AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆ ನೋಡಲು ತೆರಳಿದ್ದಾಗ ಬಂದೆರಗಿದ ಸಿಡಿಲು; ಸುಮಾರು 20 ಮಂದಿ ಸಾವು, 17 ಜನರಿಗೆ ಗಾಯ

ಅಮೆರ್​ ಕೋಟೆಯ ವೀಕ್ಷಣಾಗೋಪುರದ ಬಳಿ ನಿಂತು ಪ್ರಕೃತಿ ಸೌಂದರ್ಯ ಸವಿಯುತ್ತಿದ್ದ ಪ್ರವಾಸಿಗರಿಗೆ ಏಕಾಏಕಿ ಸಿಡಿಲು ಬಡಿದಿದ್ದು, ಸ್ಥಳದಲ್ಲಿಯೇ ಅನೇಕರು ಸಾವಿಗೀಡಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಕೋಟೆ ನೋಡಲು ತೆರಳಿದ್ದಾಗ ಬಂದೆರಗಿದ ಸಿಡಿಲು; ಸುಮಾರು 20 ಮಂದಿ ಸಾವು, 17 ಜನರಿಗೆ ಗಾಯ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jul 12, 2021 | 7:12 AM

Share

ಜೈಪುರ: ರಾಜಸ್ಥಾನದಲ್ಲಿ ನಿನ್ನೆ (ಜುಲೈ 11, ಭಾನುವಾರ) ಸಿಡಿಲು ಬಡಿದು (Thunderstorm) ಸುಮಾರು 20 ಜನ ಸಾವಿಗೀಡಾದ ದುರ್ಘಟನೆ ಸಂಭವಿಸಿದೆ. ಜೈಪುರ, ಝಲವಾರ್, ಧೋಲ್‌ಪುರ ಜಿಲ್ಲೆಗಳಲ್ಲಿ‌ ದುರ್ಘಟನೆ ಸಂಭವಿಸಿದ್ದು, ಸಿಡಿಲಿಗೆ ಮೂವರು ಮಕ್ಕಳು ಸೇರಿದಂತೆ ಸುಮಾರು 20 ಜನ ಬಲಿಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಇಂಡಿಯಾ ಟುಡೇ ವರದಿ ಪ್ರಕಾರ ಮೃತಪಟ್ಟವರಲ್ಲಿ ಏಳು ಜನ ಮಕ್ಕಳಿದ್ದು ನಾಲ್ವರು ಕೋಟಾ ಜಿಲ್ಲೆಯವರು ಹಾಗೂ ಇನ್ನು ಮೂವರು ಧೋಲ್​ಪುರ್ ಜಿಲ್ಲೆಯ ಬಡಿ ಪ್ರದೇಶದವರು ಎಂದು ಹೇಳಲಾಗಿದೆ.

ಸುಮಾರು 20 ಸಾವಿನ ಪೈಕಿ ಹೆಚ್ಚಿನವು ಜೈಪುರದ ಹೊರವಲಯದಲ್ಲಿರುವ ಅಮೆರ್ ಕೋಟೆ (Amer Fort) ವೀಕ್ಷಣೆಗಾಗಿ ಸಂಜೆ ವೇಳೆ ಪ್ರವಾಸಿಗರು ಬಂದಿದ್ದಾಗ ವೇಳೆ ಸಂಭವಿಸಿದೆ ಎನ್ನಲಾಗಿದೆ. ಅಮೆರ್​ ಕೋಟೆಯ ವೀಕ್ಷಣಾಗೋಪುರದ ಬಳಿ ನಿಂತು ಪ್ರಕೃತಿ ಸೌಂದರ್ಯ ಸವಿಯುತ್ತಿದ್ದ ಪ್ರವಾಸಿಗರಿಗೆ ಏಕಾಏಕಿ ಸಿಡಿಲು ಬಡಿದಿದ್ದು, ಸ್ಥಳದಲ್ಲಿಯೇ ಅನೇಕರು ಸಾವಿಗೀಡಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಒಟ್ಟು 17 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನೆಲ್ಲಾ ರಕ್ಷಣಾ ಪಡೆಯವರು ಕೂಡಲೇ ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ. ಜೈಪುರದ ಸವಾಯಿ ಮನ್ ಸಿಂಗ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದುರ್ಘಟನೆ ಬಳಿಕ ಮೃತಪಟ್ಟವರ ಕುಟುಂಬ ಹಾಗೂ ಗಾಯಾಳುಗಳ ನೆರವಿಗೆ ಧಾವಿಸಿರುವ ರಾಜಸ್ಥಾನ ಸರ್ಕಾರ ಎಲ್ಲಾ ರೀತಿಯ ಸಲಹೆ, ಸಹಾಯ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಜಿಲ್ಲಾಧಿಕಾರಿ ಅಂತರ್ ಸಿಂಗ್ ಕೂಡಾ ಅಮೆರ್ ಕೋಟೆಗೆ ತೆರಳಿ ಅವಘಡ ಸಂಭವಿಸಿದ ಸ್ಥಳವನ್ನು ಪರಿಶೀಲಿಸಿದ್ದಾರೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​, ಮೃತಪಟ್ಟ ದುರ್ದೈವಿಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ನಿನ್ನೆ ಸಂಜೆ ಸಿಡಿಲು ತಗುಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಹಣವನ್ನು ಪರಿಹಾರದ ರೂಪದಲ್ಲಿ ಕೊಡಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೇ ಇಂದು ತುರ್ತು ಸಭೆಯನ್ನೂ ಕರೆದಿದ್ದು, ಈ ರೀತಿಯ ದುರ್ಘಟನೆಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸುವುದಾಗಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಸಹ ಮೃತರ ಕುಟುಂಬಕ್ಕೆ ಸಾಂತ್ವಾನ ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಹಿಮಾಚಲ ಪ್ರದೇಶದ ಮಹಾದೇವ ದೇವಾಲಯಕ್ಕೆ ಬಂದೆರಗಿದ ಸಿಡಿಲು! ವಿಡಿಯೋ ನೋಡಿ 

ಪಶ್ಚಿಮಬಂಗಾಳದಲ್ಲಿ ಸಿಡಿಲು ದುರಂತಕ್ಕೆ 20 ಮಂದಿ ಸಾವು; ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಪರಿಹಾರ

Follow Us
Web contact
Web contact

TV9 Kannada

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು