AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಹುಚ್ಚು ಮಳೆ, ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವು, ಶಾಲೆಗಳಿಗೆ ರಜೆ

ತಮಿಳುನಾಡಿನಲ್ಲಿ ಹುಚ್ಚು ಮಳೆ ಸುರಿಯುತ್ತಿದೆ, ಭಾರಿ ಮಳೆಗೆ ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ತಮಿಳುನಾಡಿನ ತಿರುವಾರೂರ್​ನಲ್ಲಿ ಘಟನೆ ನಡೆದಿದೆ. ಬಾಲಕಿ ಮೋನಿಷಾ ಮೇಲೆ ಗೋಡೆ ಬಿದ್ದು ನಜ್ಜುಗುಜ್ಜಾಗಿ ಸಾವನ್ನಪ್ಪಿದ್ದಾಳೆ. ಆಕೆಯ ಸಹೋದರ ಮೋಹನ್‌ದಾಸ್ (12) ಗಾಯಗೊಂಡಿದ್ದು, ತಿರುವರೂರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ತಮಿಳುನಾಡಿನಲ್ಲಿ ಹುಚ್ಚು ಮಳೆ, ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವು, ಶಾಲೆಗಳಿಗೆ ರಜೆ
ಮಳೆ
ನಯನಾ ರಾಜೀವ್
|

Updated on: Jan 08, 2024 | 2:14 PM

Share

ತಮಿಳುನಾಡಿನಲ್ಲಿ ಹುಚ್ಚು ಮಳೆ ಸುರಿಯುತ್ತಿದೆ, ಭಾರಿ ಮಳೆಗೆ ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ತಮಿಳುನಾಡಿನ ತಿರುವಾರೂರ್​ನಲ್ಲಿ ಘಟನೆ ನಡೆದಿದೆ. ಬಾಲಕಿ ಮೋನಿಷಾ ಮೇಲೆ ಗೋಡೆ ಬಿದ್ದು ನಜ್ಜುಗುಜ್ಜಾಗಿ ಸಾವನ್ನಪ್ಪಿದ್ದಾಳೆ. ಆಕೆಯ ಸಹೋದರ ಮೋಹನ್‌ದಾಸ್ (12) ಗಾಯಗೊಂಡಿದ್ದು, ತಿರುವರೂರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಪ್ರಸ್ತುತ ಮಳೆಯಿಂದಾಗಿ ಚೆನ್ನೈ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ತಿರುವರೂರು ವೈದ್ಯಕೀಯ ಕಾಲೇಜಿನ ಮೆಟರ್ನಿಟಿ ವಾರ್ಡ್‌ಗೆ ಪ್ರವಾಹದ ನೀರು ನುಗ್ಗಿದ್ದು, ರೋಗಿಗಳನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ತಿರುವರೂರು ಜಿಲ್ಲೆಯ ನನ್ನಿಲಂ, ಕುಡವಾಸಲ್, ವಲಂಗೈಮನ್, ಮನ್ನಾರ್ಕುಡಿ ಮತ್ತು ನೀಡಮಂಗಲಂ ಸೇರಿದಂತೆ ಪೀಡಿತ ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಭಾರೀ ಮಳೆಯಾಗಿದೆ.

ತಮಿಳುನಾಡಿನ ಎಂಟು ಜಿಲ್ಲೆಗಳಲ್ಲಿ ಸೋಮವಾರ ಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ವಿಲ್ಲುಪುರಂ, ಕಡಲೂರು, ತಿರುವಾರೂರ್ ಮತ್ತು ಮೈಲಾಡುತುರೈ ಜಿಲ್ಲೆಗಳು ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವುದಾಗಿ ಘೋಷಿಸಿದರೆ, ಅರಿಯಲೂರ್, ಚೆಂಗಲ್ಪಟ್ಟು, ಕಲ್ಲಕುರಿಚಿ ಮತ್ತು ತಿರುವಣ್ಣಾಮಲೈ ಶಾಲೆಗಳು ಕೂಡ ರಜೆ ನೀಡಿವೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣ, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ

ಮಳೆಯ ಕಾರಣ ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸಾಮಿ ಅವರು ಕೇಂದ್ರಾಡಳಿತ ಪ್ರದೇಶದಲ್ಲಿ ಸೋಮವಾರ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ, ನಾಗಪಟ್ಟಣಂ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಅತಿ ಹೆಚ್ಚು 167 ಮಿಮೀ ಮಳೆ ದಾಖಲಾಗಿದ್ದರೆ, ಚೆನ್ನೈನ ಎನ್ನೂರ್ ಬಂದರಿನಲ್ಲಿ 92 ಮಿಮೀ ಮಳೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?