AQI: ದೆಹಲಿಯಲ್ಲಿ 5 ವರ್ಷದಲ್ಲೇ ಅತಿಹೆಚ್ಚು ವಾಯುಮಾಲಿನ್ಯ; ಬೆಂಗಳೂರಿನ ವಾಯುಗುಣಮಟ್ಟ ಹೇಗಿದೆ? ಇಲ್ಲಿದೆ ವಿವರ

Delhi, Bengaluru AQI: ಏರ್ ಕ್ವಾಲಿಟಿ ಇಂಡೆಕ್ಸ್​ನಲ್ಲಿ PM 2.5, 100 ಕ್ಕಿಂತ ಕಡಿಮೆ ಇರಬೇಕು. ಅದನ್ನು ಉತ್ತಮ ಗುಣಮಟ್ಟದ ಗಾಳಿ ಎಂದು ವರ್ಗೀಕರಣ ಮಾಡಲಾಗುತ್ತದೆ. ಆದರೆ ದೆಹಲಿ, ಸುತ್ತಮುತ್ತಲಿನ ಗಾಳಿಯ ಗುಣಮಟ್ಟ ಸದ್ಯ ತೀರ ಕಳಪೆ ಗುಣಮಟ್ಟ ಹೊಂದಿದೆ.

AQI: ದೆಹಲಿಯಲ್ಲಿ 5 ವರ್ಷದಲ್ಲೇ ಅತಿಹೆಚ್ಚು ವಾಯುಮಾಲಿನ್ಯ; ಬೆಂಗಳೂರಿನ ವಾಯುಗುಣಮಟ್ಟ ಹೇಗಿದೆ? ಇಲ್ಲಿದೆ ವಿವರ
ದೆಹಲಿಯಲ್ಲಿ ಹದಗೆಟ್ಟ ಗಾಳಿ
Follow us
| Updated By: ganapathi bhat

Updated on: Nov 06, 2021 | 11:12 AM

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಿಷೇಧದ ನಡುವೆ ಪಟಾಕಿ ಸಿಡಿಸಿದ ಹಿನ್ನೆಲೆ ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗಿದೆ. ಏರ್ ಕ್ವಾಲಿಟಿ ಇಂಡೆಕ್ಸ್‌ನಲ್ಲಿ ಗುಣಮಟ್ಟ 462ಕ್ಕೆ ಕುಸಿತ ಕಂಡಿದೆ. ದೆಹಲಿಯಲ್ಲಿ 5 ವರ್ಷದಲ್ಲೇ ಅತಿ ಹೆಚ್ಚು ವಾಯುಮಾಲಿನ್ಯ ದಾಖಲಾಗಿದೆ. ಈ ಬಗ್ಗೆ, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮಾಹಿತಿ ಲಭ್ಯವಾಗಿದೆ, ದೆಹಲಿ, ಸುತ್ತಮುತ್ತಲಿನ ನಗರಗಳಲ್ಲಿ ಹೊಗೆ ಆವರಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಜನರಿಗೆ ಉಸಿರಾಟದ ಸಮಸ್ಯೆ ಕಂಡುಬಂದಿದೆ. ಜನರಿಗೆ ಕಣ್ಣುರಿ, ಕಣ್ಣಿನಲ್ಲಿ ನೀರು, ಗಂಟಲು ನೋವಿನ ಸಮಸ್ಯೆ ಕಂಡುಬಂದಿದೆ.

ನಿಷೇಧದ ಮಧ್ಯೆ ಪಟಾಕಿ ಸಿಡಿಸಿದ ಹಿನ್ನೆಲೆ ಪ್ರಕರಣ ದಾಖಲು ಮಾಡಲಾಗಿದೆ. ದೆಹಲಿಯಲ್ಲಿ 50ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ದೆಹಲಿ ಪಕ್ಕದ ಫರಿದಾಬಾದ್​ನಲ್ಲಿ ಏರ್ ಕ್ವಾಲಿಟಿ ಇಂಡೆಕ್ಸ್​ನಲ್ಲಿ ವಾಯು ಗುಣಮಟ್ಟ 469ಕ್ಕೆ ಕುಸಿತ ಕಂಡಿದೆ. ಗ್ರೇಟರ್ ನೋಯ್ಡಾದಲ್ಲಿ 464, ಗಾಜಿಯಾಬಾದ್​ನಲ್ಲಿ 470, ಗುರುಗ್ರಾಮದಲ್ಲಿ 472, ನೋಯ್ಡಾದಲ್ಲಿ 475ಕ್ಕೆ ವಾಯುಗುಣಮಟ್ಟ ಕುಸಿತವಾಗಿದೆ.

ಏರ್ ಕ್ವಾಲಿಟಿ ಇಂಡೆಕ್ಸ್​ನಲ್ಲಿ PM 2.5, 100 ಕ್ಕಿಂತ ಕಡಿಮೆ ಇರಬೇಕು. ಅದನ್ನು ಉತ್ತಮ ಗುಣಮಟ್ಟದ ಗಾಳಿ ಎಂದು ವರ್ಗೀಕರಣ ಮಾಡಲಾಗುತ್ತದೆ. ಆದರೆ ದೆಹಲಿ, ಸುತ್ತಮುತ್ತಲಿನ ಗಾಳಿಯ ಗುಣಮಟ್ಟ ಸದ್ಯ ತೀರ ಕಳಪೆ ಗುಣಮಟ್ಟ ಹೊಂದಿದೆ.

ವಾಯುಮಾಲಿನ್ಯದಿಂದ ಕೊರೊನಾ ಹೆಚ್ಚಾಗಬಹುದು: ರಣದೀಪ್ ಗುಲೇರಿಯಾ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಳವಾದ ಹಿನ್ನೆಲೆ, ವಾಯುಮಾಲಿನ್ಯದಿಂದ ಕೊರೊನಾ ಹೆಚ್ಚಾಗಬಹುದು ಎಂದು ದೆಹಲಿ ಏಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಹೇಳಿಕೆ ನೀಡಿದ್ದಾರೆ. ಮಾಲಿನ್ಯದ ಗಾಳಿಯಲ್ಲಿ ಹೆಚ್ಚು ಸಮಯ ವೈರಸ್ ಇರುತ್ತೆ. ಇಂತಹ ಗಾಳಿ ಸೇವನೆಯಿಂದ ಜನರು ಸೋಂಕಿಗೆ ತುತ್ತಾಗುತ್ತಾರೆ. ಹೃದಯ, ಕಿಡ್ನಿ ಸಮಸ್ಯೆ ಇರುವವರಿಗೆ ತೊಂದರೆ ಹೆಚ್ಚಾಗಲಿದೆ. ಹೈಪರ್ ಟೆನ್ಷನ್ ಇದ್ರೆ ಹೈರಿಸ್ಕ್ ಹೃದಯದ ಸಮಸ್ಯೆ ಸಾಧ್ಯತೆ ಇದೆ. ವಾಯುಮಾಲಿನ್ಯದಿಂದ ಕೊರೊನಾ ಸಾವು ಹೆಚ್ಚಾಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನ ವಾಯುಗುಣಮಟ್ಟ ಹೇಗಿದೆ? ಬೆಂಗಳೂರಿನ ಬಾಪೂಜಿ ನಗರ ವಾಯುಗುಣಮಟ್ಟ 129 ಆಗಿದೆ. ಅಂದರೆ, ಸೂಕ್ಷ್ಮ ಗುಂಪಿನ‌ ಜನರಿಗೆ ಇದರಿಂದ ತೊಂದರೆ ಉಂಟಾಗಬಹುದು. BWSSB ಕಾಡಬೀಸನಹಳ್ಳಿಯಲ್ಲಿ 33 ಅಂದರೆ ಉತ್ತಮ ಗುಣಮಟ್ಟದ ಗಾಳಿ ಇದೆ. ಪೀಣ್ಯದಲ್ಲಿ ವಾಯುಗುಣಮಟ್ಟ 62, ಅಂದರೆ ಸಾಧಾರಣ ಆಗಿದೆ. ಹೆಬ್ಬಾಳದಲ್ಲಿ ವಾಯುಗುಣಮಟ್ಟ 53, ಜಯನಗರ ಐದನೇ ಬ್ಲಾಕ್ ವಾಯುಗುಣಮಟ್ಟ 78, ಬಿಟಿಎಂ‌ ಲೇಔಟ್ 61 ಅಂದರೆ ಇಲ್ಲಿ ಸಾಧಾರಣ ವಾಯುಗುಣಮಟ್ಟ ಕಂಡುಬಂದಿದೆ.

ಇದನ್ನೂ ಓದಿ: Diwali 2021: ದೀಪಾವಳಿ ಸಮಯದಲ್ಲಿ ಆರೋಗ್ಯವಾಗಿರಲು ಮತ್ತು ವಾಯು ಮಾಲಿನ್ಯ ತಡೆಗಟ್ಟಲು ಇಲ್ಲಿವೆ ಕೆಲವು ಸರಳ ಸಲಹೆಗಳು

ಇದನ್ನೂ ಓದಿ: ಮನೆಯ ಹೊರಗೆ ಅಷ್ಟೇ ಅಲ್ಲ ಮನೆಯೊಳಗೆ ಕೂಡ ವಾಯು ಮಾಲಿನ್ಯ ಉಂಟಾಗಬಹುದು; ಅಗತ್ಯ ಕ್ರಮದ ಬಗ್ಗೆ ಎಚ್ಚರ ವಹಿಸಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು