AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಪ್ರದೇಶದಲ್ಲಿ ಮಳೆ ಅನಾಹುತದಿಂದ ಮೂವರ ಸಾವು, ಕಡಪ ಜಿಲ್ಲೆಯಲ್ಲಿ 30 ಜನ ನಾಪತ್ತೆ

ಭಾರಿ ಮಳೆಗೆ ಆಂಧ್ರದ ಕಡಪ ಜಿಲ್ಲೆಯಲ್ಲಿ 30 ಜನ ನಾಪತ್ತೆಯಾಗಿದ್ದಾರೆ. ನಿರಂತರ ಮಳೆಯಿಂದಾಗಿ ಅನೇಕ ಗ್ರಾಮಗಳು ಜಲಾವೃತಗೊಂಡಿವೆ. ಚಿತ್ತೂರು ಜಿಲ್ಲೆಯ ತಿರುಪತಿಯಲ್ಲಿ ಸಾಕಷ್ಟು ಭಕ್ತಾದಿಗಳು ಸಿಲುಕಿಕೊಂಡಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಮಳೆ ಅನಾಹುತದಿಂದ ಮೂವರ ಸಾವು, ಕಡಪ ಜಿಲ್ಲೆಯಲ್ಲಿ 30 ಜನ ನಾಪತ್ತೆ
ತಿರುಪತಿಯಲ್ಲಿ ಮಳೆಯಿಂದ ಜಲಾವೃತವಾಗಿರುವ ರಸ್ತೆಗಳು
TV9 Web
| Edited By: |

Updated on: Nov 19, 2021 | 5:22 PM

Share

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಅದರಲ್ಲೂ ವಿಶೇಷವಾಗಿ ಚಿತ್ತೂರು ಮತ್ತು ಕಡಪ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಆಂಧ್ರ ಪ್ರದೇಶದಲ್ಲಿ ಉಂಟಾದ ಮಳೆ ಅನಾಹುತದಿಂದ ಮೂವರು ಮೃತಪಟ್ಟಿದ್ದಾರೆ.

ಭಾರಿ ಮಳೆಗೆ ಆಂಧ್ರದ ಕಡಪ ಜಿಲ್ಲೆಯಲ್ಲಿ 30 ಜನ ನಾಪತ್ತೆಯಾಗಿದ್ದಾರೆ. ನಿರಂತರ ಮಳೆಯಿಂದಾಗಿ ಅನೇಕ ಗ್ರಾಮಗಳು ಜಲಾವೃತಗೊಂಡಿವೆ. ಚಿತ್ತೂರು ಜಿಲ್ಲೆಯ ತಿರುಪತಿಯಲ್ಲಿ ಸಾಕಷ್ಟು ಭಕ್ತಾದಿಗಳು ಸಿಲುಕಿಕೊಂಡಿದ್ದಾರೆ. ತಿರುಪತಿ ರಸ್ತೆಯಲ್ಲಿ ಪ್ರವಾಹದಂತೆ ಮಳೆ ನೀರು ಹರಿಯುತ್ತಿದೆ. ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ಪ್ರವಾಹದ ನೀರಿನಲ್ಲಿ ಜನ ಮೀನು ಹಿಡಿಯುತ್ತಿದ್ದಾರೆ.

ಮಳೆಯಿಂದ ತತ್ತರಿಸಿದ ರಾಯಲಸೀಮಾ ಪ್ರಾಂತ್ಯದ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಜಗನ್ ಮೋಹನ್ ವಿಡಿಯೋ ಕಾನ್ಫರೆನ್ಸ್ ಮೂಲಕ‌ ಸಭೆ ನಡೆಸಿದ್ದಾರೆ. ತಿರುಮಲ ತಿರುಪತಿಯಲ್ಲಿ ದೇವಾಲಯವನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗಿದ್ದು, ತೀವ್ರ ಮುನ್ನೆಚ್ಚರಿಕೆ ಘೋಷಿಸಲಾಗಿದೆ. ಮಳೆಯಿಂದ ತಿರುಪತಿಯ ಎರಡು ಘಾಟ್ಗಳು ಬಂದ್ ಆಗಿದ್ದು, ದುರಸ್ತಿ ಕಾರ್ಯ ನಡೆಯುತ್ತಿದೆ. ಮಳೆಯಿಂದ ಯಾತ್ರಾರ್ಥಿಗಳಿಗೆ, ಸ್ಥಳೀಯರಿಗೆ ಬಹಳ ಸಮಸ್ಯೆಯಾಗಿದ್ದು, ಆಡಳಿತ ಮಂಡಳಿ ಯಾತ್ರಾರ್ಥಿಗಳಿಗೆ ಉಚಿತ ಆಹಾರ ಮತ್ತು ವಸತಿಯನ್ನು ನೀಡುತ್ತಿದೆ. ತೀವ್ರ ಮಳೆಯ ವಿಡಿಯೋಗಳು ಎಲ್ಲೆಡೆ ವೈರಲ್ ಆಗಿದ್ದು, ತಿರುಪತಿಗೆ ಜಲದಿಗ್ಭಂದನವಾಗಿದೆಯೇ ಎಂಬ ಭಾವ ಮೂಡಿಸುವಂತಿದೆ. ಆಂಧ್ರಪ್ರದೇಶದಲ್ಲಿ ಮತ್ತಷ್ಟು ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಇದನ್ನೂ ಓದಿ: Tamil Nadu Rain: ತಮಿಳುನಾಡಿನಲ್ಲಿ ಮಳೆಯ ರೌದ್ರಾವತಾರ; ವೆಲ್ಲೂರಿನಲ್ಲಿ ಮನೆ ಒಂದೇ ಕುಟುಂಬದ 9 ಜನ ಸಾವು

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ