AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಹುಚ್ಚು ಮಳೆ, ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವು, ಶಾಲೆಗಳಿಗೆ ರಜೆ

ತಮಿಳುನಾಡಿನಲ್ಲಿ ಹುಚ್ಚು ಮಳೆ ಸುರಿಯುತ್ತಿದೆ, ಭಾರಿ ಮಳೆಗೆ ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ತಮಿಳುನಾಡಿನ ತಿರುವಾರೂರ್​ನಲ್ಲಿ ಘಟನೆ ನಡೆದಿದೆ. ಬಾಲಕಿ ಮೋನಿಷಾ ಮೇಲೆ ಗೋಡೆ ಬಿದ್ದು ನಜ್ಜುಗುಜ್ಜಾಗಿ ಸಾವನ್ನಪ್ಪಿದ್ದಾಳೆ. ಆಕೆಯ ಸಹೋದರ ಮೋಹನ್‌ದಾಸ್ (12) ಗಾಯಗೊಂಡಿದ್ದು, ತಿರುವರೂರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ತಮಿಳುನಾಡಿನಲ್ಲಿ ಹುಚ್ಚು ಮಳೆ, ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವು, ಶಾಲೆಗಳಿಗೆ ರಜೆ
ಮಳೆ
ನಯನಾ ರಾಜೀವ್
|

Updated on: Jan 08, 2024 | 2:14 PM

Share

ತಮಿಳುನಾಡಿನಲ್ಲಿ ಹುಚ್ಚು ಮಳೆ ಸುರಿಯುತ್ತಿದೆ, ಭಾರಿ ಮಳೆಗೆ ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ತಮಿಳುನಾಡಿನ ತಿರುವಾರೂರ್​ನಲ್ಲಿ ಘಟನೆ ನಡೆದಿದೆ. ಬಾಲಕಿ ಮೋನಿಷಾ ಮೇಲೆ ಗೋಡೆ ಬಿದ್ದು ನಜ್ಜುಗುಜ್ಜಾಗಿ ಸಾವನ್ನಪ್ಪಿದ್ದಾಳೆ. ಆಕೆಯ ಸಹೋದರ ಮೋಹನ್‌ದಾಸ್ (12) ಗಾಯಗೊಂಡಿದ್ದು, ತಿರುವರೂರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಪ್ರಸ್ತುತ ಮಳೆಯಿಂದಾಗಿ ಚೆನ್ನೈ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ತಿರುವರೂರು ವೈದ್ಯಕೀಯ ಕಾಲೇಜಿನ ಮೆಟರ್ನಿಟಿ ವಾರ್ಡ್‌ಗೆ ಪ್ರವಾಹದ ನೀರು ನುಗ್ಗಿದ್ದು, ರೋಗಿಗಳನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ತಿರುವರೂರು ಜಿಲ್ಲೆಯ ನನ್ನಿಲಂ, ಕುಡವಾಸಲ್, ವಲಂಗೈಮನ್, ಮನ್ನಾರ್ಕುಡಿ ಮತ್ತು ನೀಡಮಂಗಲಂ ಸೇರಿದಂತೆ ಪೀಡಿತ ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಭಾರೀ ಮಳೆಯಾಗಿದೆ.

ತಮಿಳುನಾಡಿನ ಎಂಟು ಜಿಲ್ಲೆಗಳಲ್ಲಿ ಸೋಮವಾರ ಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ವಿಲ್ಲುಪುರಂ, ಕಡಲೂರು, ತಿರುವಾರೂರ್ ಮತ್ತು ಮೈಲಾಡುತುರೈ ಜಿಲ್ಲೆಗಳು ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವುದಾಗಿ ಘೋಷಿಸಿದರೆ, ಅರಿಯಲೂರ್, ಚೆಂಗಲ್ಪಟ್ಟು, ಕಲ್ಲಕುರಿಚಿ ಮತ್ತು ತಿರುವಣ್ಣಾಮಲೈ ಶಾಲೆಗಳು ಕೂಡ ರಜೆ ನೀಡಿವೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣ, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ

ಮಳೆಯ ಕಾರಣ ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸಾಮಿ ಅವರು ಕೇಂದ್ರಾಡಳಿತ ಪ್ರದೇಶದಲ್ಲಿ ಸೋಮವಾರ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ, ನಾಗಪಟ್ಟಣಂ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಅತಿ ಹೆಚ್ಚು 167 ಮಿಮೀ ಮಳೆ ದಾಖಲಾಗಿದ್ದರೆ, ಚೆನ್ನೈನ ಎನ್ನೂರ್ ಬಂದರಿನಲ್ಲಿ 92 ಮಿಮೀ ಮಳೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು