AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಹುಚ್ಚು ಮಳೆ, ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವು, ಶಾಲೆಗಳಿಗೆ ರಜೆ

ತಮಿಳುನಾಡಿನಲ್ಲಿ ಹುಚ್ಚು ಮಳೆ ಸುರಿಯುತ್ತಿದೆ, ಭಾರಿ ಮಳೆಗೆ ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ತಮಿಳುನಾಡಿನ ತಿರುವಾರೂರ್​ನಲ್ಲಿ ಘಟನೆ ನಡೆದಿದೆ. ಬಾಲಕಿ ಮೋನಿಷಾ ಮೇಲೆ ಗೋಡೆ ಬಿದ್ದು ನಜ್ಜುಗುಜ್ಜಾಗಿ ಸಾವನ್ನಪ್ಪಿದ್ದಾಳೆ. ಆಕೆಯ ಸಹೋದರ ಮೋಹನ್‌ದಾಸ್ (12) ಗಾಯಗೊಂಡಿದ್ದು, ತಿರುವರೂರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ತಮಿಳುನಾಡಿನಲ್ಲಿ ಹುಚ್ಚು ಮಳೆ, ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವು, ಶಾಲೆಗಳಿಗೆ ರಜೆ
ಮಳೆ
ನಯನಾ ರಾಜೀವ್
|

Updated on: Jan 08, 2024 | 2:14 PM

Share

ತಮಿಳುನಾಡಿನಲ್ಲಿ ಹುಚ್ಚು ಮಳೆ ಸುರಿಯುತ್ತಿದೆ, ಭಾರಿ ಮಳೆಗೆ ಮನೆಯ ಗೋಡೆ ಕುಸಿದು 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ತಮಿಳುನಾಡಿನ ತಿರುವಾರೂರ್​ನಲ್ಲಿ ಘಟನೆ ನಡೆದಿದೆ. ಬಾಲಕಿ ಮೋನಿಷಾ ಮೇಲೆ ಗೋಡೆ ಬಿದ್ದು ನಜ್ಜುಗುಜ್ಜಾಗಿ ಸಾವನ್ನಪ್ಪಿದ್ದಾಳೆ. ಆಕೆಯ ಸಹೋದರ ಮೋಹನ್‌ದಾಸ್ (12) ಗಾಯಗೊಂಡಿದ್ದು, ತಿರುವರೂರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಪ್ರಸ್ತುತ ಮಳೆಯಿಂದಾಗಿ ಚೆನ್ನೈ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ತಿರುವರೂರು ವೈದ್ಯಕೀಯ ಕಾಲೇಜಿನ ಮೆಟರ್ನಿಟಿ ವಾರ್ಡ್‌ಗೆ ಪ್ರವಾಹದ ನೀರು ನುಗ್ಗಿದ್ದು, ರೋಗಿಗಳನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ತಿರುವರೂರು ಜಿಲ್ಲೆಯ ನನ್ನಿಲಂ, ಕುಡವಾಸಲ್, ವಲಂಗೈಮನ್, ಮನ್ನಾರ್ಕುಡಿ ಮತ್ತು ನೀಡಮಂಗಲಂ ಸೇರಿದಂತೆ ಪೀಡಿತ ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಭಾರೀ ಮಳೆಯಾಗಿದೆ.

ತಮಿಳುನಾಡಿನ ಎಂಟು ಜಿಲ್ಲೆಗಳಲ್ಲಿ ಸೋಮವಾರ ಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ವಿಲ್ಲುಪುರಂ, ಕಡಲೂರು, ತಿರುವಾರೂರ್ ಮತ್ತು ಮೈಲಾಡುತುರೈ ಜಿಲ್ಲೆಗಳು ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವುದಾಗಿ ಘೋಷಿಸಿದರೆ, ಅರಿಯಲೂರ್, ಚೆಂಗಲ್ಪಟ್ಟು, ಕಲ್ಲಕುರಿಚಿ ಮತ್ತು ತಿರುವಣ್ಣಾಮಲೈ ಶಾಲೆಗಳು ಕೂಡ ರಜೆ ನೀಡಿವೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣ, ದಕ್ಷಿಣ ಒಳನಾಡು, ಕರಾವಳಿಯಲ್ಲಿ ಮಳೆ

ಮಳೆಯ ಕಾರಣ ಪುದುಚೇರಿ ಮುಖ್ಯಮಂತ್ರಿ ಎನ್ ರಂಗಸಾಮಿ ಅವರು ಕೇಂದ್ರಾಡಳಿತ ಪ್ರದೇಶದಲ್ಲಿ ಸೋಮವಾರ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರದ ಪ್ರಕಾರ, ನಾಗಪಟ್ಟಣಂ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಅತಿ ಹೆಚ್ಚು 167 ಮಿಮೀ ಮಳೆ ದಾಖಲಾಗಿದ್ದರೆ, ಚೆನ್ನೈನ ಎನ್ನೂರ್ ಬಂದರಿನಲ್ಲಿ 92 ಮಿಮೀ ಮಳೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ