AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಹುಚ್ಚು ಮಳೆ, ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವು, ಶಾಲೆಗಳಿಗೆ ರಜೆ

ತಮಿಳುನಾಡಿನಲ್ಲಿ ಹುಚ್ಚು ಮಳೆ ಸುರಿಯುತ್ತಿದೆ, ಭಾರಿ ಮಳೆಗೆ ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ತಮಿಳುನಾಡಿನ ತಿರುವಾರೂರ್​ನಲ್ಲಿ ಘಟನೆ ನಡೆದಿದೆ. ಬಾಲಕಿ ಮೋನಿಷಾ ಮೇಲೆ ಗೋಡೆ ಬಿದ್ದು ನಜ್ಜುಗುಜ್ಜಾಗಿ ಸಾವನ್ನಪ್ಪಿದ್ದಾಳೆ. ಆಕೆಯ ಸಹೋದರ ಮೋಹನ್‌ದಾಸ್ (12) ಗಾಯಗೊಂಡಿದ್ದು, ತಿರುವರೂರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ತಮಿಳುನಾಡಿನಲ್ಲಿ ಹುಚ್ಚು ಮಳೆ, ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವು, ಶಾಲೆಗಳಿಗೆ ರಜೆ
ಮಳೆ
Follow us
ನಯನಾ ರಾಜೀವ್
|

Updated on: Jan 08, 2024 | 2:14 PM

ತಮಿಳುನಾಡಿನಲ್ಲಿ ಹುಚ್ಚು ಮಳೆ ಸುರಿಯುತ್ತಿದೆ, ಭಾರಿ ಮಳೆಗೆ ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ತಮಿಳುನಾಡಿನ ತಿರುವಾರೂರ್​ನಲ್ಲಿ ಘಟನೆ ನಡೆದಿದೆ. ಬಾಲಕಿ ಮೋನಿಷಾ ಮೇಲೆ ಗೋಡೆ ಬಿದ್ದು ನಜ್ಜುಗುಜ್ಜಾಗಿ ಸಾವನ್ನಪ್ಪಿದ್ದಾಳೆ. ಆಕೆಯ ಸಹೋದರ ಮೋಹನ್‌ದಾಸ್ (12) ಗಾಯಗೊಂಡಿದ್ದು, ತಿರುವರೂರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಪ್ರಸ್ತುತ ಮಳೆಯಿಂದಾಗಿ ಚೆನ್ನೈ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ತಿರುವರೂರು ವೈದ್ಯಕೀಯ ಕಾಲೇಜಿನ ಮೆಟರ್ನಿಟಿ ವಾರ್ಡ್‌ಗೆ ಪ್ರವಾಹದ ನೀರು ನುಗ್ಗಿದ್ದು, ರೋಗಿಗಳನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ತಿರುವರೂರು ಜಿಲ್ಲೆಯ ನನ್ನಿಲಂ, ಕುಡವಾಸಲ್, ವಲಂಗೈಮನ್, ಮನ್ನಾರ್ಕುಡಿ ಮತ್ತು ನೀಡಮಂಗಲಂ ಸೇರಿದಂತೆ ಪೀಡಿತ ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಭಾರೀ ಮಳೆಯಾಗಿದೆ.

ತಮಿಳುನಾಡಿನ ಎಂಟು ಜಿಲ್ಲೆಗಳಲ್ಲಿ ಸೋಮವಾರ ಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ವಿಲ್ಲುಪುರಂ, ಕಡಲೂರು, ತಿರುವಾರೂರ್ ಮತ್ತು ಮೈಲಾಡುತುರೈ ಜಿಲ್ಲೆಗಳು ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವುದಾಗಿ ಘೋಷಿಸಿದರೆ, ಅರಿಯಲೂರ್, ಚೆಂಗಲ್ಪಟ್ಟು, ಕಲ್ಲಕುರಿಚಿ ಮತ್ತು ತಿರುವಣ್ಣಾಮಲೈ ಶಾಲೆಗಳು ಕೂಡ ರಜೆ ನೀಡಿವೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣ, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ

ಮಳೆಯ ಕಾರಣ ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸಾಮಿ ಅವರು ಕೇಂದ್ರಾಡಳಿತ ಪ್ರದೇಶದಲ್ಲಿ ಸೋಮವಾರ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ, ನಾಗಪಟ್ಟಣಂ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಅತಿ ಹೆಚ್ಚು 167 ಮಿಮೀ ಮಳೆ ದಾಖಲಾಗಿದ್ದರೆ, ಚೆನ್ನೈನ ಎನ್ನೂರ್ ಬಂದರಿನಲ್ಲಿ 92 ಮಿಮೀ ಮಳೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್