AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಮುಂಬೈ ಬಳಿ ರಸ್ತೆಯೊಂದರಲ್ಲಿ ಹಾಡಹಗಲೇ ಎರಡು ಗುಂಪುಗಳ ಕಾದಾಟ, ಗುಂಡು ಹಾರಾಟ

ಪ್ರಾಥಮಿಕ ಮಾಹಿತಿಯ ಪ್ರಕಾರ, ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಎರಡು ಗುಂಪುಗಳು ಜಗಳವಾಡಿದ ನಂತರ ಸುಮಾರು 15-20 ಸುತ್ತು ಗುಂಡು ಹಾರಿಸಲಾಗಿದೆ. ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ

Watch ಮುಂಬೈ ಬಳಿ ರಸ್ತೆಯೊಂದರಲ್ಲಿ ಹಾಡಹಗಲೇ ಎರಡು ಗುಂಪುಗಳ ಕಾದಾಟ, ಗುಂಡು ಹಾರಾಟ
ರಸ್ತೆಯಲ್ಲಿ ಗುಂಡು ಹಾರಾಟ
TV9 Web
| Edited By: |

Updated on: Nov 14, 2022 | 1:34 PM

Share

ಮುಂಬೈ: ಮುಂಬೈ (Mumbai) ಸಮೀಪದ ರಸ್ತೆಯೊಂದರಲ್ಲಿ ಇಂದು (ಸೋಮವಾರ) ಹಗಲು ಹೊತ್ತಿನಲ್ಲಿ ಗುಂಡಿನ ದಾಳಿ(Heavy Firing) ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಎತ್ತಿನಗಾಡಿ ಓಟದ ಸ್ಪರ್ಧೆಯಲ್ಲಿ ಎರಡು ಗುಂಪುಗಳು ಜಗಳವಾಡಿದ ನಂತರ ಸುಮಾರು 15-20 ಸುತ್ತು ಗುಂಡು ಹಾರಿಸಲಾಗಿದೆ. ಯಾವುದೇ ಗಾಯಗಳ ಬಗ್ಗೆ ವರದಿಯಾಗಿಲ್ಲ. ಘಟನೆಯ ಸಮಯದಲ್ಲಿ ಚಿತ್ರೀಕರಿಸಲಾದ ವಿಡಿಯೊ ಕ್ಲಿಪ್‌ನಲ್ಲಿ, ಕೆಲವು ವ್ಯಕ್ತಿಗಳು ಮುಖ್ಯ ರಸ್ತೆಯಿಂದ ನಿಲ್ಲಿಸಿದ ವಾಹನಗಳ ಸುತ್ತಲೂ ನಿಂತಿರುವುದನ್ನು ಕಾಣಬಹುದು, ಇತರ ವಾಹನಗಳು ಹಾದು ಹೋಗುತ್ತಿರುವಾಗಲೂ ಎದುರಿನಿಂದ ಏಕಾಏಕಿ ಗುಂಡು ಹಾರಿಸಲಾಗುತ್ತದೆ.ಗುಂಡಿನ ದಾಳಿ ಮುಂದುವರಿದಂತೆ, ಕೆಲವರು ರಕ್ಷಣೆ ಪಡೆಯಲು ಓಡುತ್ತಿರುವುದನ್ನು ಕಾಣಬಹುದು. ಕೆಲವರು ಅಲ್ಲಿ ನಿಂತಿದ್ದ ಕಾರುಗಳ ಹಿಂದೆ ಅಡಗಿಕೊಳ್ಳಲು ಪ್ರಯತ್ನಿಸುತ್ತಿರುವುದೂ ಕಾಣಿಸುತ್ತದೆ.

ವರದಿಗಳ ಪ್ರಕಾರ, ಅಂಬರನಾಥ್‌ನಲ್ಲಿ ನಡೆದ ಎತ್ತಿನಗಾಡಿ ಓಟದ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ.. ವಾದ-ವಿವಾದದ ನಂತರ, ಇಬ್ಬರು ವ್ಯಕ್ತಿಗಳ ಗುಂಪುಗಳು ಹೊಡೆದಾಟ ನಡೆಸಿ ಗುಂಡು ಹಾರಾಟ ನಡೆಸಿವೆ.ಸ್ಥಳಕ್ಕೆ ಶಿವಾಜಿನಗರ ಠಾಣೆಯ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಎನ್ ಡಿಟಿವಿ ವರದಿ ಮಾಡಿದೆ.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ