ ಮಳೆ; ಚೆಂಬರಂಬಕ್ಕಂ ಜಲಾಶಯದಿಂದ ನೀರು ಬಿಡುಗಡೆ
ಮಳೆ (ಪ್ರಾತಿನಿಧಿಕ ಚಿತ್ರ)
ರಶ್ಮಿ ಕಲ್ಲಕಟ್ಟ
| Edited By: |

Updated on: Jan 05, 2021 | 4:36 PM

Share

ಚೆನ್ನೈ: ನಗರದಲ್ಲಿ ಮಂಗಳವಾರ (ಜ.5) ಮುಂಜಾನೆಯಿಂದ ಭಾರೀ ಮಳೆಯಾಗುತ್ತಿದ್ದು ಚೆಂಬರಂಬಕ್ಕಂ ಜಲಾಶಯದಿಂದ ನೀರು ಹೊರಕ್ಕೆ ಹರಿಬಿಡಲಾಗಿದೆ . ಚೆನ್ನೈಯಿಂದ ಸುಮಾರು 25 ಕಿಮೀ ದೂರದಲ್ಲಿರುವ ಚೆಂಬರಂಬಕ್ಕಂ ಜಲಾಶಯದ ಗೇಟ್​ಗಳನ್ನು ಮಧ್ಯಾಹ್ನ 2 ಗಂಟೆಗೆ ತೆರೆಯಲಾಗಿದೆ. ಬೆಳಿಗ್ಗೆ 8 ಗಂಟೆ ಹೊತ್ತಿಗೆ ಜಲಾಶಯದಲ್ಲಿ ನೀರಿನ ಮಟ್ಟ 23 ಅಡಿ ತಲುಪಿದ್ದು 500 ಕ್ಯುಸೆಕ್ ನೀರನ್ನು ಹೊರಗೆ ಹರಿಬಿಡಲಾಗಿದೆ.

ಇಂದು ಚೆನ್ನೈ ನಗರದಲ್ಲಿ 6 ಸೆಮೀ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯ ಮಳೆಯಾಗಲಿದ್ದು, ಮೋಡಮುಸುಕಿದ ವಾತಾವರಣ ಇರಲಿದೆ.

ರಸ್ತೆ ಮತ್ತು ಸೇತುವೆಗಳು ಜಲಾವೃತವಾಗಲಿದ್ದು ಸಂಚಾರಕ್ಕೆ ಅಡಚಣೆಯುಂಟಾಗಲಿದೆ. ಚೆನ್ನೈ ನಗರದ ರಸ್ತೆಗಳು ಈಗಾಗಲೇ ನೀರಿನಿಂದ ತುಂಬಿದ್ದು, ಇವತ್ತು ಮತ್ತು ನಾಳೆ ತಮಿಳುನಾಡಿನ ಇತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆಯ ಪ್ರಕಾರ ಮಂಗಳವಾರ ವಿಲ್ಲುಪುರಂ, ಚೆನ್ನೈ, ಕಾಂಚೀಪುರಂ, ಕಡಲೂರು, ನಾಗಪಟ್ಟಣಂ, ತಿರಿವನ್ನಾಮಲೈ ಮತ್ತು ಪುದುಚ್ಚೇರಿಯಲ್ಲಿ ಭಾರೀ ಮಳೆಯಾಗಲಿದೆ. ಜನವರಿ 6, ಬುಧವಾರದಂದು ನೀಲಗಿರಿ, ಕಡಲೂರು, ನಾಗಪಟ್ಟಣಂ, ಮೈಲಾಡುತುರೈ, ವಿಲ್ಲುಪುರಂ ಜಿಲ್ಲೆಯಲ್ಲಿ ಮಳೆಯಾಗಲಿದೆ.

Nivar Cyclone ತಮಿಳುನಾಡು, ಪುದುಚೇರಿ, ಆಂಧ್ರದಲ್ಲಿ ಬಿರುಗಾಳಿ ಸಹಿತ ಮಳೆ: ಜನಜೀವನ ಅಸ್ತವ್ಯಸ್ತ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!